ಲಕ್ನೋ: ನನ್ನ ಹೆಲಿಕಾಪ್ಟರ್ಗೆ ಅನುಮತಿ ನೀಡುತ್ತಿಲ್ಲ. ಉತ್ತರ ಪ್ರದೇಶದ ಮುಜಾಫರ್ನಗರಕ್ಕೆ ತೆರಳದಂತೆ ತಡೆಯಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ನನ್ನ ಹೆಲಿಕಾಪ್ಟರ್ ಟೇಕ್ ಆಫ್ ಆಗಲು ಅನುಮತಿ ನೀಡದ ಕಾರಣ ನಾನು ದೆಹಲಿಯಲ್ಲಿ ಸಿಲುಕಿಕೊಂಡಿದ್ದೇನೆ ಎಂದು ಬರೆದುಕೊಂಡು ಹೆಲಿಕಾಪ್ಟರ್ ಜೊತೆ ಇರುವ ಚಿತ್ರವನ್ನು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್ನ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಒಪ್ಪಿಗೆ
ಟ್ವೀಟ್ನಲ್ಲಿ ಏನಿದೆ?: ಯಾವುದೇ ಕಾರಣ ನೀಡದೆ ನನ್ನ ಹೆಲಿಕಾಪ್ಟರ್ ಮುಜಾಫರ್ನಗರಕ್ಕೆ ಹೋಗಲು ಅನುಮತಿ ನೀಡದೆ ದೆಹಲಿಯಲ್ಲಿ ತಡೆಯಲಾಗಿದೆ. ಆದರೆ ಬಿಜೆಪಿಯ ಉನ್ನತ ನಾಯಕರೊಬ್ಬರು ಇಲ್ಲಿಂದ ಹೆಲಿಕಾಪ್ಟರ್ನಲ್ಲಿ ಉತ್ತರಪ್ರದೇಶಕ್ಕೆ ತೆರಳಿದ್ದಾರೆ. ಇದು ಸೋತ ಬಿಜೆಪಿಯ ಹತಾಶೆಯ ಪಿತೂರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
मेरे हैलिकॉप्टर को अभी भी बिना किसी कारण बताए दिल्ली में रोककर रखा गया है और मुज़फ़्फ़रनगर नहीं जाने दिया जा रहा है। जबकि भाजपा के एक शीर्ष नेता अभी यहाँ से उड़े हैं। हारती हुई भाजपा की ये हताशा भरी साज़िश है।
जनता सब समझ रही है… pic.twitter.com/PFxawi0kFD
— Akhilesh Yadav (@yadavakhilesh) January 28, 2022
ಅಖಿಲೇಶ್ ಯಾದವ್ ಮತ್ತು ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ ಇಂದು ಮುಜಾಫರ್ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವುದರ ಜೊತೆಗೆ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ಉತ್ತರ ಪ್ರದೇಶ ವಿಧಾನ ಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಎಸ್ಪಿ ನಡುವೆ ಪೈಪೋಟಿ ಏರ್ಪಟ್ಟಿದೆ.