Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

Public TV
Last updated: October 9, 2021 11:43 am
Public TV
Share
2 Min Read
ratan tata Air India
SHARE

ನವದೆಹಲಿ: ನಷ್ಟದ ಸುಳಿಯಲ್ಲಿ ಸಿಲುಕಿರುವ ʼಮಹಾರಾಜʼನನ್ನು ಟಾಟಾ ಸನ್ಸ್‌ ಖರೀದಿಸಿದೆ. ʼಮಹಾರಾಜ’ ಲಾಂಛನದಿಂದ ಗುರುತಿಸಿಕೊಂಡಿರುವ ಏರ್‌ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದೆ.

ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್‌ ಕಾಂತಾ, ಟಾಟಾ ಸಮೂಹ  ಒಟ್ಟು 18 ಸಾವಿರ ಕೋಟಿ ರೂ. ಬಿಡ್‌ ಮಾಡಿತ್ತು. ಡಿ.10ರ ವೇಳೆ ಸಂಪೂರ್ಣವಾಗಿ ಏರ್‌ ಇಂಡಿಯಾವನ್ನು ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Domestic Airline Air India

ಮೊದಲ ವರ್ಷ ಎಲ್ಲ ಉದ್ಯೋಗಿಗಳು ಏರ್‌ ಇಂಡಿಯಾದಲ್ಲಿ ಇರಲಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ತೆಗೆಯುವುದಿಲ್ಲ. ಒಂದು ವರ್ಷದ ನಂತರ ಟಾಟಾ ಸಮೂಹವು ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ನೀಡಲು ಅವಕಾಶವನ್ನು ಹೊಂದಿರುತ್ತದೆ.

ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸುತ್ತಿದ್ದಂತೆ ಟಾಟಾ ಕಂಪನಿಯ ಮುಖ್ಯಸ್ಥ ರತನ್‌ ಟಾಟಾ Welcome back ಏರ್‌ ಇಂಡಿಯಾ ಎಂದು ಬರೆದು ವಿಮಾನ ಮತ್ತು ಮನೆಯ ಇಮೋಜಿ ಹಾಕಿ ಟ್ವೀಟ್‌ ಮಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

Welcome back, Air India ???????? pic.twitter.com/euIREDIzkV

— Ratan N. Tata (@RNTata2000) October 8, 2021

ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಪ್ರಕ್ರಿಯೆಯ ಬಿಡ್‍ನಲ್ಲಿ ಕೊನೆಯಲ್ಲಿ ಅಜಯ್ ಸಿಂಗ್ ಅವರ ಸ್ಪೈಸ್ ಜೆಟ್ ಕಂಪನಿ ಮತ್ತು ಟಾಟಾ ಸನ್ಸ್ ಇತ್ತು. ಕೇಂದ್ರ ಸರ್ಕಾರ ಬಿಡ್‍ಗೆ 15-20 ಸಾವಿರ ಕೋಟಿ ರೂ. ಹಣವನ್ನು ಮೂಲ ಬೆಲೆಯಾಗಿ ಇಟ್ಟಿತ್ತು ಎಂದು ವರದಿಯಾಗಿತ್ತು. ಟಾಟಾ ಕಂಪನಿ ಸ್ಪೈಸ್ ಜೆಟ್‍ಗಿಂತಲೂ 5 ಸಾವಿರ ಕೋಟಿ ಹೆಚ್ಚು ಬಿಡ್ ಮಾಡಿತ್ತು ಎಂದು ವರದಿಯಾಗಿತ್ತು.

2007ರಲ್ಲಿ ಇಂಡಿಯನ್ ಏರ್‌ಲೈನ್ಸ್‌ ವಿಲೀನದ ಬಳಿಕ ಏರ್ ಇಂಡಿಯಾ ನಷ್ಟವನ್ನು ಅನುಭವಿಸುತ್ತಿದ್ದು ಆಗಸ್ಟ್‌ 2021ರ ವೇಳೆಗೆ 61,562 ಕೋಟಿ ರೂ. ನಷ್ಟದಲ್ಲಿತ್ತು. ಏರ್ ಇಂಡಿಯಾ ಸೇವೆಯಿಂದ ಪ್ರತಿದಿನ ಕೇಂದ್ರ ಸರ್ಕಾರಕ್ಕೆ 20 ಕೋಟಿ ರೂ. ನಷ್ಟವಾಗುತ್ತಿದೆ. ಖರೀದಿಯ ಬಳಿಕ ಟಾಟಾಗೆ 4,400 ದೇಶೀಯ ಮತ್ತು 1,800 ಅಂತರಾಷ್ಟ್ರೀಯ ಲ್ಯಾಂಡಿಂಗ್ ಸಿಗಲಿದೆ.

