ಯುದ್ದಕಾಂಡ ಚಿತ್ರದ ಯಶಸ್ಸಿನ ನಂತರ ನಟ, ನಿರ್ಮಾಪಕ ಕೃಷ್ಣ ಅಜಯ್ ರಾವ್ (Krishna Ajay Rao) ಅವರು ಇದೀಗ ಮತ್ತೊಂದು ಇಂಟರೆಸ್ಟಿಂಗ್ ಕ್ಯಾರೆಕ್ಟರ್ ಮೂಲಕ ಸಿನಿ ರಸಿಕರ ಮುಂದೆ ಬರುತ್ತಿದ್ದಾರೆ. ಇದುವರೆಗೂ ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ತೆರೆಮೇಲೆ ಕಾಣಿಸಿಕೊಂಡಿದ್ದ ಅಜಯ್ ರಾವ್ ಅವರು ವಿಭಿನ್ನವಾದ ರಗಡ್ ಗೆಟಪ್ ಮೂಲಕ ನೋಡುಗರ ಗಮನ ಸೆಳೆಯುತ್ತಿದ್ದಾರೆ.
ಬೋಳು ತಲೆಯಲ್ಲಿ, ಅರ್ಧ ಕೂಲಿಂಗ್ ಗ್ಲಾಸ್ ಹಾಕಿ ವಿಲನ್ಗಳಿಗೆ ಗಳಿಗೆ ಸಿಂಹಸ್ವಪ್ನ ಎನ್ನುವಂತೆ ಕಾಣಿಸಿಕೊಂಡಿದ್ದಾರೆ. ನನ್ ಮಗಳೇ ಹೀರೋಯಿನ್ ಖ್ಯಾತಿಯ ನಿರ್ದೇಶಕ ಎಸ್.ಕೆ ಬಾಹುಬಲಿ ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ‘ಪೆನ್ ಡ್ರೈವ್’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ
ಪಿಕೆ ಪ್ರೊಡಕ್ಷನ್ಸ್ ಮೂಲಕ ಕಿರಣ್ ಅವರು ನಿರ್ಮಿಸುತ್ತಿರುವ ಈ ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದ್ದು, ಸುಜ್ಞಾನ್ ಅವರು ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ. ಇದನ್ನೂ ಓದಿ: Exclusive | ಲಕ್ಷ ಲಕ್ಷ ಹಣ ವಂಚನೆ ಆರೋಪ – ನನ್ನ ಹೆಸರು ಹಾಳು ಮಾಡುವ ಉದ್ದೇಶ ಬಿಟ್ಟು ಬೇರೆನಿಲ್ಲ: ಗೋಲ್ಡ್ ಸುರೇಶ್