ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ವಿಶ್ವಾಸ್ ಕುಮಾರ್ ರಮೇಶ್ (Vishwash Kumar Ramesh) ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ವಿಮಾನ ನಿಲ್ದಾಣದ ಟೇಕಾಫ್ ಆದ 30 ಸೆಕೆಂಡ್ಗಳ ನಂತರ ದೊಡ್ಡ ಶಬ್ಧ ಕೇಳಿ ಬಂತು ನಂತರ ವಿಮಾನ ಪತನ ಹೊಂದಿತು ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಪಾರಾದ ವಿಶ್ವಾಸ್ ಅವರು ತುರ್ತು ನಿರ್ಗಮನ ಡೋರ್ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದರು. ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಅವರು ಹಾರಿದ್ದರಿಂದ ಪಾರಾಗಿದ್ದಾರೆ.
ವಿಶ್ವಾಸ್ ಅವರ ಎದೆ , ಕಣ್ಣು, ಪಾದಗಳು ಗಾಯಗೊಂಡಿದ್ದು ಅವರು ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನ ಪತನಗೊಂಡ ಸ್ಥಳದಿಂದ ಅವರು ನಡೆದುಕೊಂಡೇ ಅಂಬುಲೆನ್ಸ್ ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಇದನ್ನೂ ಓದಿ: ಜಸ್ಟ್ 10 ನಿಮಿಷ, ಟ್ರಾಫಿಕ್ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!
ನಾನು ಎದ್ದು ನೋಡಿದಾಗ ನನ್ನ ಸುತ್ತಲೂ ಶವಗಳ ರಾಶಿ ಇತ್ತು. ಸುತ್ತಲೂ ಛಿದ್ರಗೊಂಡ ವಿಮಾನದ ಭಾಗಗಳು ಬಿದ್ದಿದ್ದವು. ಭಯಗೊಂಡು ನಾನು ಓಡಲು ಆರಂಭಿಸಿದ್ದೆ. ಈ ವೇಳೆ ಯಾರೋ ನನ್ನನ್ನು ಹಿಡಿದು ಅಂಬುಲೆನ್ಸ್ ಮೂಲಕ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: Ahmedabad Plane Crash | ಮಂಗಳೂರು ಮೂಲದ ಕ್ಲೈವ್ ಕುಂದರ್ ಸಹ ಪೈಲಟ್!
ಬ್ರಿಟಿಷ್ ಪ್ರಜೆಯಾಗಿರುವ ವಿಶ್ವಾಸ್ ತನ್ನ ಕುಟುಂಬವನ್ನು ಭೇಟಿ ಮಾಡಲು ಕೆಲವು ದಿನಗಳ ಕಾಲ ಭಾರತಕ್ಕೆ ಬಂದಿದ್ದರು. ಇಂದು ಸಹೋದರ ಅಜಯ್ ಕುಮಾರ್ ರಮೇಶ್ (45) ಜೊತೆ ಯುಕೆಗೆ ತೆರಳುತ್ತಿದ್ದರು. ವಿಶ್ವಾಸ್ ಅವರು 20 ವರ್ಷಗಳಿಂದ ಲಂಡನ್ನಲ್ಲಿ ವಾಸವಾಗಿದ್ದಾರೆ.
ನನ್ನ ಸಹೋದರ ಅಜಯ್ ಬೇರೆ ಸಾಲಿನಲ್ಲಿ ಕುಳಿತಿದ್ದರು. ಅವರು ನನಗೆ ಸಿಕ್ಕಿಲ್ಲ. ಅವರನ್ನು ದಯವಿಟ್ಟು ಪತ್ತೆ ಹಚ್ಚಲು ನನಗೆ ಸಹಾಯ ಮಾಡಿ ಎಂದು ಅವರು ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ.