Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

Bengaluru City

Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

Public TV
Last updated: March 7, 2024 4:28 pm
Public TV
Share
3 Min Read
Mukti Gupteshwar Mandir
SHARE

ದೇವಸ್ಥಾನ: ಮುಕ್ತಿ ಗುಹೇಶ್ವರ ದೇವಾಲಯ (ಶಿವದೇವಾಲಯ)
ಸ್ಥಳ: ಮಿಂಟೋ, ಆಸ್ಟ್ರೇಲಿಯಾ
ಪ್ರವೇಶ: ಉಚಿತ
ಪ್ರವೇಶ ಸಮಯ: ಬೆಳಗ್ಗೆ 10 ರಿಂದ 12 ಗಂಟೆ
ಸಂಜೆ 5 ರಿಂದ 7 ಗಂಟೆ
ವಾರಾಂತ್ಯ & ರಜಾದಿನಗಳಲ್ಲಿ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆ
ಭೇಟಿಗೆ ಸೂಕ್ತ ಸಮಯ: ಫೆಬ್ರವರಿಯಿಂದ ಮಾರ್ಚ್ ಮಹಾ ಶಿವ ರಾತ್ರಿ ಅಥವಾ ಮಾರ್ಚ್ ನಿಂದ ಏಪ್ರಿಲ್ ಗಣೇಶ ಚತುರ್ಥಿಯ ಸಮಯ.

`ಜಟೆಯಲ್ಲಿ ಕಟ್ಟಿದ ನದಿಯ, ತಲೆಯಲ್ಲಿ ಮುಡಿದ ಶಶಿಯ, ಕಣ್ಣೊಳಗೆ ಉರಿವಾ ಬೆಂಕಿಯಾ, ಬಚ್ಚಿಟ್ಟುಕೊಂಡು ನಗುವಾ ನಮ್ಮ ಶಿವನಾ ಕಂಡೆಯಾ, ಅಮ್ಮಮ್ಮ ಅವನಾ ಮಹಿಮೆಯನು ನೀನೂ ಬಲ್ಲೆಯಾ…’ 982ರಲ್ಲಿ ತೆರೆಕಂಡ ಚೆಲ್ಲಿದರಕ್ತ ಸಿನಿಮಾದ ಈ ಗೀತೆಯಲ್ಲಿ ಶಿವನ ಮಹಿಮೆಯನ್ನು ಹಾಡಿಹೊಗಳಿದ್ದಾರೆ. ಭಾರತದಲ್ಲಿ ಶಿವನಿಲ್ಲದ (Lord Shiva) ಊರೇ ಇಲ್ಲ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಿರ್ಮಾಣಗೊಂಡಿರುವ ದೇವಾಲಯಗಳು ಒಂದಕ್ಕಿಂದ ಒಂದು ಮೀರಿಸಿದಂತಿವೆ. ಭಾರತದಲ್ಲಿ ಮಾತ್ರವಲ್ಲದೇ ಪಾಕಿಸ್ತಾನನದ ಪಂಜಾಬ್, ಆಸ್ಟ್ರೇಲಿಯಾದ ಮಿಂಟೋ, ನೇಪಾಳದ ಕಠ್ಮಂಡು, ಶ್ರೀಲಂಕಾದಲ್ಲಿಯೂ, ಮಾರಿಶಸ್‌ಗಳಲ್ಲು ಶಿವನ ಅದ್ಧೂರಿ ದೇವಾಲಗಳು ನೆಲೆಯೂರಿದ್ದು, ಇಂದಿಗೂ ಅವರು ಶಿವನ ಭಕ್ತಿಯನ್ನು ಜನರಿಗೆ ಸಾರುತ್ತಿವೆ. ಅದರಲ್ಲೂ ಆಸ್ಟ್ರೇಲಿಯಾದಲ್ಲಿ ನಿರ್ಮಾಣಗೊಂಡಿರುವ ಮುಕ್ತಿ ಗುಹೇಶ್ವರ ದೇವಾಲಯ (Mukti Gupteshwar Mandir) ಜನಮನ ಸೆಳೆದಿದೆ.

Mukti Gupteshwar Mandir 3

ಸಿಡ್ನಿಯ ಹೊರವಲಯದಲ್ಲಿರುವ ಮಿಂಟೋ ಎಂಬ ನಗರದಲ್ಲಿ (Minto City) 1999ರಲ್ಲಿ ಈ ದೇವಾಲಯದ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಸುಮಾರು 15 ಸಾವಿರ ಚದರಡಿ ವ್ಯಾಪ್ತಿಯಲ್ಲಿ ಗುಹಾದೇವಾಲಯ ನಿರ್ಮಾಣಗೊಂಡಿದೆ. ಹೆಸರೇ ಹೇಳುವಂತೆ ಈ ದೇವಾಲಯ ಗುಹೆಯಲ್ಲಿ ಇದೆ. ಈ ಅಪೂರ್ವ ದೇವಾಲಯದ ನೆಲದ ಮೇಲೆ ಇರುವುದು ಗಣೇಶನ ಒಂದು ಗುಡಿ ಮಾತ್ರ. ಉಳಿದವು ಮೆಟ್ಟಿಲುಗಳನ್ನು ಇಳಿದು ಭೂಗತ ಶಿವದೇವಾಲಯಕ್ಕೆ ಹೋಗಬೇಕಾಗುತ್ತದೆ.

65,000 ಘನ ಮೀಟರ್‌ನಷ್ಟು ಮಣ್ಣನ್ನು ಕೊರೆದು, ನೆಲದಡಿಯಲ್ಲಿ ಗುಹೆಗಳನ್ನು ರೂಪಿಸಿ, ಅದರೊಳಗೆ ಈ ದೇವಾಲಯವನ್ನು ನಿರ್ಮಿಸಲಾಗಿದೆ. ಇಂದಿಗೂ ಜಗತ್ತಿನ ಏಕಮಾತ್ರ ಮಾನವ ನಿರ್ಮಿತ ಗುಹಾ ದೇವಾಲಯ ಎಂಬುದು ಇದರ ಖ್ಯಾತಿ. ಇದನ್ನೂ ಓದಿ: ಅಯೋಧ್ಯೆ ಮಾದರಿ ಮಹಾಶಿವರಾತ್ರಿಗೆ ಶಿವಶರಣರ ನಾಡು ಅಣಿ

Mukti Gupteshwar Mandir 5

ನೇಪಾಳದ (Nepal) ರಾಜಮನೆತನದ ಬಳಿ ಒಂದು ಪ್ರಾಚೀನ ಶಿವಲಿಂಗವಿತ್ತು. ಈ ಶಿವಲಿಂಗವು ಭಾರತದ 12 ಜ್ಯೋತಿರ್ಲಿಂಗಗಳ ಜೊತೆಗೆ 13ನೇ ಮತ್ತು ಕೊನೆಯ ಜ್ಯೋತಿರ್ಲಿಂಗ ಎಂದು ಹೇಳಲಾಗಿದೆ. ಜ್ಯೋತಿರ್ಲಿಂಗದ ಜೊತೆಗೆ 7996 ಶ್ಲೋಕಗಳ 8 ಸಂಪುಟಗಳ ವಿಶೇಷ ಗ್ರಂಥವನ್ನೂ ಇಲ್ಲಿ ಇರಿಸಲಾಗಿದೆ. ಈ ಶಿವಲಿಂಗವನ್ನು ದಕ್ಷಿಣ ಗೋಳಾರ್ಧದಲ್ಲಿ ಹೆಬ್ಬಾವಿನ ಮುಖದ ಬಳಿ ಸ್ಥಾಪಿಸಬೇಕೆಂದು ಈ ಶ್ಲೋಕಗಳು ನಿಗದಿಸಿದ್ದವು. ಇದರಲ್ಲಿ ವಿವರಿಸಿದ ಲಕ್ಷಣಗಳ ಆಧಾರದಲ್ಲಿ ಆಸ್ಟ್ರೇಲಿಯಾದಲ್ಲಿ ಜಾಗ ಹುಡುಕಿ ಅದರಂತೆಯೇ ಲಿಂಗವನ್ನು ನಿರ್ಮಿಸಲಾಯಿತು.

