ನವದೆಹಲಿ: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆಯನ್ನು ಕೇಂದ್ರ ಪ್ರಾರಂಭಿಸಿದೆ.
ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು. ಈ ಯುವ ಯೋಧರನ್ನು ‘ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಈ ಹೊಸ ನೇಮಕಾತಿಯನ್ನು ಕೇಂದ್ರ ಮಂಗಳವಾರ ಅನಾವರಣ ಮಾಡಿದೆ.
- Advertisement 2
- Advertisement 3
ಅಗ್ನಿಪಥ್ ಯೋಜನೆಯನ್ನು ಈ ಹಿಂದೆ ‘ಟೂರ್ ಆಫ್ ಡ್ಯೂಟಿ’ ಎಂದು ಕರೆಯಲಾಗುತ್ತಿತ್ತು. ಇದನ್ನು ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಾರಂಭಿಸಿದ್ದರು. ಕಳೆದ 2 ವರ್ಷಗಳ ವ್ಯಾಪಕ ಚರ್ಚೆಗಳ ಬಳಿಕ ಇದೀಗ ಭದ್ರತಾ ಸಮಿತಿ ಅನುಮತಿ ನೀಡಿದ ಬಳಿಕ ನೇಮಕಾತಿಯನ್ನು ಘೋಷಿಸಲಾಗಿದೆ.
- Advertisement 4
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದೊಂದು ದೊಡ್ಡ ಬದಲಾವಣೆ ತರಲಿದೆ. ರಾಷ್ಟ್ರದ ಯುವ ಜನರಿಗೆ ಅವಕಾಶಗಳನ್ನು ತೆರೆಯುತ್ತದೆ. ಅಗ್ನಿಪಥ್ ಯೋಜನೆ ಭಾರತದ ಭದ್ರತೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್ – ಇದು ಸ್ವಾಮಿ ದೂರಿನ ಕರಾಮತ್ತು
ಅರ್ಹತೆ:
17.5 ರಿಂದ 21 ವರ್ಷದೊಳಗಿನ ವಯೋಮಿತಿಯಲ್ಲಿ ಸುಮಾರು 30,000-40,000 ರೂ. ವೇತನದಲ್ಲಿ ಸೈನಿಕರನ್ನು ನೇಮಿಸಿಕೊಳ್ಳಲಾಗುವುದು. ಯುವತಿಯರು ಕೂಡ ನೇಮಕಾತಿ ಯೋಜನೆಗೆ ಅರ್ಹರಾಗಿರುತ್ತಾರೆ.
ಅಗ್ನಿವೀರ್ಗಳು ಆಯಾ ವಿಭಾಗಕ್ಕೆ ಅನ್ವಯವಾಗುವಂತೆ ಸಶಸ್ತ್ರ ಪಡೆಗಳಲ್ಲಿ ದಾಖಲಾತಿಗಾಗಿ ನಿಗದಿಪಡಿಸಿದ ವೈದ್ಯಕೀಯ ಅರ್ಹತೆಯ ಷರತ್ತುಗಳನ್ನು ಪೂರೈಸಬೇಕು.
ಅಗ್ನಿಪಥ್ ಅಡಿಯಲ್ಲಿ ನೇಮಕಗೊಂಡ ಸೈನಿಕರನ್ನು 4 ವರ್ಷಗಳ ನಂತರ ಸೇವೆಯಿಂದ ಬಿಡುಗಡೆ ಮಾಡಲಾಗುತ್ತದೆ. ಆದರೂ ಹೊಸ ವ್ಯವಸ್ಥೆಯ ಮತ್ತೊಂದು ಸುತ್ತಿನ ಸ್ಕ್ರೀನಿಂಗ್ ಬಳಿಕ ಅವರಲ್ಲಿ ಸುಮಾರು ಶೇ.25 ರಷ್ಟು ಸೈನಿಕರನ್ನು ಉಳಿಸಿಕೊಳ್ಳುವ ಅವಕಾಶವನ್ನು ಇರುತ್ತದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ʼಸೂಪರ್ ಚೀಫ್ ಜಸ್ಟಿಸ್ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ
ದಾಖಲಾತಿ:
ಅಗ್ನಿವೀರ್ಗಳನ್ನು ಮಾನ್ಯತೆ ಪಡೆದ ತಾಂತ್ರಿಕ ಸಸ್ಥೆಗಳಾದ ಕೈಗಾರಿಕಾ ತರಬೇತಿ ಸಂಸ್ಥೆಗಳು ಹಾಗೂ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟುಗಳಿಂದ ವಿಶೇಷ ರ್ಯಾಲಿ ಹಾಗೂ ಸಂದರ್ಶನಗಳ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಸಂಭಾವನೆ ಮತ್ತು ಪ್ರಯೋಜನಗಳು:
ಅಗ್ನಿವೀರ್ ಸೇವೆಯಲ್ಲಿ ಉತ್ತಮ ಮಾಸಿಕ ಪ್ಯಾಕೇಜ್ ನೀಡಲಾಗುತ್ತದೆ. 4 ವರ್ಷಗಳ ನಿಶ್ಚಿತ ಅವಧಿ ಪೂರ್ಣಗೊಂಡ ಬಳಿಕ ಅಗ್ನಿವೀರ್ಗಳಿಗೆ ಒಂದು ಬಾರಿಯ ಸೇವಾ ನಿಧಿ ಪ್ಯಾಕೇಜ್ ಪಾವತಿಸಲಾಗುತ್ತದೆ ಎಂದು ಅಧಿಕೃತವಾಗಿ ಹೇಳಿಕೆ ತಿಳಿಸಿದೆ.