ಹಾಸನ: ಎಲ್ಲಾ ಶಾಸಕರೂ ನನ್ನ ತಂದೆಯ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಎಲ್ಲರೂ ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, “ಎಲ್ಲಾ ಕಾಂಗ್ರೆಸ್ ಮುಖಂಡರ ಮನೆಗೆ ಭೇಟಿ ನೀಡುತ್ತಿದ್ದೇನೆ. ನಮಗೆ ವಾತಾವರಣ ಪೂರಕವಾಗಿದ್ದು 6 ಜನ ಶಾಸಕರಿದ್ದಾರೆ. ಎಲ್ಲಾ ಶಾಸಕರೂ ನನ್ನ ತಂದೆಯ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.
ಬಳಿಕ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಗ್ಗೆ ಮಾತನಾಡಿದ ಅವರು, “ದೇವೇಗೌಡರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಗೊತ್ತಿಲ್ಲ. ದೇವೇಗೌಡರು ಎಲ್ಲೇ ಸ್ಪರ್ಧಿಸಿದರೂ ಗೆಲವು ಸಾಧಿಸಲಿದ್ದಾರೆ” ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮತ ಪ್ರಚಾರ ಮಾಡುತ್ತಿದ್ದೇನೆ. ಮತದಾರರ ಪ್ರತಿಕ್ರಿಯೆ ಚೆನ್ನಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಜಂಟಿ ಸಭೆಗಳನ್ನು ನಡೆಸುತ್ತೇವೆ. ಮುಂದಿನ 27ರಂದು ನಗರದಲ್ಲಿ ಕಾರ್ಯಕರ್ತರ ಜೊತೆಗೆ ಬಂದು ನಾಮ ಪತ್ರ ಸಲ್ಲಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv