ಶಾಸಕರು ಒಂದು ದಿನದ ಮಟ್ಟಿಗೆ ಕ್ಷೇತ್ರಗಳಿಗೆ ಹೋಗಿ ಬರೋದು ಬೇಡ, ಇಲ್ಲೇ ಇರಲಿ : ಡಿಕೆಶಿ

DKSHI 2

ಬೆಂಗಳೂರು: ಶಾಸಕರು ಒಂದು ದಿನದ ಮಟ್ಟಿಗೆ ತಮ್ಮ ಸ್ವಕ್ಷೇತ್ರಗಳಿಗೆ ಹೋಗಿ ಬರೋದು ಬೇಡ ಅಂತಾ ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಕಾಂಗ್ರೆಸ್ ಸಭೆ ಇರಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲರೂ ಬೆಂಗಳೂರಿನಲ್ಲಿಯೇ ಇರಲಿದ್ದಾರೆ. ಇನ್ನು ಬುಧವಾರ ಎಚ್.ಡಿ.ಕುಮಾರಸ್ವಾಮಿ ಜೊತೆಯಲ್ಲಿ ಯಾರು ಪ್ರಮಾಣ ವಚನ ಸ್ವೀಕರಿಸುತ್ತಾರೆ? ಯಾರಿಗೆಲ್ಲಾ ಡಿಸಿಎಂ ಪಟ್ಟ ಒದಗಿ ಬರಲಿ ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

hdk dks congress jds 1

ಜಯನಗರ ಮತ್ತು ಆರ್.ಆರ್.ನಗರ ಎರಡೂ ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗವುದು ಅಂತಾ ಸ್ಪಷ್ಟಪಡಿಸಿದ್ರು.

ಸಚಿವ ಖಾತೆಗಳ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ಸುಳ್ಳು. ಇನ್ನೂ ಅದರ ಬಗ್ಗೆ ಯಾವುದೇ ಚರ್ಚೆಗಳು ಸಹ ನಡೆದಿಲ್ಲ. ಎಲ್ಲ ಶಾಸಕರು ಬೆಂಗಳೂರಿನಲ್ಲಿಯೇ ಇರಲಿದ್ದು, ನಾಳೆ ನಡೆಯುವ ಸಭೆಯಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆಗಳು ನಡೆಯಲಿವೆ. ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಯಲ್ಲಿ ಚರ್ಚೆಗಳು ನಡೆದ ಬಳಿಕವೇ ಡಿಸಿಎಂ ಸ್ಥಾನ ಮತ್ತು ಕುಮಾರಸ್ವಾಮಿ ಜೊತೆ ಯಾರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಗೊತ್ತಾಗಲಿದೆ ಅಂತಾ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *