ಜಾರ್ಜ್ಟೌನ್ (ಗಯಾನಾ): ಪಾಕಿಸ್ತಾನ ತಂಡದಲ್ಲಿ (Pakistan Team) ಎಲ್ಲಾ ಉತ್ತಮ ಬೌಲರ್ಗಳೇ ಇದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಶ್ಲಾಘಿಸಿದ್ದಾರೆ.
View this post on Instagram
USAನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ರೋಹಿತ್, ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್ಗಳೇ ಇದ್ದಾರೆ. ಆದ್ರೆ ಪ್ರತ್ಯೇಕವಾಗಿ ನಾನು ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ. ಹೆಸರು ತೆಗೆದುಕೊಂಡ್ರೆ ದೊಡ್ಡ ಕಾಂಟ್ರವರ್ಸಿ ಆಗುತ್ತೆ. ಒಬ್ಬ ಪ್ಲೇಯರ್ ಹೆಸರು ಹೇಳಿದ್ರೆ ಮತ್ತೊಬ್ಬರು ಸಹಿಸಲ್ಲ. ನನಗನ್ನಿಸುತ್ತೆ ಎಲ್ಲಾ ಬೌಲರ್ಗಳು ಉತ್ತಮವಾಗಿಯೇ ಇದ್ದಾರೆ ಎಂದು ಹೊಗಳಿದ್ದಾರೆ.
ಸದ್ಯ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಟಿ20 ತಂಡವನ್ನ ಮುನ್ನಡೆಸುತ್ತಿದ್ದಾರೆ. ಈಗಾಗಲೇ ವಿಂಡೀಸ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಸತತ 2 ಪಂದ್ಯಗಳಲ್ಲಿ ಸೋತಿರುವ ಟೀಂ ಇಂಡಿಯಾ ಮಾಡು ಇಲ್ಲವೇ ಮಡಿ ಹಂತದಲ್ಲಿದ್ದು, ಮುಂದಿನ ಮೂರು ಪಂದ್ಯಗಳಲ್ಲೂ ಗೆಲುವು ಸಾಧಿಸುವ ಅನಿವಾರ್ಯತೆ ಇದೆ. ಇದನ್ನೂ ಓದಿ: WorldCup ಟೂರ್ನಿಗೆ ಆಸೀಸ್ ಬಲಿಷ್ಠ ತಂಡ ಪ್ರಕಟ – ಸ್ಟಾರ್ ಆಲ್ರೌಂಡರ್ಗೆ T20 ನಾಯಕತ್ವದ ಹೊಣೆ
ಇದೇ ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಏಕದಿನ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಅದಕ್ಕಾಗಿ ರೋಹಿತ್ ಶರ್ಮಾ ಪೂರ್ವ ತಯಾರಿ ನಡೆಸುತ್ತಿದ್ದಾರೆ. ಏಕೆಂದರೆ ಮುಂಬರುವ ಏಷ್ಯಾಕಪ್ (AsiaCup) ಹಾಗೂ ವಿಶ್ವಕಪ್ (WorldCup) ಟೂರ್ನಿ ರೋಹಿತ್ ಶರ್ಮಾ ನಾಯಕತ್ವಕ್ಕೂ ಸವಾಲಾಗಿದೆ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಟೀಂ ಇಂಡಿಯಾ ಐಸಿಸಿ ಟ್ರೋಫಿಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ. 2011ರಲ್ಲಿ ಏಕದಿನ ವಿಶ್ವಕಪ್, 2010ರಲ್ಲಿ ಟಿ20 ಏಷ್ಯಾಕಪ್ ಹಾಗೂ 2013ರಲ್ಲಿ ಚಾಂಪಿಯನ್ ಟ್ರೋಫಿ ಗೆದ್ದಿದ್ದ ಭಾರತ ಆ ನಂತರ ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಗೆದ್ದಿಲ್ಲ. ಇದನ್ನೂ ಓದಿ: 5 ವರ್ಷದ ಹಿಂದಿನ ಬಾಲ್ ಬಳಸಿ ಇಂಗ್ಲೆಂಡ್ ಗೆದ್ದ ಆರೋಪ – ಆಂತರಿಕ ತನಿಖೆ ಮಾಡ್ತೀನಿ ಎಂದ ಬಾಲ್ ತಯಾರಕ
2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನ ಹಾದಿಯಲ್ಲಿದ್ದ ಭಾರತ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು. ಕಳೆದ ವರ್ಷ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಸೆಮಿ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿತ್ತು. ಈ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲೂ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲನುಭವಿಸಿತು. ಈ ಬಾರಿ ಭಾರತ ಸಂಪೂರ್ಣ ಆತಿಥ್ಯದೊಂದಿಗೆ ವಿಶ್ವಕಪ್ ಟೂರ್ನಿ ಆಯೋಜನೆಗೊಂಡಿದೆ. ಹಲವು ದಿಗ್ಗಜರ ಪಾಲಿಗೂ ಇದು ಕೊನೆಯ ವಿಶ್ವಕಪ್ ಆಗಿರುವುದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಂ ಇಂಡಿಯಾಕ್ಕೆ ಇದೆ.
Web Stories