Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆಗೂ ಮುನ್ನ ದಲಿತರ ಜಪ ಮಾಡ್ತಿರೋದ್ರ ಹಿಂದಿರೋ ರಣನೀತಿ ಏನು? ಇಲ್ಲಿದೆ ಇನ್‍ಸೈಡ್ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣೆಗೂ ಮುನ್ನ ದಲಿತರ ಜಪ ಮಾಡ್ತಿರೋದ್ರ ಹಿಂದಿರೋ ರಣನೀತಿ ಏನು? ಇಲ್ಲಿದೆ ಇನ್‍ಸೈಡ್ ಸ್ಟೋರಿ

Bengaluru City

ಚುನಾವಣೆಗೂ ಮುನ್ನ ದಲಿತರ ಜಪ ಮಾಡ್ತಿರೋದ್ರ ಹಿಂದಿರೋ ರಣನೀತಿ ಏನು? ಇಲ್ಲಿದೆ ಇನ್‍ಸೈಡ್ ಸ್ಟೋರಿ

Public TV
Last updated: May 22, 2017 8:29 pm
Public TV
Share
2 Min Read
tmk
SHARE

ಬೆಂಗಳೂರು: ಬಿಜೆಪಿ ನಾಯಕರ ದಲಿತರ ಮನೆ ಭೇಟಿ ಹಿಂದೆ ಮೋದಿ-ಷಾ ಮಾಸ್ಟರ್ ಪ್ಲಾನ್ ಇದ್ಯಾ?. ಉತ್ತರಪ್ರದೇಶದದಲ್ಲಿ ವರ್ಕೌಟ್ ಆದ ಜಾತಿ ಲೆಕ್ಕಚಾರ ಕರ್ನಾಟಕದಲ್ಲಿ ವರ್ಕೌಟ್ ಆಗುತ್ತಾ?.. ದಲಿತರ ಮನೆಯಲ್ಲಿ ಯಡಿಯೂರಪ್ಪ ಊಟ ಮಾಡಿದ್ರೆ ಸಿದ್ದರಾಮಯ್ಯರಿಗೇಕೆ ಹೊಟ್ಟೆ ಕಿಚ್ಚು ಗೊತ್ತಾಗ್ತಿಲ್ಲ. ಚುನಾವಣೆಗೂ ಮುನ್ನ ದಲಿತರ ಜಪ ಮಾಡ್ತಿರೋದ್ರ ಹಿಂದಿರೋ ರಣನೀತಿ ಏನು..? ಇದೆಲ್ಲದರ ಇನ್‍ಸೈಡ್ ಸ್ಟೋರಿ ಇಲ್ಲಿದೆ ನೋಡಿ.

ಹೌದು. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಒಂದೇ ಒಂದು ವರ್ಷ ಬಾಕಿ ಉಳಿದಿದೆ. ಮತದಾರನ ಮನಗೆಲ್ಲಲು ರಾಜಕೀಯ ಪಕ್ಷಗಳು ಸರ್ಕಸ್ ನಡೆಸುತ್ತಿದೆ. ಕಾಂಗ್ರೆಸ್, ಜೆಡಿಎಸ್‍ಗೆ ಹೋಲಿಸಿದರೆ ಬಿಜೆಪಿ ಒಂದು ಹೆಜ್ಜೆ ಮುಂದಿದೆ. ತೆರೆಯ ಮರೆಯಲ್ಲೇ ಬಿಜೆಪಿ ರಾಜಕೀಯ ಸಮೀಕ್ಷೆ ಕೂಡ ನಡೆಸುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರ ನಡೆಸಿದ ಜಾತಿ ಸಮೀಕ್ಷೆ ಬಹಿರಂಗವಾಗುವ ಮುನ್ನವೇ ದಲಿತರ ಮನೆಗಳಿಗೆ ಎಡತಾಕುತ್ತಿದೆ.

ಹಾಗೇ ನೋಡಿದ್ರೆ ರಾಜ್ಯದಲ್ಲಿ ಅನ್ಯ ಜಾತಿಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿಯವ್ರ ಪ್ರಾಬಲ್ಯ ಹೆಚ್ಚಾಗೇ ಇದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯವ್ರ ಜನಸಂಖ್ಯೆ 1.08 ಕೋಟಿ ಇದ್ದಾರೆ. ಪರಿಶಿಷ್ಟ ಪಂಗಡದವ್ರ ಸಂಖ್ಯೆ 40.45 ಲಕ್ಷವಿದೆ. ಈ ಹಿಂದೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮತಗಳು ಕೇವಲ ಕಾಂಗ್ರೆಸ್‍ಗೆ ಮಾತ್ರ ಸೀಮಿತ ಅನ್ನೋದು ಸಂಪ್ರದಾಯವಾಗಿತ್ತು. ಆದ್ರೆ ಈಗ ಪರಿಸ್ಥಿತಿ ಹಿಂದಿನಂತಿಲ್ಲ. ಬಿಜೆಪಿ ಕೂಡ ದಲಿತರ ಮನವೊಲಿಕೆಯಲ್ಲಿ ತೊಡಗಿದೆ. ದಲಿತರ ಮನವೊಲಿಕೆಯ ಭಾಗವಾಗಿಯೇ ತುಮಕೂರು ಹಾಗೂ ಚಿತ್ರದುರ್ಗದಲ್ಲಿ ದಲಿತರ ಮನೆಯಲ್ಲಿ ಬಿಎಸ್‍ವೈ ಅಂಡ್ ಟೀಂ ಉಪಹಾರ ಸೇವಿಸಿ, ನಾವೂ ದಲಿತರ ಜೊತೆಯಲ್ಲಿದ್ದೀವಿ ಅಂತ ಸಮಾನತೆ ಸಂದೇಶ ರವಾನಿಸಿದ್ದಾರೆ.

