Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜೋಡೋ ಯಾತ್ರೆಗೆ ಹೋಗೋವಾಗ ಎಚ್ಚರದಲ್ಲಿರಿ – ಜೇಬುಗಳ್ಳರಿದ್ದಾರೆ ಎಂದ ಪೊಲೀಸರು

Public TV
Last updated: December 12, 2022 7:27 pm
Public TV
Share
2 Min Read
Bharat Jodo Yatra
SHARE

ಭೋಪಾಲ್: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಹೋಗೋವಾಗಿ ಎಚ್ಚರವಾಗಿರಿ. ಜೋಡೋ ಯಾತ್ರೆಯಲ್ಲಿ ಜೇಬುಗಳ್ಳರು (Pickpockets) ಹೆಚ್ಚಿದ್ದಾರೆ. ಹೀಗೆಂದು ಕಾಂಗ್ರೆಸ್ (Congress) ವಿರೋಧಿಗಳು ಅಥವಾ ಜನರು ಹೇಳಿಲ್ಲ. ಬದಲಿಗೆ ಮಧ್ಯಪ್ರದೇಶದ ಪೊಲೀಸರೇ (Madhya Pradesh Police) ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯೇ ಈಗ ಜೇಬುಗಳ್ಳರ ಟಾರ್ಗೆಟ್ ಎಂದು ಪೊಲೀಸರು ಜನರಿಗೆ ಎಚ್ಚರಿಕೆ ನೀಡಿದ್ದಲ್ಲದೇ ರಾಜಸ್ಥಾನದ ಪೊಲೀಸರಿಗೂ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಯಾತ್ರೆ ಸಾಗುತ್ತಿದ್ದಾಗ ಹಲವರು ಜೇಬುಗಳ್ಳತನಕ್ಕೆ ಗುರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Bharat Jodo Yatra 3

ನಾವು ಈಗಾಗಲೇ 8-10 ಜೇಬುಗಳ್ಳರನ್ನು ಹಿಡಿದಿದ್ದೇವೆ. ಅವರಲ್ಲಿ ಕೆಲವರು ರಾಜಸ್ಥಾನದ ಕೋಟಾ ಮತ್ತು ಜಲಾವರ್ ನಿವಾಸಿಗಳು. ಕೆಲವರು ರಾಜ್ಯದ ಗುನಾ, ರಾಜ್‌ಗಢ, ಶಾಜಾಪುರ ಮತ್ತು ರೈಸನ್ ಜಿಲ್ಲೆಗಳ ನಿವಾಸಿಗಳು ಎಂದು ಅಗರ್ ಮಾಲ್ವಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ಸಾಗರ್ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ಕ್ಲಿಕ್‌ – ಮತ್ತಷ್ಟು ದೇಶಗಳೊಂದಿಗೆ ರುಪಿ ವ್ಯವಹಾರಕ್ಕೆ ಮುಂದಾದ ಭಾರತ

ಯಾತ್ರೆಯ ವೇಳೆ ಜೇಬುಗಳ್ಳರಿಂದ ಎಚ್ಚರ ವಹಿಸುವಂತೆ ಮಧ್ಯಪ್ರದೇಶ ಪೊಲೀಸರು ರಾಜಸ್ಥಾನ ಪೊಲೀಸರಿಗೂ ಎಚ್ಚರಿಕೆ ನೀಡಿದ್ದಾರೆ. ಜೋಡೋ ಯಾತ್ರೆ ಡಿಸೆಂಬರ್ 5 ರಂದು ಮಧ್ಯಪ್ರದೇಶದಿಂದ ರಾಜಸ್ಥಾನ ತಲುಪಿತ್ತು. ರಾಜ್ಯದ ಬುಂದಿ ಜಿಲ್ಲೆಯನ್ನು ತಲುಪುವುದಕ್ಕೂ ಮೊದಲು ಜಲಾವರ್ ಮತ್ತು ಕೋಟಾ ಜಿಲ್ಲೆಗಳಲ್ಲಿ ಹಾದುಹೋಗಿದೆ. ಬುಂದಿ ಬಳಿಕ ಸವಾಯಿ ಮಾಧೋಪುರ್, ದೌಸಾ ಮತ್ತು ಅಲ್ವಾರ್ ಜಿಲ್ಲೆಗಳಲ್ಲಿ ಸಾಗಿದೆ.

Police Jeep

ಅಗರ್ ಮಾಲ್ವಾದಲ್ಲಿ ಆರೋಪಿಗಳಿಂದ ನಾವು 5-6 ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದೇವೆ. ಯಾತ್ರೆಯಲ್ಲಿ ಭಾಗವಹಿಸಿದ್ದ 4-5 ಜನರು ತಮ್ಮ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ನಾವು ಸೈಬರ್ ಪೊಲೀಸರ ಸಹಾಯವನ್ನೂ ಪಡೆದಿದ್ದೇವೆ. ಯಾತ್ರೆಯ ಶಿಬಿರಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವೇಳೆಯೇ ಹೆಚ್ಚಿನ ಕಳ್ಳತನಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 3 ತಿಂಗಳು ಕಾಲೇಜಲ್ಲಿ ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್ ಪ್ರಕರಣವನ್ನು ಭೇದಿಸಿದ ಮಹಿಳಾ ಪೇದೆ

ಭಾರತ್ ಜೋಡೋ ಯಾತ್ರೆ ಡಿಸೆಂಬರ್ 21 ರಂದು ಹರಿಯಾಣ ಪ್ರವೇಶಿಸಲಿದೆ. ಇದಕ್ಕೂ ಮುನ್ನ ಈ ಯಾತ್ರೆ ರಾಜಸ್ಥಾನದಲ್ಲಿ 17 ದಿನಗಳಲ್ಲಿ ಸುಮಾರು 500 ಕಿ.ಮೀ ದೂರವನ್ನು ಕ್ರಮಿಸಲಿದೆ.

Live Tv
[brid partner=56869869 player=32851 video=960834 autoplay=true]

TAGGED:bharat jodo yatraMadhya PradeshPickpocketspoliceRahul Gandhitheftಕಳ್ಳತನಜೇಬುಗಳ್ಳರುಪೊಲೀಸ್ಭಾರತ್ ಜೋಡೋ ಯಾತ್ರೆಮಧ್ಯಪ್ರದೇಶರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
2 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
22 hours ago

You Might Also Like

Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
2 minutes ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
10 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
20 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
2 hours ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?