ಬೆಂಗಳೂರು: ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಒಂದು ವಾರ ಕಾಲ ಕರ್ನಾಟಕದಲ್ಲಿ ಮಾಲ್, ಸಿನಿಮಾ ಥಿಯೇಟರ್, ಎಲ್ಲ ಸಮಾರಂಭಗಳು ಬಂದ್ ಆಗಲಿದೆ.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಸಭೆಯ ಬಳಿಕ ಮಾಲ್, ಚಿತ್ರ ಮಂದಿರ, ಮದುವೆ, ಸಮ್ಮರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಶ್ಚಿತಾರ್ಥ, ನಾಮಕರಣ, ಸಭೆ ಸಮಾರಂಭ ಜಾತ್ರೆ ಎಲ್ಲ ಒಂದು ವಾರ ಕಾಲ ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕೆಂದು ಸರ್ಕಾರ ಕೇಳಿಕೊಂಡಿದೆ.
- Advertisement 2
- Advertisement 3
ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಐಟಿ ಯವರಿಗೆ ವರ್ಕ್ ಫ್ರಂ ಹೋಮ್ ಮಾಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಅಧಿವೇಶನ ಎಂದಿನಂತೆ ನಡೆಯುತ್ತದೆ. ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
- Advertisement 4
https://twitter.com/publictvnews/status/1238398685504868352
ಇಂದು ತೆಗೆದುಕೊಂಡ ನಿರ್ಧಾರ ಇಡಿ ರಾಜ್ಯಕ್ಕೆ ಅನ್ವಯವಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದು ಸಿಎಂ ತಿಳಿಸಿದರು.