Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

Cricket

ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

Public TV
Last updated: September 7, 2022 7:07 am
Public TV
Share
4 Min Read
IND VS SL AISA CUP 3
SHARE

ದುಬೈ: ಶ್ರೀಲಂಕಾ ರೋಚಕ 6 ವಿಕೆಟ್ ಗಳ ಜಯ ಸಾಧಿಸಿದ್ದು, ಏಷ್ಯಾ ಕಪ್ ನಿಂದ ಭಾರತ ಬಹುತೇಕ ಹೊರಬಿದ್ದಿದೆ‌. ಬಾಕಿ ಇರುವ ಇತರ ತಂಡಗಳ ಫಲಿತಾಂಶ ತನ್ನ ಪರವಾಗಿ ಬಂದರೆ ಮಾತ್ರ ಭಾರತ ಫೈನಲ್‌ಗೆ ಏರುವ ಸಾಧ್ಯತೆಯಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ, 174 ರನ್‌ಗಳ ಗುರಿ ನೀಡಿತು. ಸಾಧಾರಣ ಮೊತ್ತದ ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ174 ರನ್‌ಗಳಿಸಿ ರೋಚಕ ಜಯ ಸಾಧಿಸಿದೆ

IND VS SL AISA CUP 4

ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಲಂಕಾ ಮೊದಲ 4 ಓವರ್‌ಗಳಿಗೆ 22 ರನ್‌ಗಳನ್ನಷ್ಟೇ ಗಳಿಸಿತ್ತು. ನಂತರದಲ್ಲಿ ಬಿರುಸಿನ ಬ್ಯಾಟಿಂಗ್‌ನಿಂದ ಪವರ್‌ ಪ್ಲೇ ಮುಗಿಯುವ ವೇಳೆಗೆ 50 ರನ್‌ಗಳ ಗಡಿದಾಟಿತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ 67 ಎಸೆತೆಗಳಲ್ಲಿ 97 ರನ್‌ ಸಿಡಿಸಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ ಭಾರತದ ಬೌಲರ್‌ಗಳ ಬೆವರಿಳಿಸಿದರು. ಪಾತುಂ ನಿಸ್ಸಾಂಕ 37 ಎಸೆತಗಳಲ್ಲಿ 2 ಸಿಕ್ಸರ್‌ 4 ಬೌಂಡರಿಯೊಂದಿಗೆ 52 ರನ್‌ ಸಿಡಿಸಿದರೆ, ಕುಸಾಲ್ ಮೆಂಡಿಸ್ 37 ಎಸೆತಗಳಲ್ಲಿ 57 ರನ್‌ (4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಪೆವಿಲಿಯನ್‌ ಸೇರಿದರು.

IND VS SL AISA CUP 5

ಇದಾದ ಬಳಿಕ ಲಂಕಾ ಸತತ ನಾಲ್ಕು ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಸಿಲುಕಿತು. ಮೆಂಡಿಸ್‌ ನಂತರ ಕಣಕ್ಕಿಳಿದ ಚರಿತ್ ಅಸಲಂಕಾ ಡಕೌಟ್‌ ಆದರು. ಈ ಬೆನ್ನಲ್ಲೇ 7 ಎಸೆತಗಳನ್ನು ಎದುರಿಸಿದ ದನುಷ್ಕ ಗುಣತಿಲಕ 1 ರನ್‌ಗಳಿಸಿ ಔಟಾದರು.

ನಂತರ ಬಂದ ಭಾನುಕಾ ರಾಜಪಕ್ಸೆ ಹಾಗೂ ದಾಸುನ್ ಶನಕ ಉತ್ತಮ ಜೊತೆಯಾಟವಾಡಿದರು. 18 ಓವರ್‌ಗಳಲ್ಲಿ 153 ರನ್‌ಗಳಿಸಿದ ಲಂಕಾ ತಂಡಕ್ಕೆ ಕೊನೆಯ 2 ಓವರ್‌ಗಳಲ್ಲಿ 21 ರನ್‌ಗಳ ಅವಶ್ಯಕತೆಯಿತ್ತು. 19ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ಭುವನೇಶ್ವರ್‌ ಕುಮಾರ್‌ ಮೊದಲ 2 ಎಸೆತಗಳಲ್ಲಿ ಒಂದೊಂದೇ ರನ್‌ ನೀಡಿ, ಸತತ 2 ವೈಡ್‌ ಎಸೆದು, 3ನೇ ಎಸೆತದಲ್ಲಿ 4 ರನ್‌ ಚಚ್ಚಿಸಿಕೊಂಡರು. ತಮ್ಮ ಕೊನೆಯ ಓವರ್‌ನಲ್ಲಿ 14 ರನ್‌ ನೀಡಿದ್ದು, ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಾಯಿತು.

