Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

Latest

ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

Public TV
Last updated: January 12, 2022 6:56 am
Public TV
Share
3 Min Read
Vodafone Idea Ltd
SHARE

– ಸರ್ಕಾರಕ್ಕೆ ಶೇ.36ರಷ್ಟು ಷೇರನ್ನು ಮಾರಾಟ ಮಾಡಲು ಮುಂದಾದ ವಿಐಎಲ್‌
– ಎಜಿಆರ್‌ ಸುಳಿಯಲ್ಲಿ ಸಿಲುಕಿ ಷೇರು ಮಾರಾಟ

ನವದೆಹಲಿ: ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯಲ್ಲಿ ಈಗ ಭಾರತ ಸರ್ಕಾರ ಅತಿ ದೊಡ್ಡ ಪಾಲುದಾರನಾಗಿ ಹೊರಹೊಮ್ಮಿದೆ.

ಹೌದು. ಭಾರತ ಸರ್ಕಾರವೇ ಷೇರುಗಳನ್ನು ಖರೀದಿಸಿಲ್ಲ ಬದಲಾಗಿ ವಿಐಎಲ್‌ ಕಂಪನಿಯೇ ಶೇ.36 ರಷ್ಟು ಷೇರನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡುವುದಾಗಿ ಘೋಷಿಸಿದೆ.

ಸಾಲದ ಸುಳಿಯಲ್ಲಿರುವ ವಿಐಎಲ್ ಕಂಪನಿ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪಾವತಿಸಬೇಕಿದೆ. ಅಂದಾಜಿನ ಪ್ರಕಾರ ಕಂಪನಿ ಬಡ್ಡಿಯ ಮೊತ್ತವಾಗಿ ಸುಮಾರು 16,000 ಕೋಟಿ ರೂ.ವನ್ನು ಪಾವತಿಸಬೇಕಿದೆ. ಇಷ್ಟೊಂದು ಮೊತ್ತವನ್ನು ಪಾವತಿಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತನ್ನ ಬಳಿ ಇರುವ ಷೇರನ್ನೇ ಮಾರಾಟ ಮಾಡಲು ಆಡಳಿತ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

Vodafone Idea Ltd 1

ಬಾಂಬೆ ಸ್ಟಾಕ್‌ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ಮಾಹಿತಿಯಲ್ಲಿ 16,000 ಕೋಟಿ ರೂ. ಬಡ್ಡಿ ಮೊತ್ತ ಪಾವತಿ ಸಂಬಂಧ ಸರ್ಕಾರಕ್ಕೆ 10 ರೂ. ಮುಖಬೆಲೆಗೆ 1 ಷೇರನ್ನು ಮಾರಾಟ ಮಾಡಲು ಆಡಳಿತ ಮಂಡಳಿಯ ನಿರ್ದೇಶಕರು ಅನುಮೋದಿಸಿದ್ದಾರೆ ಎಂದು ವಿಐಎಲ್‌ ತಿಳಿಸಿದೆ. ಶೇ.36 ರಷ್ಟು ಷೇರನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡಿದ ಬಳಿಕ ವಿಐಎಲ್‌ನಲ್ಲಿ ವೊಡಾಫೋನ್ ಗ್ರೂಪ್ ಶೇ.28.5 ಆದಿತ್ಯ ಬಿರ್ಲಾ ಗ್ರೂಪ್‌ ಶೇ.17.8 ರಷ್ಟು ಷೇರನ್ನು ಉಳಿಸಿಕೊಳ್ಳಲಿದೆ.

ಈ ನಿರ್ಧಾರ ಪ್ರಕಟವಾಗುತ್ತಿದಂತೆ ವಿಐಎಲ್‌ ಷೇರು ಬೆಲೆ ಭಾರೀ ಕುಸಿತ ಕಂಡಿದೆ. ಇಂದು 3.05 ರೂ. ಕುಸಿತಗೊಂಡು ಅಂತಿಮವಾಗಿ 11.80 ರೂ.ಯಲ್ಲಿ ಇಂದಿನ ವ್ಯವಹಾರ ಮುಗಿಸಿದೆ. ಇದನ್ನೂ ಓದಿ: ಶೇ.100 ಎಫ್‍ಡಿಐಗೆ ಸರ್ಕಾರದ ಅನುಮತಿ ಬೇಕಿಲ್ಲ – ಟೆಲಿಕಾಂ ಕಂಪನಿಗಳಿಗೆ ಹಲವು ಕೊಡುಗೆ ನೀಡಿದ ಕೇಂದ್ರ

SUPREME COURT

ಬಾಕಿ ಎಷ್ಟಿದೆ?
ಎಜಿಆರ್ ಪ್ರಕರಣದಲ್ಲಿ ವೊಡಾಫೋನ್ ಐಡಿಯಾ ಲಿಮಿಟೆಡ್ ಕಂಪನಿ ಒಟ್ಟು 58,254 ಕೋಟಿ ರೂ.ವನ್ನು ಪಾವತಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕಂಪನಿ ಕೇವಲ 7,584 ಕೋಟಿ ರೂ. ಪಾವತಿಸಿದ್ದು ಇನ್ನೂ 50,399 ಕೋಟಿ ರೂ. ಪಾವತಿಸಬೇಕಿದೆ. ಸುಪ್ರೀಂ ಕೋರ್ಟ್‌ 2031ರ ಒಳಗಡೆ ಈ ಹಣವನ್ನು ಪಾವತಿಸಬೇಕು ಎಂದು ಕಂಪನಿಗಳಿಗೆ ಗಡುವು ನೀಡಿದೆ.