Air India 1

2019ರ ಲೋಕಸಭಾ ಚುನಾವಣೆಗೂ ಮೊದಲೇ ಏರ್ ಇಂಡಿಯಾವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಏರ್‌ ಇಂಡಿಯಾ ಮಾರಾಟ ಮಾಡುವ ಕೇಂದ್ರ ಸರ್ಕಾರದ ಮೊದಲ ಪ್ರಯತ್ನ ವಿಫಲವಾಗಿತ್ತು. 2018ರಲ್ಲಿ ಕೇಂದ್ರ ಸರ್ಕಾರ ಬಿಡ್‌ ಆಹ್ವಾನಿಸಿತ್ತು. ಆದರೆ ಯಾರೂ ಖರೀದಿಗೆ ಆಸಕ್ತಿ ತೋರಿಸಲಿಲ್ಲ. ಈ ಸಂದರ್ಭದಲ್ಲಿ ಶೇ.76 ರಷ್ಟು ಪಾಲು ಮಾರಾಟ ಮಾಡುವುದರ ಜೊತೆಗೆ ಸಾಲವನ್ನು ಪಾವತಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದನ್ನೂ ಓದಿ: ಕೆಜಿಎಫ್ 2 ಚಿತ್ರೀಕರಣದ ಫೋಟೋ ವೈರಲ್

Airlift Coronaviru Air India 3

ಎರಡನೇ ಬಾರಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್ ಶೇ.100 ರಷ್ಟು ಖಾಸಗೀಕರಣಕ್ಕೆ ಮುಂದಾಗಿತ್ತು. ಈ ಮಧ್ಯೆ ಕೋವಿಡ್ ಕಾರಣದಿಂದ ಬಿಡ್ ಪ್ರಕ್ರಿಯೆ ವಿಳಂಬವಾಗಿತ್ತು. 2018ರ ಬಿಡ್ಡಿಂಗ್ ಪ್ರಕ್ರಿಯೆ ಸಮಯದಲ್ಲಿ ನಷ್ಟದಲ್ಲಿರುವ ಏರ್ ಇಂಡಿಯಾವನ್ನು ಖರೀದಿಸಿ ಲಾಭ ಆಗುತ್ತದೆ ಎಂಬ ನಿರೀಕ್ಷೆ ಇಲ್ಲ ಎಂದು ಇಂಡಿಗೋ ಹೇಳಿತ್ತು.

ವಿಶೇಷ ಏನೆಂದರೆ 89 ವರ್ಷದ ಹಿಂದೆ ಟಾಟಾ ಕಂಪನಿಯೇ ಏರ್‌ ಇಂಡಿಯಾ ಕಂಪನಿಯನ್ನು ಆರಂಭಿಸಿತ್ತು. 1932ರಲ್ಲಿ ಜೆ.ಆರ್.ಡಿ ಟಾಟಾ ಏರ್ ಇಂಡಿಯಾವನ್ನು ಸ್ಥಾಪಿಸಿದ್ದರು. 1932ರಲ್ಲಿ ಟಾಟಾ ಏರ್‌ಲೈನ್ಸ್‌ ಹೆಸರಿನಲ್ಲಿ ಆರಂಭಗೊಂಡ ಕಂಪನಿ ಬಳಿಕ 1946ರಲ್ಲಿ ಏರ್‌ ಇಂಡಿಯಾ ಕಂಪನಿಯಾಗಿ ಬದಲಾಗಿತ್ತು. ಸ್ವಾತಂತ್ರ್ಯ ಸಿಕ್ಕಿದ ಬಳಿಕ 1953ರಲ್ಲಿ ಏರ್ ಇಂಡಿಯಾವನ್ನು ರಾಷ್ಟ್ರೀಕರಣಗೊಳಿಸಲಾಗಿತ್ತು. ಈಗಾಗಲೇ ಭಾರತದಲ್ಲಿ ಟಾಟಾ ಸನ್ಸ್ ಮತ್ತು ಸಿಂಗಾಪುರ ಏರ್‌ಲೈನ್ಸ್‌ ಜೊತೆಯಾಗಿ ವಿಸ್ತಾರಾ ಏರ್ ಲೈನ್ಸ್ ಸೇವೆ ನೀಡುತ್ತಿದೆ.

TAGGED:air indiaDisinvestmentTataTata Sonsಏರ್ ಇಂಡಿಯಾಖಾಸಗೀಕರಣಟಾಟಾ ಸನ್ಸ್ಮಹಾರಾಜರತನ್ ಟಾಟಾ
Share This Article
Facebook Whatsapp Whatsapp Telegram

Cinema Updates

shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
6 minutes ago
shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
2 hours ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
2 hours ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
3 hours ago

You Might Also Like

Hassan Murder
Crime

ಚಿನ್ನಕ್ಕಾಗಿ ಜೊತೆಗಿದ್ದ ಕಾರ್ಮಿಕರಿಂದಲೇ ಕಂಟ್ರಾಕ್ಟರ್ ಬರ್ಬರ ಹತ್ಯೆ – ಆಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

Public TV
By Public TV
5 minutes ago
TEMPLE RAIN TREE
Districts

ಮಳೆಗೆ ಧರೆಗುರುಳಿದ ಮರ – ದೇವಾಲಯದ ಗೋಪುರ, ವಿಗ್ರಹಕ್ಕೆ ಹಾನಿ

Public TV
By Public TV
5 minutes ago
Crime
Chamarajanagar

ಕೊಳ್ಳೇಗಾಲ| ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Public TV
By Public TV
14 minutes ago
Asim Munir
Latest

ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್

Public TV
By Public TV
1 hour ago
g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
2 hours ago
HC Balakrishna
Districts

ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?