ಬೆಂಗಳೂರು: ನಗರದ ಜಾಲಹಳ್ಳಿಯ ಭಾರತಿ ಚಿತ್ರಮಂದಿರದಲ್ಲಿ ಕಾಳಾ ಸಿನಿಮಾ ನೋಡಿದ ಕೆಲವರಿಗೆ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕು ಪ್ರದರ್ಶನ ಮಾಡಿದ್ದಾರೆ.
ಕನ್ನಡಪರ ಸಂಘಟನೆಗಳ ಸಾಕಷ್ಟು ವಿರೋಧದ ನಡುವೆಯು ಕೆಲವು ಚಿತ್ರ ಮಂದಿರಗಳಲ್ಲಿ ರಜಿನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಗೊಂಡಿದೆ. ಪ್ರತಿಭಟನೆ ಮಾಡಿದರೆ ಪೊಲೀಸರು ಬಂಧಿಸುತ್ತಾರೆ ಎಂದು ಚಿತ್ರ ನೋಡಿ ಹೊರ ಬಂದ ಕೆಲವರಿಗೆ ಮೈಸೂರು ಪೇಟಾ, ಶಾಲು, ಹೂವಿನ ಹಾರ ಹಾಕಿ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕವಾಡಿದ್ದಾರೆ.
ಸನ್ಮಾನ ಮಾಡಿದ ನಂತರ ಮಾತನಾಡಿದ ಹೋರಾಟಗಾರರು, ಕನ್ನಡ ದ್ರೋಹಿಗಳನ್ನು ಹುಡುಕುತ್ತಾ ಇದ್ದೀವಿ, ಅದು ನೀವೆ ಅಂತಾ ಸನ್ಮಾನ ಮಾಡಿದ್ದೇವೆ, ಸ್ವಾಭಿಮಾನಕ್ಕಿಂತ ಸಿನಿಮಾನೇ ಜಾಸ್ತಿ ಆಯಿತಾ ಅಂತಾ ಪ್ರಶ್ನಿಸಿದ್ದೇವೆ. ಸನ್ಮಾನ ಸ್ವೀಕರಿಸಿದ ಕೆಲ ಪ್ರೇಕ್ಷಕರು ಕ್ಷಮೆಯಾಚಿಸಿದರು. ಪೊಲೀಸರು ಸನ್ಮಾನ ಮಾಡುತ್ತಾರೆ ಎಂದು ಹೋರಾಟಗಾರರಿಗೆ ಅನುವು ಮಾಡಿಕೊಟ್ಟರು ಅಂತಾ ಹೇಳಿದರು.
ಜ್ಯುರಾಸಿಕ್ ವಲ್ರ್ಡ್ ಹಾಲಿವುಡ್ ಸಿನಿಮಾ ಟಿಕೆಟ್ ನೀಡಿ ಕಾಳಾ ಚಿತ್ರವನ್ನು ನಗರದ ಊರ್ವಶಿ ಚಿತ್ರಮಂದಿರದಲ್ಲಿ ನಿನ್ನೆ ಪ್ರದರ್ಶನ ಮಾಡಿದ್ದು ಪ್ರೇಕ್ಷಕರ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನೂ ಓದಿ:ಜ್ಯುರಾಸಿಕ್ ವರ್ಲ್ಡ್ ಟಿಕೆಟ್ ನೀಡಿ ಕಾಲಾ ಚಿತ್ರ ಪ್ರದರ್ಶನ: ರೊಚ್ಚಿಗೆದ್ದ ಪ್ರೇಕ್ಷಕರಿಂದ ಥಿಯೇಟರ್ ಗೆ ಮುತ್ತಿಗೆ