ಲಕ್ನೋ: ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಆಕಾಶ ಏರ್ ಇಂಡಿಯಾ (Akasa Air) ಲಕ್ನೋದಲ್ಲಿ ಎಮರ್ಜೆನ್ಸಿ ಲ್ಯಾಂಡ್ ಆಗಿದೆ. ಭುವನೇಶ್ವರದಲ್ಲಿ ಹವಾಮಾನ ವ್ಯತ್ಯಯ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
2026ರ ಮೇ 27 ರಂದು ಬೆಂಗಳೂರಿನಿಂದ ಭುವನೇಶ್ವರಕ್ಕೆ ಹೊರಟಿದ್ದ ಅಕಾಶ ಏರ್ ವಿಮಾನ QP 1503 ಅನ್ನು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಲಕ್ನೋದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಭುವನೇಶ್ವರದಲ್ಲಿ ವಿಮಾನ ಇಳಿಯಲು ಅನುಕೂಲಕರವಾಗಿರಲಿಲ್ಲ. ಪೈಲಟ್ ಪ್ರಮಾಣಿತ ಕಾರ್ಯವಿಧಾನಗಳಿಗೆ ಅನುಗುಣವಾಗಿ ಎಲ್ಲಾ ಸ್ಥಾಪಿತ ಕಾರ್ಯಾಚರಣೆ ಮತ್ತು ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಿದರು ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: CBSE ಆನ್-ಸ್ಕ್ರೀನ್ ಮಾರ್ಕಿಂಗ್ ವಿವಾದ – ಹೊಣೆ ಹೊತ್ತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ವಿಮಾನವು ನಂತರ ಲಕ್ನೋದಿಂದ ಹೊರಟು ಇಂದು ಮುಂಜಾನೆ ಭುವನೇಶ್ವರಲ್ಲಿ ಇಳಿಯಿತು. ಪ್ರಯಾಣಿಕರು ಮತ್ತು ಸಿಬ್ಬಂದಿಯ ಯೋಗಕ್ಷೇಮವು ನಮ್ಮ ಪ್ರಮುಖ ಆದ್ಯತೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಏತನ್ಮಧ್ಯೆ, ಮಂಗಳವಾರ ಬೆಂಗಳೂರಿನಿಂದ ಚೆನ್ನೈಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: 20 ವರ್ಷಗಳ ಜೈಲುವಾಸದ ಬಳಿಕ ಸೌದಿಯಿಂದ ಕೇರಳಕ್ಕೆ ಮರಳಿದ ರಹೀಮ್
