74th Republic Day: ಗಣರಾಜ್ಯೋತ್ಸವಕ್ಕೆ ಬಾಂಬ್ ಬೆದರಿಕೆ – ಅಹಮದಾಬಾದ್ನಲ್ಲಿ ನಾಲ್ವರು ಅರೆಸ್ಟ್

ಅಹಮದಾಬಾದ್: ಗಣರಾಜ್ಯೋತ್ಸವದಂದು (74th Republic Day) ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಹಮದಾಬಾದ್ ಪೊಲೀಸರು (Ahmedabad Police) ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಹಮದಾಬಾದ್ ಮತ್ತು ಮತ್ತಿಬ್ಬರು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನಿಂದ ಎಂಪಿ ಟಿಕೆಟ್ ಏಕೆ ನಿರೀಕ್ಷಿಸಬಾರದು- ಕಮಲ್ ಹಾಸನ್ ಪ್ರಶ್ನೆ
ಗೀತಾ ಮಂದಿರ ಬಸ್ ನಿಲ್ದಾಣ ಮತ್ತು ಅಹಮದಾಬಾದ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಬೆದರಿಕೆ ಪತ್ರ ಬಂದ ತಕ್ಷಣ ಅಹಮದಾಬಾದ್ ಕ್ರೈಂ ಬ್ರಾಂಚ್ ಕಾರ್ಯಾಚರಣೆಗೆ ಇಳಿದಿತ್ತು.
ಬೆದರಿಕೆ ಪತ್ರವನ್ನು ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿಸಲಾಗಿತ್ತು. ಪತ್ರದಲ್ಲಿ ಕೆಲವು ಸಂಖ್ಯೆಗಳನ್ನು ಸಹ ಉಲ್ಲೇಖಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: 74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ
ಅಹಮದಾಬಾದ್ ರೈಲು ನಿಲ್ದಾಣ ಮತ್ತು ಗೀತಾ ಮಂದಿರ ಬಸ್ ನಿಲ್ದಾಣ ಹೊರತುಪಡಿಸಿ ಇತರ ಎರಡು ಸ್ಥಳಗಳನ್ನು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಚೈತನ್ಯ ಮಾಂಡ್ಲಿಕ್ ಹೇಳಿದ್ದಾರೆ.
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k