ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್‍ನಲ್ಲಿ ಮತ್ತೆ ಪೂಜೆ

Public TV
1 Min Read
HBL POOJA 3

ಹುಬ್ಬಳ್ಳಿ: ವಾಸ್ತು ಗುರು ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್ ನಲ್ಲಿ ಇಂದು ಮತ್ತೆ ಪೂಜೆ ನಡೆದಿದೆ.

ಮಂಗಳವಾರ ಮತ್ತು ಇಂದು ಹೋಮ, ಹವನ, ಯಜ್ಞಗಳನ್ನು ಶಾಸ್ತ್ರಿಗಳು ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಉಣಕಲ್ ಕೆರೆಯ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್‍ನಲ್ಲಿ ಅಗೋರ, ಹೋಮ, ಉದಕ ಶಾಂತಿ, ಸುದರ್ಶನ ಹೋಮ,ಗೋ ಪೂಜೆ, ಅಕಲಾ ಪೂಜೆ ನೆರವೇರಿಸುತ್ತಿದ್ದಾರೆ.

HBL POOJA 1

ಕೊಲೆ ನಡೆದ ಸ್ಥಳದಲ್ಲೇ ಮತ್ತೆ ಮತ್ತೆ ಪೂಜೆ ಪುನಸ್ಕಾರಗಳನ್ನು ಪ್ರೆಸಿಡೆಂಟ್ ಹೋಟೆಲ್ ಸಿಬ್ಬಂದಿ ಮಾಡುತ್ತಿದ್ದಾರೆ. ಸರಳ ವಾಸ್ತು ಖ್ಯಾತ ತಜ್ಞ ಮೃತಪಟ್ಟಿದ್ದನ್ನು ಅಪಶಕುನ ಎಂದುಕೊಂಡರೇ ಹೋಟೆಲ್ ಮಾಲೀಕರು ಈ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದಬಂದಿದೆ. ಇದನ್ನೂ ಓದಿ: 5 ಎಕ್ರೆ ಜಾಗಕ್ಕೆ ಕಿರಿಕ್ – ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್

HBL POOJA

ಜುಲೈ 8ರಂದು ಹುಬ್ಬಳ್ಳಿ ಖ್ಯಾತ ಪುರೋಹಿತರನ್ನು ಕರೆಯಿಸಿ ಗುರೂಜಿ ಕೊನೆಯುಸಿರೆಳೆದ ಸ್ಥಳದಲ್ಲೇ ಸುದರ್ಶನ ಹೋಮ ಮಾಡಿಸಿದ್ದರು. ಇಬ್ಬರು ಪುರೋಹಿತರು ಆಗಮಿಸಿ ಪೂಜೆಯನ್ನು ನೆರವೇರಿಸಿಕೊಟ್ಟಿದ್ದರು. ಭಯ ದೂರಮಾಡಲು ಮತ್ತು ಹೋಟೆಲ್ ಶುದ್ಧಗೊಳಿಸಲು ಹೋಮ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿತ್ತು. ಇದನ್ನೂ ಓದಿ: ವಾಸ್ತುಗುರೂಜಿ ಕೊಲೆ ಬಗ್ಗೆ ಹಂತಕರ ತಪ್ಪೊಪ್ಪಿಗೆ – ಸಂಧಾನ ನೆಪದಲ್ಲಿ ದಾಖಲೆ ಜೊತೆ ಚಾಕು ತಂದು ಹತ್ಯೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *