Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ

Latest

ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ

Public TV
Last updated: December 30, 2021 3:00 pm
Public TV
Share
2 Min Read
Election 2
SHARE

ಲಕ್ನೋ: ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಮುಂದೂಡುವುದಿಲ್ಲ, ಬದಲಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

ELECTION COMMISNERSushil Chandra

ದೇಶದ್ಯಾಂತ ಓಮಿಕ್ರಾನ್ ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಹಿನ್ನಲೆ ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡಿಕೆಗೆ ಕೇಳಿ ಬಂದ ಒತ್ತಡಕ್ಕೆ ಇಂದು ಸುದ್ದಿಗೋಷ್ಠಿಯಲ್ಲಿ ಆಯೋಗದ ತಿರ್ಮಾನ ತಿಳಿಸಿದರು. ಇದನ್ನೂ ಓದಿ: ರಿಕ್ಷಾ ಕೊಡಿಸೆಂದು ತಾಯಿ ಜೊತೆ ಜಗಳವಾಡ್ತಿದ್ದವ ಸಹೋದರನಿಂದ್ಲೇ ಕೊಲೆಯಾದ!

bjp cng

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗ ಚುನಾವಣೆಗಳನ್ನು ಮುಂದೂಡುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಆಯೋಗವನ್ನು ಭೇಟಿ ಮಾಡಿ ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲು ಮನವಿ ಮಾಡಿವೆ. ಈ ಹಿನ್ನಲೆಯಲ್ಲಿ ಎಲ್ಲ ರೀತಿಯ ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವ ಮೂಲಕ ಚುನಾವಣೆಯನ್ನು ನಡೆಸಲಾಗುವುದು. ಜನವರಿ 5 ರಂದು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಚುನಾವಣಾ ಸಮಿತಿಯು ಮುಂದಿನ ವರ್ಷದ ಚುನಾವಣೆಯ ವೇಳಾಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ, ಮತದಾನದ ದಿನಾಂಕದಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್‍ಗಳನ್ನು ಅಳವಡಿಸಲಾಗುವುದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 1 ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‍ಕಾಸ್ಟಿಂಗ್ ಸೌಲಭ್ಯಗಳು ಲಭ್ಯವಿರುತ್ತವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ: ಸಿದ್ದರಾಮಯ್ಯ

80 ವರ್ಷಕ್ಕಿಂತ ಮೇಲ್ಪಟ್ಟ ಜನರು, ಅಂಗವಿಕಲರು ಮತ್ತು ಕೋವಿಡ್ ಪೀಡಿತ ಜನರು ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಚುನಾವಣಾ ಆಯೋಗವು ಅವರ ಮನೆ ಬಾಗಿಲಿಗೆ ತಲುಪುತ್ತದೆ, ಚುನಾವಣಾ ನೀತಿ ಸಂಹಿತೆಗಳನ್ನು ಆಯೋಗ ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದು ಸುಶೀಲ್ ಚಂದ್ರ ತಿಳಿಸಿದರು.

624592 election commission

ಇದಕ್ಕೂ ಮುನ್ನ ಬುಧವಾರ, ಆಯೋಗದ ನಿಯೋಗವು ಜಿಲ್ಲಾಧಿಕಾರಿಗಳು, ಪೊಲೀಸ್ ಮುಖ್ಯಸ್ಥರು, ಆಯುಕ್ತರು, ಐಜಿಗಳು, ಡಿಐಜಿಗಳು ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿತು. ಮಂಗಳವಾರ ಉತ್ತರ ಪ್ರದೇಶದ ರಾಷ್ಟ್ರೀಯ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು. ಇದನ್ನೂ ಓದಿ: ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು

ಕಳೆದ ಸೋಮವಾರ, ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಹಿರಿಯ ಆರೋಗ್ಯ ಸಚಿವಾಲಯದ ಅಧಿಕಾರಿಗಳೊಂದಿಗೆ ಓಮಿಕ್ರಾನ್ ಬೆದರಿಕೆ ಮತ್ತು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಸುರಕ್ಷಿತವಾಗಿ ಚುನಾವಣೆ ನಡೆಸಲು ಅಗತ್ಯವಾದ ಕ್ರಮಗಳ ಕುರಿತು ಸಭೆ ನಡೆಸಿತ್ತು. ನಂತರ, ಕೇಂದ್ರ ಸರ್ಕಾರವು ಕೋವಿಡ್ ಲಸಿಕೆಯನ್ನು ಹೆಚ್ಚಿಸಲು, ಮಾದರಿ ಪರೀಕ್ಷೆಗಳನ್ನು ಹೆಚ್ಚಿಸಲು ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಸಲಹೆ ನೀಡಿತು.

TAGGED:election commissionpolitical partiesSushil Chandraಓಮಿಕ್ರಾನ್‌ಕೇಂದ್ರ ಚುನಾವಣಾ ಆಯೋಗಕೊರೊನಾಚುನಾವಣೆ
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
11 minutes ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
37 minutes ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
43 minutes ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
2 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
2 hours ago
R.ASHOK
Bengaluru City

ರಾಜ್ಯದ ಖಜಾನೆಯನ್ನ ಕಾಂಗ್ರೆಸ್ ತನ್ನ ಖಜಾನೆ ಮಾಡೋಕೆ ಹೊರಟಿದೆ: ಆರ್. ಅಶೋಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?