ಏರ್ ಸ್ಟ್ರೈಕ್ ಸಾಕ್ಷಿಯನ್ನ ಯಾರೂ ಕೇಳಿಲ್ಲ: ಎಂ.ಬಿ.ಪಾಟೀಲ್

Public TV
1 Min Read
MB Patil Air Strike

ಹುಬ್ಬಳ್ಳಿ: ಏರ್ ಸ್ಟ್ರೈಕ್ ಕುರಿತಂತೆ ಸಾಕ್ಷಿ ಬಿಡುಗಡೆ ಮಾಡುವಂತೆ ಯಾರೂ ಕೇಳಿಲ್ಲ ಹಾಗೂ ಒತ್ತಾಯ ಮಾಡಿಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ.

ನಗರದಲ್ಲಿ ಮಾತನಾಡಿದ ಗೃಹ ಸಚಿವರು, ಯೋಧರು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಕೆಲಸ ಮಾಡುತ್ತಿದ್ದಾರೆ. ನಮ್ಮ ಸೇನೆಯ ಬಗ್ಗೆ ನಮಗೆ ಹೆಮ್ಮೆಯಿದೆ. ಆದರೆ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸೇನೆಯ ಬಗ್ಗೆ ಏನು ಹೇಳಿದ್ದಾರೆ ಎನ್ನುವುದು ನನಗೆ ಗೊತ್ತು. ಅವರು ಮಾತನಾಡಿದ ವಿಡಿಯೋ ನನ್ನ ಬಳಿಯೇ ಇದೆ. ಈಗ ತಮ್ಮ ಹೇಳಿಕೆಯನ್ನು ತಿರುಚಿದ್ದಾರೆ. ಸೇನೆಯ ವಿಷಯದಲ್ಲಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಮಾಡಬಾರದಿತ್ತು ಎಂದು ಗುಡುಗಿದರು.

hbl mb patil

ಭಾರತೀಯ ವಾಯುಪಡೆ ಉಗ್ರರ ನೆಲೆಯ ಮೇಲೆ ನಡೆಸಿದ ಏರ್ ಸ್ಟ್ರೈಕ್ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸೇನೆ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದ್ದಲ್ಲ. ಅದು ನಮ್ಮ ದೇಶದ ಸೇನೆ. ನಮ್ಮ ಯೋಧರ ಸಾಧನೆಯನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕೇ ಹೊರತು ರಾಜಕೀಯ ಬೆರಸಬಾರದು ಎಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.

KPL RAGVENDAR HINDANAL 1

ಶಾಸಕ ಹಿಟ್ನಾಳ್ ಹೇಳಿದ್ದೇನು?:
ಕೊಪ್ಪಳದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು, ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಯ ಮೇಲೆ 12 ನಿಮಿಷ ದಾಳಿ ಮಾಡಿವೆ. ಈ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳುತ್ತಿದೆ. ಹಾಗಾದರೆ ಶವಗಳು ಎಲ್ಲಿವೆ? ಉಗ್ರ ಮೃತ ದೇಹವನ್ನು ಯಾರೂ ತೋರಿಸಿಲ್ಲ ಎಂದು ವೈಮಾನಿಕ ದಾಳಿಗೆ ಸಾಕ್ಷಿ ಕೇಳಿದ್ದರು.

https://youtu.be/oseIZ5XYm4o

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *