ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿ ಮತ್ತೆ ಆಸ್ಪತ್ರೆಗೆ ದಾಖಲು

Public TV
1 Min Read
cng sulvadi admit collage copy

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆದಿದ್ದ 6 ಮಂದಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಂ.ಜಿ.ದೊಡ್ಡಿ ಗ್ರಾಮದ ರೇಖಾ, ಪಳನಿಯಮ್ಮ, ಮಲ್ಲಿಗೆ, ವೀರಮ್ಮ, ಕಮಲ ಮತ್ತು ಪಳನಿ ಎಂಬವರಿಗೆ ಹೊಟ್ಟೆ ಉರಿ, ಎದೆ ನೋವು, ತಲೆ ನೋವು, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

YDR VILLAGE copy

ಇತ್ತ ಸುಳ್ವಾಡಿ ದುರಂತ ಇನ್ನು ಹಸಿಯಾಗಿರುವಾಗಲೇ ಅಂಥದ್ದೇ ಪ್ರಕರಣವೊಂದು ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಿ ಮಾರಮ್ಮನ ಪ್ರಸಾದದಲ್ಲಿ ವಿಷ ಬೆರೆಸಿದರೆ, ಇಲ್ಲಿ ಕುಡಿಯುವ ನೀರಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ್ದಾರೆ. ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದ ಹೊರಭಾಗದಲ್ಲಿರುವ ಬಾವಿಯ ನೀರು ಶಾಖಾಪುರ ಹಾಗೂ ತೆಗ್ಗಳ್ಳಿ ಗ್ರಾಮಕ್ಕೆ ಫಿಲ್ಟರ್ ಅಗಿ ಸರಬರಾಜಾಗ್ತಿತ್ತು. ಆದ್ರೆ ಯಾರೋ ಕಿಡಿಗೇಡಿಗಳು ಈ ನೀರಿಗೆ ಭತ್ತದ ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕ ಬೆರೆಸಿದ್ದಾರೆ.

YGR ASWATH AV 4 copy

ಈ ನೀರು ಕುಡಿದ ಪಂಪ್ ಆಪರೇಟರ್ ತಾಯಿ ನಾಗಮ್ಮ ಸೇರಿ ಐವರು ಅಸ್ವಸ್ಥರಾಗಿದ್ದು ಕೆಂಬಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಪಂಪ್ ಆಪರೇಟರ್ ಮೌನೇಶ್ ನೀರು ಪೂರೈಕೆ ಸ್ಥಗಿತಗೊಳಿಸಿ ಗ್ರಾಮದಲ್ಲಿ ಯಾರು ಈ ನೀರು ಕುಡಿಯಬೇಡಿ ಎಂದು ಡಂಗೂರ ಸಾರಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಸದ್ಯ ಬಾವಿಯ ನೀರು ಖಾಲಿ ಮಾಡಿಸಲಾಗ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *