Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
Last updated: June 13, 2025 1:47 pm
Public TV
Share
3 Min Read
Ahmedabad Air India Air Crash
SHARE

– 5 ಮೃತ ದೇಹಗಳು ಕುಟುಂಬಗಳಿಗೆ ಹಸ್ತಾಂತರ

ಅಹಮದಾಬಾದ್‌: ಇಲ್ಲಿನ ಮೇಘನಿನಗರದಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದ (Air India Plane Crash) ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ವಿಮಾನ ಅಪಘಾತ ತನಿಖಾ ಸಂಸ್ಥೆ ʻಎಎಐಬಿʼ (EEIB) ತನಿಖೆ ನಡೆಸಲು ಮುಂದಾಗಿದೆ.

Ahmedabad Plane Crash 1

ಅಲ್ಲದೇ ಅಮೆರಿಕ (America), ಬ್ರಿಟನ್‌ ದೇಶಗಳೂ ಸಹ ತನಿಖೆಗೆ ಸಹಕರಿಸಲು ಮುಂದಾಗಿವೆ. ಅಮೆರಿಕದ ತನಿಖಾ ಸಂಸ್ಥೆಯಾದ NTSB ಅಧಿಕಾರಿಗಳು, ಬ್ರಿಟನ್‌ನ ಏರ್ ಆಕ್ಸಿಡೆಂಟ್ ಇನ್ವೆಸ್ಟಿಕೇಶನ್ ಬ್ರಾಂಚ್ (Investigation Branch) ತನ್ನ ತಂಡವನ್ನು ಕಳಿಸುವುದಾಗಿ ಹೇಳಿವೆ. ಜೊತೆಗೆ ತಂತ್ರಜ್ಞಾನದ ನೆರವು ನೀಡುವುದಾಗಿಯೂ ಹೇಳಿವೆ. ಮತ್ತೊಂದೆಡೆ ಡಿಜಿಸಿಎ (ನಾಗರಿಕ ವಿಮಾನಯಾನ ಸಚಿವಾಲಯ) ತಂಡವು ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೆ ಕಾರಣವೇನೆಂಬುದನ್ನು ಪತ್ತೆಹಚ್ಚಲು ಮುಂದಾಗಿವೆ. ಈಗಾಗಲೇ ಬ್ಲ್ಯಾಕ್‌ಬಾಕ್ಸ್‌ ಕೂಡ ಪತ್ತೆಯಾಗಿದ್ದು, ಶೀಘ್ರದಲ್ಲೇ ಅಪಘಾತಕ್ಕೆ ನಿಖರ ಕಾರಣ ತಿಳಿಯಲಿದೆ. ಇದನ್ನೂ ಓದಿ: Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

ಈ ಬೆನ್ನಲ್ಲೇ ಪ್ರಾಥಮಿಕ ತನಿಖೆಯಲ್ಲಿ ಅಚ್ಚರಿ ಅಂಶಗಳು ಬೆಳಕಿಗೆ ಬಂದಿವೆ. ವಿಮಾನ ಟೇಕ್‌ ಆಫ್‌ ಆದಾಗ ಸಹಜ ಮತ್ತು ಸುಸ್ಥಿರ ಸ್ಥಿತಿಯಲ್ಲಿತ್ತು. ಆದ್ರೆ 8 ಸೆಕೆಂಡುಗಳ ನಂತರ ವಿಮಾನ ಹಾರಾಟದಲ್ಲಿ ಅಸಹಜತೆ ಕಂಡುಬಂದಿದೆ. ಹೀಗಾಗಿ 7 ರಿಂದ 12 ಸೆಕೆಂಡುಗಳ ಹಾರಾಟದ ಮೇಲೆ ತನಿಖೆ ನಡೆಸಲು ಸಂಬಂಧಪಟ್ಟ ತನಿಖಾ ತಂಡಗಳು ಮುಂದಾಗಿವೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

5 ಮೃತ ದೇಹಗಳು ಕುಟುಂಬಕ್ಕೆ ಹಸ್ತಾಂತರ
ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 200ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಡಿಎನ್‌ಎ ಮೂಲಕ ಗುರುತು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ. ಈವರೆಗೆ ಗುರುತು ಪತ್ತೆಯಾದ 5 ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದ್ದು, ಡಿಎನ್‌ಎ ವರದಿಗಾಗಿ 72 ಗಂಟೆಗಳ ಕಾಲ ಕಾಯಬೇಕಿದೆ ಎಂದು ಸಂಬಂಧಪಟ್ಟ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಆಗಿದ್ದೇನು?
ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಅಂದು ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.  ಇದನ್ನೂ ಓದಿ: ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.

ಮೇ ಡೇ – ಪೈಲಟ್‌ನ ಕೊನೇ ಸಂದೇಶ
ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

TAGGED:AhmedabadAhmedabad Tragedyair indiaCivil HospitalDGCAMAYDAYplane crashPM Modi
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
6 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
6 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
7 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
7 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
7 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?