ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ20 ವಿಶ್ವಕಪ್ (T20 World Cup) ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಟೀಂ ಇಂಡಿಯಾ ಸೋಲು ರಾಜಕೀಯ ತಿರುವು ಪಡೆದುಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಭಾರತೀಯ ಕ್ರಿಕೆಟ್ ತಂಡದ (Team India) ಸೋಲಿಗೆ ಎಐಎಂಐಎಂ ನಾಯಕ ಶೋಯೆಬ್ ಜಮೈ (Shoaib Jamai) ಧರ್ಮದ ಲೇಪನ ಹಚ್ಚಿದ್ದಾರೆ. ತಂಡದಲ್ಲಿ ಮುಸ್ಲಿಂ ಆಟಗಾರರಿಗೆ (Muslim Players) ಸ್ಥಾನ ನೀಡದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್ ಹಾದಿ ತುಂಬಾ ಕಠಿಣ

ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಸರ್ಫರಾಜ್ ಖಾನ್ರಂಥ (Sarfaraz Khan) ಪ್ರತಿಭಾನ್ವಿತ ಆಟಗಾರರನ್ನ ನಿರ್ಲಕ್ಷಿಸಿ ಅಗ್ಗದ ಆಟಗಾರರನ್ನು ಸೇರಿಸಿಕೊಳ್ಳುವುದರಿಂದ ಖಂಡಿತವಾಗಿಯೂ ಭಾರೀ ನಷ್ಟವಾಗುತ್ತದೆ ಎಂದಿದ್ದಾರೆ.
ಅಲ್ಲದೇ ಗೌತಮ್ ಗಂಭೀರ್… ನೀವು ಭಾರತ ತಂಡದ ಕೋಚ್, ಬಿಜೆಪಿ ಎಂಪಿಯಲ್ಲ ಎಂದು ಕಿಡಿಕಾರಿದ್ದಾರೆ. ಶೋಯೆಬ್ ಜಮೈ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಫಸ್ಟ್ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

ಟೀಂ ಇಂಡಿಯಾ ಹೀನಾಯ ಸೋಲು
ನರೇಂದ್ರ ಮೋದಿ ಸ್ಟೇಟಿಯಂ ನಲ್ಲಿ ಸೂಪರ್ ಸಂಡೇ ನಡೆದ ಪಂದ್ಯದಲ್ಲಿ ಭಾರತ ತಂಡ SA ವಿರುದ್ಧ ಹೀನಾಯ ಸೋಲಿಗೆ ತುತ್ತಾಯಿತು. ಆರಂಭದಲ್ಲಿ ಅಬ್ಬರಿಸಿದ ಭಾರತ ಬಳಿಕ 71 ರನ್ಗಳ ಭಾರೀ ಅಂತರದಿಂದ ಸೋಲು ಕಂಡಿತು.

