BJP ಸ್ಥಿರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ – ತೇಜಸ್ವಿ ಸೂರ್ಯ

Public TV
3 Min Read
tejasvi surya

– 2014, 2019ರ ಲೋಕಸಭೆ ಚುನಾವಣೆಗಳಿಂದ ದೇಶದಲ್ಲಿ ಸ್ಥಿರ ಸರ್ಕಾರ ಸ್ಥಾಪನೆ
– 2009ಕ್ಕೆ ಹೋಲಿಸಿದ್ರೆ 12% ಯುವ ಮತದಾರರ ಸಂಖ್ಯೆ ಹೆಚ್ಚಳ

ಬೆಂಗಳೂರು: ಬಿಜೆಪಿ (BJP) ನೇತೃತ್ವದ ಸ್ಥಿರ ಕೇಂದ್ರ ಸರ್ಕಾರದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಶ್ಲಾಘಿಸಿದರು.

ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ʻಲೋಕಸಭಾ ಕ್ಷೇತ್ರಗಳ ಮತದಾರರ ಚೇತನ ಮಹಾ ಅಭಿಯಾನʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2014 ಮತ್ತು 2019ರ ಚುನಾವಣೆಗಳು ದೇಶಕ್ಕೆ ಸ್ಥಿರ ಸರ್ಕಾರ ನೀಡಿವೆ. 2009ರ ಚುನಾವಣೆಗೆ ಹೋಲಿಸಿದ್ರೆ ಸುಮಾರು 12% ಯುವ ಮತದಾರರು ಹೆಚ್ಚುವರಿಯಾಗಿ ಮತದಾನ ಮಾಡಿದ್ದರು. ಅವರು ಬಿಜೆಪಿ, ಮೋದಿಜಿ (Narendra Modi) ಅವರಿಗೆ ಮಾಡಿದ ಆಶೀರ್ವಾದದಿಂದ 34 ವರ್ಷದ ಬಳಿಕ ಈ ದೇಶದಲ್ಲಿ ಸ್ಥಿರ, ಸದೃಢ ಸರ್ಕಾರ ಬಂತು ಎಂದು ವಿಶ್ಲೇಷಿಸಿದರು.  

chandrayaan 3 narendra modi

ಸ್ಥಿರ, ಸದೃಢ ಸರ್ಕಾರದ ಫಲವಾಗಿ ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ ಎಂದ ಅವರು, ಮುಂದಿನ ಕೆಲವು ತಿಂಗಳಿನಲ್ಲಿ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಿಸಲಿದ್ದು, ಅದಕ್ಕೆ ಬಿಜೆಪಿ ಸಹಕಾರ ಕೊಡಲಿದೆ ಎಂದರು. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

50 ಕೋಟಿ ಬಡಜನರ ಜನ್‍ಧನ್ ಬ್ಯಾಂಕ್ ಖಾತೆ ತೆರೆಯಲು ಮತದಾರರು ನೆರವಾಗಿದ್ದಾರೆ. 29 ಲಕ್ಷ ಡಿಬಿಟಿ ಹಣ ವರ್ಗಾವಣೆ ಆಗಿದೆ. 4.5 ಕೋಟಿ ಬಡಜನರಿಗೆ ಮನೆಗಳ ನಿರ್ಮಾಣವಾಗಿದೆ. ದೇಶದ ಹಳ್ಳಿಗಳಲ್ಲಿ ಸ್ವಚ್ಛ ಭಾರತ್ ಮಿಷನ್‌ ಅಡಿಯಲ್ಲಿ 11 ಕೋಟಿ ಶೌಚಾಲಯ ನಿರ್ಮಾಣ ಮಾಡಿಸಲು ಮತದಾರರು ತಮ್ಮ ಮತದ ಮೂಲಕ ಅವಕಾಶ ಕೊಟ್ಟಿದ್ದಾರೆ. 23 ಕೋಟಿ ಬಡ ಕುಟುಂಬಗಳಿಗೆ ಆಯುಷ್ಮಾನ್ ವಿಮೆ ಲಭಿಸಿದೆ. 20 ಕೋಟಿ ಎಸ್ಸಿ, ಎಸ್ಟಿ, ಒಬಿಸಿ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ಲಭಿಸಿದೆ ಎಂದು ವಿವರಿಸಿದರು.

bjp flag 3

ಒಂದು ಮತದ ಫಲವಾಗಿ ಭಾರತ ಚಂದ್ರಯಾನ-3 (Chandrayaan-3) ಮಾಡಿ ದೇಶದ, ವಿಶ್ವದ ದಕ್ಷಿಣ ಧ್ರುವಕ್ಕೆ ತೆರಳಿದ ಮೊದಲ ದೇಶ ಎಂಬ ಕೀರ್ತಿಯನ್ನ ತನ್ನದಾಗಿಸಿಕೊಂಡಿದೆ. ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡುವ ಶಕ್ತಿ ದೇಶಕ್ಕೆ ಸಿಕ್ಕಿದೆ. 500 ವರ್ಷಗಳಿಂದ ಜನರು ಕಾಯುತ್ತಿದ್ದ ಶ್ರೀರಾಮಮಂದಿರದ ನಿರ್ಮಾಣ ಆಗಿದೆ. ಆರ್ಟಿಕಲ್ 370 ರದ್ದು ಮಾಡುವ ಮೂಲಕ ಮತ್ತು ಭಾರತ ಸಂವಿಧಾನವನ್ನ ಜಮ್ಮುಕಾಶ್ಮೀರಕ್ಕೆ ಅನುಷ್ಠಾನಕ್ಕೆ ತರುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಮೆಜಾನ್ ಮ್ಯಾನೇಜರ್ ಹತ್ಯೆ ಕೇಸ್; ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದ 18ರ ಯುವಕನ `ಮಾಯಾ ಗ್ಯಾಂಗ್’

ಈ ಅಭಿವೃದ್ಧಿಗೆ ದೇಶದ ಮತದಾರರು ಕಾರಣ. ಸದೃಢ ಸರ್ಕಾರ ನೀಡಿದ ಮತದಾರರನ್ನ ನಾನು ಅಭಿನಂದಿಸುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರನ್ನು ಮತದಾನಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಅಭಿಯಾನ ನಡೆಯಲಿದೆ. ಅಭಿಯಾನದ ಯಶಸ್ಸಿಗೆ ತಂಡ ರಚಿಸಿದ್ದು, ಪಿ.ರಾಜೀವ್, ಅರವಿಂದ ಬೆಲ್ಲದ್‌, ವಿವೇಕ್ ರೆಡ್ಡಿ, ಲೋಕೇಶ್ ಹಾಗೂ ನಾನು ರಾಜ್ಯ ಸಂಚಾಲನಾ ಸಮಿತಿಯಲ್ಲಿ ಇದ್ದೇವೆ. ಇದೇ ರೀತಿಯ ತಂಡಗಳನ್ನ ಜಿಲ್ಲೆ, ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ರಚನೆಯಾಗಿವೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್‍ಕುಮಾರ್ ಸುರಾಣ, ಮಾಲೀಕಯ್ಯ ಗುತ್ತೇದಾರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಡಾ.ಸಿ.ಎನ್ ಅಶ್ವಥ್‌ ನಾರಾಯಣ್‌ ಪ್ರಮುಖರು ಭಾಗವಹಿಸಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article