ರಾಜ್ಯದಲ್ಲೂ ಯುಪಿ ಮಾದರಿ ರಾಜತಂತ್ರ ಫಲಿಸುತ್ತಾ..?
ಇತ್ತೀಚೆಗಷ್ಟೇ ಅಂತ್ಯಗೊಂಡ ಉತ್ತರಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ಈಗ ಅದೇ ಬ್ರಹ್ಮಾಸ್ತ್ರವನ್ನು ಕರ್ನಾಟಕದಲ್ಲೂ ಪ್ರಯೋಗಿಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಮೇಲ್ವರ್ಗದ ಜನಸಂಖ್ಯೆ ಶೇ.22 ರಷ್ಟಿದ್ದರೂ ಕೂಡ ಹಿಂದುಳಿದ ವರ್ಗ ಜನಸಂಖ್ಯೆ ಶೇ.18 ಹಾಗೂ ಪರಿಶಿಷ್ಟರ ಜನಸಂಖ್ಯೆ ಶೇ.20 ರಷ್ಟು ಇತ್ತು. ಟಿಕೆಟ್ ಹಂಚಿಕೆ ಹಾಗೂ ಪ್ರಚಾರದ ವೇಳೆ, ಇವೆರಡೂ ವರ್ಗಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡ ಪರಿಣಾಮವಾಗಿ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೇರಿತು.

ಈಗ ಅದೇ ತಂತ್ರವನ್ನು ಕರ್ನಾಟಕದಲ್ಲೂ ಅನುಸರಿಸಲಾಗ್ತಿದ್ದು, ದಲಿತರ ಮನವೊಲಿಕೆಯಲ್ಲಿ ಬಿಜೆಪಿ ನಾಯಕರು ತೊಡಗಿದ್ದಾರೆ. ಲಿಂಗಾಯತರು, ಒಕ್ಕಲಿಗರಂತೆ ದಲಿತರನ್ನೂ ಕೂಡ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಮೋದಿ ಅಮಿತ್ ಶಾ ಸೂಚನೆ ಮೇರೆಗೆ, ಬಿಎಸ್‍ವೈ ಅಂಡ್ ಟೀಂ ದಲಿತರ ಮನೆಗಳಿಗೆ ಎಡತಾಕುತ್ತಿದೆ ಎಂದು ಹೇಳಲಾಗ್ತಿದೆ.

ಇದ್ರ ನಡುವೆ ಬಿಜೆಪಿ ಮಾಜಿ ಡಿಸಿಎಂ ಆರ್. ಅಶೋಕ್ ನಿವಾಸಕ್ಕೆ ಮಾದಾರ ಚೆನ್ನಯ್ಯ ಸ್ವಾಮೀಜಿ ಭೇಟಿ ನೀಡಿದ್ದು ಈ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ. ಬಿಜೆಪಿಯ ಈ ರಣನೀತಿ ಕಾಂಗ್ರೆಸ್‍ಗೆ ಅಚ್ಚರಿ ಮೂಡಿಸಿದೆ. ಎಲ್ಲೂ ಕೂಡ ದಲಿತರ ಮತಗಳು ಕೈತಪ್ಪದಂತೆ ಎಚ್ಚರಿಕೆ ವಹಿಸಲು ಕಾಂಗ್ರೆಸ್ ಕೂಡ ಎಚ್ಚರಿಕೆ ವಹಿಸಲು ತಯಾರಾಗ್ತಿದೆ.

ಮುಂಬರುವ ಚುನಾವಣೆಯಲ್ಲಿ ದಲಿತರ ಮತಗಳು ನಿರ್ಣಾಯಕವಾಗಿರುವುದರಿಂದ ಕಾಂಗ್ರೆಸ್ ಕೂಡ ರಣತಂತ್ರಕ್ಕೆ ರೆಡಿಯಾಗ್ತಿದೆ. ಇದೆಲ್ಲಾ ಚುನಾವಣಾ ರಣತಂತ್ರ ಮಾತ್ರ. ಆದರೆ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರುಗಳು ದಲಿತರ ಮನೆಯಲ್ಲಿ ಊಟ ಮಾಡಿ, ವಾಸ್ತವ್ಯ ಹೂಡಿದ ಮಾತ್ರಕ್ಕೆ ದಲಿತರು ಉದ್ಧಾರಾ ಆಗುತ್ತಾರಾ? ರಾಜಕೀಯ ಪಕ್ಷಗಳ ಈ ತಂತ್ರ ವರ್ಕೌಟ್ ಆಗುತ್ತಾ ಎನ್ನುವ ಪ್ರಶ್ನೆಗಳಿಗೆ 2019ರ ವಿಧಾನಸಭಾ ಚುನಾವಣೆ ಉತ್ತರ ನೀಡಲಿದೆ.

tmk bjkp leaders 4

tmk bjkp leaders 7

tmk bjkp leaders 6

tmk bjkp leaders 5

TAGGED:bjpcongressdalitelectionkarnatakaಅಮಿತ್ ಶಾಕರ್ನಾಟಕಕಾಂಗ್ರೆಸ್ಚುನಾವಣೆದಲಿತರುನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
8 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
20 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
28 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
54 minutes ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
1 hour ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?