Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ

Latest

ಭ್ರಷ್ಟಾಚಾರದ ವಿರುದ್ಧ ಸಮರ – 22 ತೆರಿಗೆ ಅಧಿಕಾರಿಗಳು ವಜಾ

Public TV
Last updated: August 26, 2019 1:37 pm
Public TV
Share
2 Min Read
nirmala sitharaman
SHARE

– ಇತ್ತೀಚೆಗಷ್ಟೇ 27 ಅಧಿಕಾರಿಗಳನ್ನು ವಜಾ ಮಾಡಲಾಗಿತ್ತು

ನವದೆಹಲಿ: ಭ್ರಷ್ಟಾಚಾರ ಹಾಗೂ ಗಂಭೀರ ಅಕ್ರಮ ಎಸಗಿದ ಆರೋಪ ಹೊಂದಿದ್ದ 22 ತೆರಿಗೆ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ವಜಾ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ಕಿತ್ತೊಗೆಯಲು ಪ್ರಧಾನಿ ಮೋದಿಯವರ ವ್ಯವಸ್ಥೆಯ ಶುದ್ಧೀಕರಣದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗಷ್ಟೇ ಹಣಕಾಸು ಸಚಿವಾಲಯ 12 ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ಸೇರಿ ಕಂದಾಯ ಇಲಾಖೆಯ ಒಟ್ಟು 27 ಹಿರಿಯ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಂಡಿತ್ತು.

Central Board of Indirect Taxes & Customs (CBIC) has compulsorily retired yet another 22 senior officers of the rank of Superintendent/AO under Fundamental Rule 56 (J) in the public interest, due to corruption and other charges. pic.twitter.com/848fScXJdG

— ANI (@ANI) August 26, 2019

ಇದೀಗ ಕೇಂದ್ರ ನೇರ ತೆರಿಗೆ ಮತ್ತು ಸೀಮಾ ಸುಂಕ ಮಂಡಳಿ(ಸಿಬಿಐಸಿ) ಇದೀಗ ಸುಪರಿಂಟೆಂಡೆಂಟ್ ಹಾಗೂ ಆಡಳಿತಾಧಿಕಾರಿ ದರ್ಜೆಯ 22 ಹಿರಿಯ ಅಧಿಕಾರಿಗಳನ್ನು ಮೂಲಭೂತ ನಿಯಮ 56(ಜೆ) ಅಡಿ ಭಷ್ಟಾಚಾರ, ಇತರ ಆರೋಪಗಳು ಹಾಗೂ ಸಿಬಿಐ ಬಲೆಗೆ ಬಿದ್ದಿದ್ದರಿಂದ ಅವರು ಕಡ್ಡಾಯ ನಿವೃತ್ತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ಈ ಮೂಲಕ ಭ್ರಷ್ಟಾಚಾರ ಹಾಗೂ ಇತರ ಗಂಭೀರ ಆರೋಪಗಳನ್ನು ಮಾಡಿದ ಅಧಿಕಾರಿಗಳಿಗೆ ಕೇವಲ ನೋಟಿಸ್ ಹಾಗೂ ಸಮನ್ಸ್ ನೀಡುವ ಸಂಸ್ಕೃತಿಗೆ ಸರ್ಕಾರ ತಿಲಾಂಜಲಿ ಹಾಡಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಈ ಕುರಿತು ಖಡಕ್ ಎಚ್ಚರಿಕೆ ನೀಡಿದ್ದು, ಅಕ್ಟೋಬರ್ 1 ರಿಂದ ಆದಾಯ ತೆರಿಗೆ ಅಧಿಕಾರಿಗಳ ಎಲ್ಲ ನೋಟಿಸ್, ಸಮನ್ಸ್ ಹಾಗೂ ಆದೇಶಗಳು ಕೇಂದ್ರೀಕೃತ ಕಂಪ್ಯೂಟರ್ ವ್ಯವಸ್ಥೆಯ ಮೂಲಕ ನೀಡಲಾಗುವುದು. ಅಲ್ಲದೆ, ಕಂಪ್ಯೂಟರ್ ದಾಖಲೆಗಳು ವಿಶೇಷ ಗುರುತಿನ ಸಂಖ್ಯೆಯನ್ನು ಹೊಂದಿರುತ್ತವೆ ಎಂದು ತಿಳಿಸಿದ್ದಾರೆ.

