ಇಡೀ ದೇಶಾದ್ಯಂತ 2024ರ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಸದ್ಯ ತೆಲುಗು ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ಗೆ ಜಗನ್ ಬಿಗ್ ಶಾಕ್ ಕೊಟ್ಟಿದ್ದಾರೆ. ವಿಜಯವಾಡ ಲೋಕಸಭಾ ಕ್ಷೇತ್ರದಿಂದ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಟಿಡಿಪಿ-ಜನಸೇನಾ ಮೈತ್ರಿ ಎದುರಿಸಲು ಅಕ್ಕಿನೇನಿ ಕುಟುಂಬದ ನಾಗಾರ್ಜುನಗೆ ಮಣೆ ಹಾಕಿದ್ದಾರೆ. ವೈ.ಎಸ್.ಆರ್ ಕಾಂಗ್ರೆಸ್ ಪಕ್ಷಕ್ಕೆ ತೆಲುಗು ನಟ ನಾಗಾರ್ಜುನ ಸಾಥ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ- ಆಟೋ ಚಾಲಕ ದುರ್ಮರಣ
2024ರ ಲೋಕಸಭಾ ಚುನಾವಣೆಗೆ ಆಂಧ್ರಪ್ರದೇಶದಲ್ಲಿ ಹೆಚ್ಚಿನ ಕ್ಷೇತ್ರಗಳು ಗೆಲ್ಲಲೇಬೇಕು. ಜನಸೇನಾ, ಟಿಡಿಪಿ ಮೈತ್ರಿಯನ್ನು ಸೋಲಿಸಲೇಬೇಕು ಎಂಬುದು ಜಗನ್ (Jagan) ಮಾಸ್ಟರ್ ಪ್ಲ್ಯಾನ್ ಆಗಿದೆ. ನಾಗಾರ್ಜುನ ಮೂಲಕ ಪವನ್ ಕಲ್ಯಾಣ್ಗೆ (Pawan Kalyan) ಠಕ್ಕರ್ ಕೊಡಲು ಜಗನ್ ಪ್ಲ್ಯಾನ್ ಮಾಡಿದ್ದಾರೆ.
ವಿಜಯವಾಡ ಲೋಕಸಭಾ ಕ್ಷೇತ್ರದಿಂದ ಅಕ್ಕಿನೇನಿ ನಾಗಾರ್ಜುನ ಅವರನ್ನು ಕಣಕ್ಕಿಳಿಸಲು ವೈಎಸ್ಆರ್ ಕಾಂಗ್ರೆಸ್ ನಿರ್ಧರಿಸಿದೆ ಎಂಬ ಸುದ್ದಿ ಇದೆ. ಇದಕ್ಕೆ ನಾಗಾರ್ಜುನ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಮಾತು ಕೇಳಿ ಬಂದಿದೆ.