FI0De2fVcAIYVk8

ಏರ್‌ಟೆಲ್‌ ಕಂಪನಿಯೂ ಎಜಿಆರ್‌ ಮೊತ್ತವನ್ನು ಸರ್ಕಾರಕ್ಕೆ ಪಾವತಿ ಮಾಡಬೇಕಿದೆ. ಆದರೆ ನಾನು ಸರ್ಕಾರಕ್ಕೆ ತನ್ನ ಷೇರನ್ನು ಮಾರಾಟ ಮಾಡುವುದಿಲ್ಲ ಎಂದು ಕಂಪನಿ ತಿಳಿಸಿದೆ.

FI0DfdJVEAI7guS

ಏನಿದು ಎಜಿಆರ್?:
ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ. ಇದನ್ನೂ ಓದಿ: ಡಿಸೆಂಬರ್ 1 ರಿಂದ ಜಿಯೋ ದುಬಾರಿ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

MOBILE PHONE TOWER

ನುಡಿದಂತೆ ನಡೆದ ಬಿರ್ಲಾ
ಈ ಹಿಂದೆ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯಲ್ಲಿ ತಾವು ಹೊಂದಿರುವ ಷೇರುಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವುದಾಗಿ ಹೇಳಿದ್ದರು. ಬಿರ್ಲಾ ಅವರು ಕಂಪನಿಯಲ್ಲಿ ಶೇ. 27ರಷ್ಟು ಷೇರು ಹೊಂದಿದ್ದಾರೆ.

Kumar Mangalam Birla vil

ಕೇಂದ್ರ ಸರ್ಕಾರದ ನಮಗೆ ಏನಾದರೂ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವೊಡಾಫೋನ್, ಐಡಿಯಾದ ಅಧ್ಯಾಯ ಮುಕ್ತಾಯವಾಗಲಿದೆ. ದಿವಾಳಿಯಾದ ನಂತರವೂ ನಾವು ಹಣ ಹೂಡುವುದರಲ್ಲಿ ಅರ್ಥವಿಲ್ಲ ಹೀಗಾಗಿ ನಾವು ಮಳಿಗೆಗಳನ್ನು ಮುಚ್ಚುತ್ತೇವೆ ಎಂದು ಬಿರ್ಲಾ ಸ್ಪಷ್ಟಪಡಿಸಿದ್ದರು. ಈ ಸಂಬಂಧ ಬಿರ್ಲಾ ಅವರು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ಜೂನ್ 7ರಂದು ಪತ್ರ ಬರೆದಿದ್ದರು. ಸರ್ಕಾರ ಮಾತ್ರ ಅಲ್ಲದೆ ವಿಐಎಲ್ ಕಂಪನಿಯನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಸರ್ಕಾರ ಹೇಳುವ ಯಾವುದೇ ಕಂಪನಿಗೆ ಕೂಡ ಷೇರು ವರ್ಗಾವಣೆ ಮಾಡುವುದಾಗಿ ತಿಳಿಸಿದ್ದರು.

ಸರ್ಕಾರ ಹಾಕಿರುವ ಎಜಿಆರ್ ಲೆಕ್ಕ ಸರಿಯಿಲ್ಲ ಎಂದು ಎಂದು ವಿಐಎಲ್ ಸೇರಿದಂತೆ ಟೆಲಿಕಾಂ ಕಂಪನಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಕಂಪನಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕಳೆದ ವರ್ಷ ತಿರಸ್ಕರಿಸಿ 10 ವರ್ಷದ ಒಳಗಡೆ ಪಾವತಿಸಬೇಕು ಎಂದು ಗಡುವು ನೀಡಿತ್ತು.

ವಿಐಎಲ್ ಕಂಪನಿಗೆ 25 ಸಾವಿರ ಕೋಟಿ ರೂ. ಬಂಡವಾಳ ಸಂಗ್ರಹಿಸಲು ಕಂಪನಿಯ ಆಡಳಿತ ಮಂಡಳಿ 2020ರ ಸೆಪ್ಟೆಂಬರ್ ನಲ್ಲಿ ಅನುಮತಿ ನೀಡಿತ್ತು. ಆದರೆ ಅಷ್ಟು ಮೊತ್ತವನ್ನು ಸಂಗ್ರಹಿಸಲು ಕಂಪನಿ ವಿಫಲವಾಗಿತ್ತು.

TAGGED:AGRindiaSharetelecomVodafoneಎಜಿಆರ್ಟೆಲಿಕಾಂಭಾರತ ಸರ್ಕಾರವೊಡಾಫೋನ್ಷೇರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
30 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
31 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
37 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
47 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
51 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?