Income Tax department

ಕಂಪ್ಯೂಟರ್ ಜನರೇಟೆಡ್ ಡಿಐಎನ್ ಇಲ್ಲದೆ, ನಡೆಸಲಾಗುವ ಯಾವುದೇ ಸಂವಹನ ಕಾನೂನಿನಿಂದ ಹೊರಗುಳಿಯಲಿದೆ. ಅಲ್ಲದೆ, ಯಾವುದೇ ಕಂಪನಿ ಪ್ರತಿಕ್ರಿಯೆ ನೀಡಿದ ಮೂರು ತಿಂಗಳೊಳಗೆ ತೆರಿಗೆ ಇಲಾಖೆಯು ಆ ಪ್ರಕರಣವನ್ನು ನಿರ್ಧರಿಸದಿದ್ದಲ್ಲಿ ತೆರಿಗೆ ನೋಟಿಸ್ ತನ್ನ ಮೌಲ್ಯವನ್ನು ಕಳೆದುಕೊಳ್ಳಲಿದೆ ಎಂದು ಕಳೆದ ಬಾರಿಯ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮ್ ತಿಳಿಸಿದ್ದರು.

ಇತ್ತೀಚೆಗೆ ನಿವೃತ್ತಿ ಹೊಂದಿದ ಪರೋಕ್ಷ ತೆರಿಗೆ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳನ್ನು ಈ ಹಿಂದೆ ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸಿದ್ದರು. ಇದರಲ್ಲಿ ಇನ್ನೂ ಕೆಲವರ ವಿಚಾರಣೆಯನ್ನು ನಡೆಸಲಾಗುತ್ತಿದೆ.

22 ಅಧಿಕಾರಿಗಳಲ್ಲಿ 9 ಮಂದಿ ಭೋಪಾಲ್ ಮೂಲದವರಾಗಿದ್ದು, ಇವರು ಸಿಗರೇಟ್ ತಯಾರಿಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಸಿಗರೇಟ್‍ಗಳನ್ನು ರಹಸ್ಯವಾಗಿ ಉತ್ಪಾದಿಸಲು ಅನುಮತಿ ನೀಡಿರುವುದು ಮತ್ತು ಅವುಗಳನ್ನು ಸರಬರಾಜು ಮಾಡಲು ಅನುಕೂಲ ಮಡಿಕೊಡುತ್ತಿದ್ದ ಎಂಬ ಆರೋಪ ಎದುರಿಸುತ್ತಿದ್ದಾರೆ.

1200px Income Tax Department May 2018

2003ರಲ್ಲಿ ಬೆಂಗಳೂರಿನ ಇನ್ನೊಬ್ಬ ಅಧಿಕಾರಿ ಮೊಬೈಲ್ ಸ್ಮಗ್ಲಿಂಗ್ ಹಾಗೂ ಕಂಪ್ಯೂಟರ್ ಬಿಡಿ ಭಾಗಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ್ದವರಿಗೆ ಸಹಾಯ ಮಾಡಿದ್ದರು. ಹೀಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯವು ಈ ವಸ್ತುಗಳನ್ನು ವಶಪಡಿಸಿಕೊಂಡು ಅಧಿಕಾರಿಯನ್ನು ವಜಾ ಮಾಡಲಾಗಿತ್ತು.

ದೆಹಲಿಯ ಇನ್ನೊಂದು ಪ್ರಕರಣದಲ್ಲಿ, ದೆಹಲಿಯ ಜಿಎಸ್‍ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ತೆರಿಗೆ ಅಧಿಕಾರಿಯೊಬ್ಬರು ಕಳೆದ ವರ್ಷ ದುಬೈನಿಂದ 1,200 ಗ್ರಾಂ. ತೂಕದ 10 ಬಾರ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಇವರನ್ನು ಕಸ್ಟಮ್ಸ್ ಅಧಿಕಾರಿಗಳು ಹಿಡಿದಿದ್ದರು.

ಹಣಕಾಸು ಇಲಾಖೆಯ 56 (ಜೆ) ನಿಯಮದ ಹಲವು ದಶಕಗಳಿಂದ ಅಸ್ವಿತ್ವದಲ್ಲಿದ್ದು ಇಲ್ಲಿಯವರೆಗೆ ಪರಿಣಾಮಕಾರಿಯಾಗಿ ಜಾರಿಯಾಗಿರಲಿಲ್ಲ. ಆದರೆ ಈಗ ಈ ನಿಯಮದ ಅಡಿ ನಿವೃತ್ತಿ ಪಡೆಯಲು ಸೂಚಿಸಿದ್ದು ಮಹತ್ವ ಎನಿಸಿಕೊಂಡಿದೆ.

TAGGED:cbifinance ministryNirmala SitharamanOfficers dismissedPublic TVtaxಅಧಿಕಾರಿಗಳು ವಜಾತೆರಿಗೆನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಸಿಬಿಐಹಣಕಾಸು ಸಚಿವಾಲಯ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
1 minute ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
3 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
15 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
28 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?