ಕೊನೆಯ ಓವರ್‌ನಲ್ಲಿ ಅರ್ಶ್‌ದೀಪ್‌ ಸಿಂಗ್‌ಗೆ 6 ಎಸೆತಗಳಲ್ಲಿ 7 ರನ್‌ಗಳನ್ನು ಕಂಟ್ರೋಲ್‌ ಮಾಡುವ ಸವಾಲು ಎದುರಾಗಿತ್ತು. ಮೊದಲ 2 ಎಸೆತಗಳಲ್ಲಿ ಒಂದೊಂದು ರನ್‌ ನೀಡಿದ ಅರ್ಶ್‌ದೀಪ್‌, 3ನೇ ಎಸೆತದಲ್ಲಿ 2 ರನ್‌ ನೀಡಿ ಉತ್ತಮ ಹಿಡಿದ ಸಾಧಿಸಿದ್ದರು.  ಕೊನೆಯ 2 ಎಸೆತಗಳಲ್ಲಿ 2 ರನ್‌ ಬೇಕಿದ್ದ ಲಂಕಾಗೆ 5ನೇ ಎಸೆತವನ್ನು ಬೀಟ್ ಮಾಡಿದರೂ, ರನೌಟ್‌ ಮಾಡುವ ಪ್ರಯತ್ನದಲ್ಲಿ ರಿಷಣ್‌ ಪಂತ್‌ 2 ರನ್‌ ಉಚಿತವಾಗಿಯೇ ನೀಡಿದ್ದರಿಂದ ಜಯ ಭಾರತದ ಕೈಚೆಲ್ಲಿತು. ಉತ್ತಮ ಜೊತೆಯಾಟವಾಡಿದ ಭಾನುಕಾ ರಾಜಪಕ್ಸೆ 17 ಎಸೆತಗಳಲ್ಲಿ 25 ರನ್‌ ಗಳಿಸಿದರೆ ಹಾಗೂ ದಾಸುನ್ ಶನಕ  18 ಎಸೆತಗಳಲ್ಲಿ 33 ರನ್‌ ಪೇರಿಸಿ ಲಂಕಾ ತಂಡಕ್ಕೆ ಜಯ ತಂದುಕೊಟ್ಟರು.

IND VS SL AISA CUP 2

ಚಾಹಲ್‌ ಕಮಾಲ್‌: ಮೊದಲ 10 ಓವರ್‌ಗಳ ವರೆಗೂ ಟೀಂ ಇಂಡಿಯಾ ಯಾವುದೇ ವಿಕೆಟ್‌ ಪಡೆದಿರಲಿಲ್ಲ. ನಂತರ ತಮ್ಮ ಬೌಲಿಂಗ್‌ ಕಮಾಲ್‌ ಮಾಡಿದ ಯಜುವೇಂದ್ರ ಚಾಹಲ್‌ 4 ಓವರ್‌ಗಳಲ್ಲಿ 34 ರನ್‌ ನೀಡಿ 3 ವಿಕೆಟ್‌ ಕಬಳಿಸಿದರು. ಈ ಬೆನ್ನಲ್ಲೇ ರವಿಚಂದ್ರನ್‌ ಅಶ್ವಿನ್‌ 1 ವಿಕೆಟ್‌ ಪಡೆದರು. ಇದರಿಂದ ಟೀಂ ಇಂಡಿಯಾ ಮತ್ತೆ ಗೆಲುವಿನ ಭರವಸೆ ಕಂಡುಕೊಂಡಿತ್ತು.

ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 2 ವಿಕೆಟ್‌ಗಳನ್ನು ಕಳೆದುಕೊಂಡಿತು. 3ನೇ ಓವರ್‌ನಲ್ಲಿ 11 ರನ್‌ಗಳಾಗಿದ್ದಾಗಲೇ 6 ರನ್ ಗಳಿಸಿ ಆಡುತ್ತಿದ್ದ ಕೆ.ಎಲ್.ರಾಹುಲ್ ಎಲ್‌ಬಿ ಬಲೆಗೆ ಬಿದ್ದರು. ನಂತರ ಬಂದ ಕಿಂಗ್‌ ಕೊಹ್ಲಿ ಯಾವುದೇ ರನ್‌ಗಳಿಸದೇ ಶೂನ್ಯಕ್ಕೆ ಔಟಾದರು.

IND VS SL AISA CUP 3

ಈ ವೇಳೆ ಭಾರತ 13 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ 70 ರನ್ ಕಲೆಹಾಕಿ ಉತ್ತಮ ಇನ್ನಿಗ್ಸ್‌ ಕಟ್ಟಿದ್ದರು. ಇದಕ್ಕೆ ಸೂರ್ಯಕುಮಾರ್ ಯಾದವ್ ಜೊತೆಯಾದರು. ಇಬ್ಬರ ಸಾಂಘಿಕ ಬ್ಯಾಟಿಂಗ್‌ ಪ್ರದರ್ಶನದಿಂದ 97 ರನ್‌ಗಳು ಟೀಂ ಇಂಡಿಯಾ ಬತ್ತಳಿಕೆ ಸೇರಿತು. ಈ ವೇಳೆ ರೋಹಿತ್‌ ಶರ್ಮಾ 41 ಎಸೆತಗಳಲ್ಲಿ 72 ರನ್‌ (5 ಬೌಂಡರಿ, 4 ಸಿಕ್ಸರ್‌) ಸಿಡಿಸಿದರೆ, ಸೂರ್ಯಕುಮಾರ್‌ ಯಾದವ್‌ 29 ಎಸೆತಗಳಲ್ಲಿ 34 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಮಧ್ಯಮ ಕ್ರಮಾಂಕದ ನಂತರ ಕ್ರೀಸ್‌ಗಿಳಿದ ಯಾರೊಬ್ಬರು ಸ್ಥಿರವಾಗಿ ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ 17 ರನ್, ರಿಷಭ್ ಪಂತ್ 17 ರನ್‌, ದೀಪಕ್‌ ಹೂಡಾ 3 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಅಶ್ವಿನ್‌ 7 ಎಸೆತಗಳಲ್ಲಿ 15 ರನ್‌ ಗಳಿಸಿದರು. ಇದು ಟೀಂ ಇಂಡಿಯಾ 170 ರನ್‌ಗಳ ಗಡಿ ದಾಟಲು ನೆರವಾಯಿತು.

IND VS SL AISA CUP

ಬೌಲಿಂಗ್‌ನಲ್ಲಿ ಶ್ರೀಲಂಕಾ ತಂಡದ ಪರ ದಿಲ್ಶನ್ ಮಧುಶಂಕ 4 ಓವರ್‌ಗಳಲ್ಲಿ 24 ರನ್ ನೀಡಿ 3 ವಿಕೆಟ್ ಗಳಿಸಿದರು. ಚಮಿಕಾ ಕರುಣಾರತ್ನೆ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರು. ನಾಯಕ ದಸುನ್ ಶನಕ 2 ಓವರ್‌ಗಳಲ್ಲಿ 26 ನೀಡಿ 2 ವಿಕೆಟ್ ಪಡೆದರು. ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದುಕೊಂಡರು.

Live Tv
[brid partner=56869869 player=32851 video=960834 autoplay=true]

TAGGED:Arshdeep Singhasia cupAsia Cup 2022Bhanuka RajapaksacricketHardik PandyaRishabh PantSri Lankat20Team indiaಏಷ್ಯಾಕಪ್ಕ್ರಿಕೆಟ್ಟೀಂ ಇಂಡಿಯಾಭಾನುಕಾ ರಾಜಪಕ್ಸೆಶ್ರೀಲಂಕಾ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
3 minutes ago
CM Siddaramaiah
Bengaluru City

ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ

Public TV
ByPublic TV
7 minutes ago
Modi 1
Latest

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
16 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
1 hour ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
1 hour ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?