Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಎಂ.ಬಿ ಪಾಟೀಲ್

Bengaluru City

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಎಂ.ಬಿ ಪಾಟೀಲ್

Public TV
Last updated: September 19, 2025 3:49 pm
Public TV
Share
3 Min Read
MB Patil 2
SHARE

ಬೆಂಗಳೂರು/ವಿಜಯಪುರ: ಏರ್‌ಬಸ್-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿನ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವಿಜಯಪುರ| ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಯಾಗಿದ್ದ ಚಿನ್ನಾಭರಣ, ನಗದು ಮಹಾರಾಷ್ಟ್ರದಲ್ಲಿ ಪತ್ತೆ

ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ಬಸ್ ಮಾದರಿಯ ವಿಮಾನ ಕಾರ್ಯಾಚರಣೆಗಳಿಗಾಗಲಿ, ನೈಟ್ ಲ್ಯಾಂಡಿಂಗ್‌ಗಾಗಲಿ ಅವಕಾಶವಿರಲಿಲ್ಲ. ಆದರೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ನಗರಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. ಜೊತೆಗೆ ಮಹಾರಾಷ್ಟ್ರದ ಸೊಲ್ಲಾಪುರ, ಸಾತಾರಾ ಜಿಲ್ಲೆಗಳೂ ವಿಜಯಪುರಕ್ಕೆ ಹತ್ತಿರವಾಗಿವೆ. ಇತ್ತ ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವು ತಾಲೂಕುಗಳ ಒಡನಾಟವೂ ವಿಜಯಪುರದೊಂದಿಗೆ ಹೆಚ್ಚಾಗಿದೆ. ಹೀಗಾಗಿ ಮುಂದಿನ ಐವತ್ತು ವರ್ಷಗಳ ಅಗತ್ಯವನ್ನು ಪರಿಗಣಿಸಿ, ಹಲವು ಹೆಚ್ಚುವರಿ ಸೌಲಭ್ಯಗಳನ್ನು ಈಗ ಸೇರಿಸಲಾಗುತ್ತಿದೆ ಎಂದಿದ್ದಾರೆ.

ಈಗ ಒದಗಿಸಲಾಗಿರುವ ಹಣದಲ್ಲಿ ನೈಟ್ ಲ್ಯಾಂಡಿಂಗ್ ಸಂಬಂಧಿತ ಕಾಮಗಾರಿಗಳು, ರನ್‌ವೇಯ ಎರಡೂ ಬದಿಗಳಿಗೆ ಪೇವ್ಡ್ ಶೋಲ್ಡರ್ ನಿರ್ಮಾಣ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಬಾಬ್ತಿಗೆ 65 ಕೋಟಿ ರೂ. ವಿನಿಯೋಗಿಸಲಾಗುವುದು. ವಿಜಯಪುರ ವಿಮಾನ ನಿಲ್ದಾಣದಿಂದ ರಾ.ಹೆ.50ಕ್ಕೆ ಸಂಪರ್ಕ ಕಲ್ಪಿಸಲಿರುವ ಮೀಸಲು ರಸ್ತೆಯ ಅಭಿವೃದ್ಧಿಗೆ 52 ಕೋಟಿ ರೂ. ವೆಚ್ಚವಾಗಲಿದೆ. ವಿಮಾನ ನಿಲ್ದಾಣದ ಮೂಲವಿನ್ಯಾಸದಲ್ಲಿ ಇವುಗಳ ಪ್ರಸ್ತಾಪವೇ ಇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ 25 ಕೋಟಿ ರೂ. ವೆಚ್ಚದಲ್ಲಿ ಎರಡು ವಿಮಾನ ರಕ್ಷಣೆ ಮತ್ತು ಅಗ್ನಿಶಾಮಕ ವಾಹನಗಳು (ARFF) ಮತ್ತು ಉಪಕರಣಗಳನ್ನು ಖರೀದಿಸಲಾಗುವುದು. ಮಿಕ್ಕಂತೆ 2.76 ಕೋಟಿ ರೂ.ಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯಗೊಳಿಸುವ ಉಪಕರಣಗಳು (BDDS) ಮತ್ತು 13.09 ಕೋಟಿ ರೂ. ವೆಚ್ಚದಲ್ಲಿ ಡಿವಿಒಆರ್ (ಡೋಪ್ಲರ್ ವೆರಿ ಹೈ ಫ್ರೀಕ್ವೆನ್ಸಿ ಓಮ್ನಿ ರೇಂಜ್) ಉಪಕರಣಗಳ ಖರೀದಿ ಮತ್ತು ಅಳವಡಿಕೆ ಕೆಲಸಗಳು ನಡೆಯಲಿವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ವಿಷ್ಣುವರ್ಧನ್ ಅಭಿಮಾನ ಕ್ಷೇತ್ರದ ಬ್ಲ್ಯೂ ಪ್ರಿಂಟ್‌ ರಿಲೀಸ್

Vijayapura Greenfield Airport: Cabinet clears ₹618.75 crore revised estimate

Karnataka Cabinet approves ₹618.75 crore updated project cost.

Enables infrastructure to handle larger aircraft beyond ATRs.

Big boost to North Karnataka’s air connectivity, jobs & tourism.… pic.twitter.com/Auxk9f73eR

— M B Patil (@MBPatil) September 19, 2025

ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡಗಳು ಕಾಲಕಾಲಕ್ಕೆ ಪರಿಶೀಲಿಸುತ್ತಿದೆ. ಅದು ನಿಗದಿತ ಮಾನದಂಡಗಳಿಗೆ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚುವರಿ ಹಣಕಾಸು ನೆರವು ಕೋರಿ ಈ ವರ್ಷದ ಫೆಬ್ರವರಿಯಲ್ಲೇ ರಾಜ್ಯ ಮಟ್ಟದ ತಾಂತ್ರಿಕ ಸಲಹೆ ಮತ್ತು ಅಂದಾಜು ಪಟ್ಟಿ ಪರಿಶೀಲನಾ ಸಮಿತಿಗೆ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದು ತನ್ನ ಒಪ್ಪಿಗೆ ನೀಡಿದ ನಂತರ ಸಂಪುಟ ಸಭೆಯ ಮುಂದೆ ಬಂದಿತ್ತು ಎಂದು ವಿವರಿಸಿದ್ದಾರೆ.

ವಿಮಾನ ನಿಲ್ದಾಣವನ್ನು ವಿಜಯಪುರ ಮತ್ತು ನೆರೆಹೊರೆಯ ಜಿಲ್ಲೆಗಳಲ್ಲಿ ಕೈಗಾರಿಕಾ, ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ದೂರದೃಷ್ಟಿಯಿಂದ ನಿರ್ಮಿಸಲಾಗುತ್ತಿದೆ. ಈ ನಿಲ್ದಾಣವು ಕಾರ್ಯಾಚರಣೆ ಆರಂಭಿಸಿದ ನಂತರ ಕರ್ನಾಟಕ ಮತ್ತು ಉತ್ತರ ಭಾರತದ ನಡುವೆ ಸೇತುವೆಯಾಗಿ ಪರಿಣಮಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಇದನ್ನೂ ಓದಿ: ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ರಾಹುಲ್ ಗಾಂಧಿ ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ ಕರಂದ್ಲಾಜೆ

TAGGED:bengalurucongressMB PatilvijayapuraVijayapura Airportಎಂ.ಬಿ.ಪಾಟೀಲ್ಬೆಂಗಳೂರುವಿಜಯಪುರವಿಜಯಪುರ ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
43 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?