Mukti Gupteshwar Mandir 3

1999ರಲ್ಲಿ ನೇಪಾಳದ ಆಗಿನ ರಾಜ ಬೀರೇಂದ್ರ ಬೀರ್ ಬಿಕ್ರಮ್ ಶಾ ದೇವ್ (Birendra Bir Bikram Shah Dev) ಅವರು ಆಸ್ಟ್ರೇಲಿಯಾದ ಹಿಂದೂ ಭಕ್ತರಿಗೆ ಈ ಶಿವಲಿಂಗವನ್ನು ಕಾಣಿಕೆಯಾಗಿ ನೀಡಿದರು. ಅಲ್ಲಿ ಈ ಶಿವಲಿಂಗಕ್ಕಾಗಿ ಒಂದು ಬೃಹತ್ ಗುಹಾ ದೇವಾಲಯ ನಿರ್ಮಾಣದ ಯೋಜನೆ ತಯಾರಿಸಲಾಗಿತ್ತು. ಸುಮಾರು 15 ಸಾವಿರ ಚದರಡಿ ವ್ಯಾಪ್ತಿಯ ಈ ಗುಹಾದೇವಾಲಯದಲ್ಲಿ 13ನೇ ಜ್ಯೋತಿರ್ಲಿಂಗದ ಜೊತೆಗೆ ಉಳಿದ 12 ಜ್ಯೋತಿರ್ಲಿಂಗಗಳ ಪ್ರತಿಕೃತಿಗಳಿವೆ, ಕೃಷ್ಣಶಿಲೆಯಲ್ಲಿ ರಚಿಸಿದ 108 ಶಿವಲಿಂಗಗಳಿವೆ.

Mukti Gupteshwar Mandir 4

ಗರ್ಭಗುಡಿಯಲ್ಲಿ ಶಿವಲಿಂಗದ ಸಮೀಪ 10 ಮೀಟರ್ ಆಳದ ಪೆಟಾರಿಯನ್ನು (ಮರದಲ್ಲಿ ತಯಾರಿಸಲಾದ ಪೆಟ್ಟಿ) ನೆಲದೊಳಗೆ ಹೂಳಲಾಗಿದೆ. ಇದರೊಳಗೆ ಆಸ್ಟ್ರೇಲಿಯಾದ ಭಕ್ತಸಮುದಾಯ 21 ಲಕ್ಷ ಬಾರಿ ಕೈಯಲ್ಲೇ ಬರೆದ `ಓಂ ನಮಃ ಶಿವಾಯ’ ಮಂತ್ರದ ಪುಟಗಳಿವೆ. ಇಂದಿಗೂ ಕೋಟ್ಯಂತರ ಹಿಂದೂ ಭಕ್ತರು ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ವಿದೇಶಿಗರೂ ಸಹ ಇಲ್ಲಿಗೆ ಭೇಟಿ ನೀಡಿ ಪೂಜೆ, ಹರಕೆ ತೀರಿಸುತ್ತಾರೆ ಎಂಬುದು ವಿಶೇಷ.

ಶಿವದೇವಾಲಯದಲ್ಲಿ ಆಚರಿಸಲಾಗುವ ಹಬ್ಬಗಳು: ಆಸ್ಟ್ರೇಲಿಯಾದಲ್ಲಿ ಅತ್ಯಂತ ಜನಪ್ರಿಯವಾಗಿರುವ ಈ ಶಿವದೇವಾಲಯದಲ್ಲಿ ಮಹಾಶಿವರಾತ್ರಿ, ಗಣೇಶ ಚತುರ್ಥಿ, ರಾಮನವಮಿ, ಶ್ರಾವಣಮಾಸದಂದು ಅದ್ಧೂರಿ ಪೂಜಾ ಕೈಂಕರ್ಯಗಳು ನೆರವೇರುತ್ತವೆ.

TAGGED:australiaLord ShivaMukti Gupteshwar Mandirಆಸ್ಟ್ರೇಲಿಯಾಮಹಾಶಿವರಾತ್ರಿಮಿಂಟೋ ನಗರಮುಕ್ತಿ ಗುಹೇಶ್ವರ ದೇವಾಲಯಶಿವಲಿಂಗ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
4 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
29 minutes ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
51 minutes ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?