Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

Bengaluru City

ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

Public TV
Last updated: August 29, 2018 6:56 pm
Public TV
Share
3 Min Read
phone tapping
SHARE

ರಾಜ್ಯ ರಾಜಕಾರಣದಲ್ಲಿ ಸದ್ಯ ಫೋನ್ ಕದ್ದಾಲಿಕೆ(ಫೋನ್ ಟ್ಯಾಪಿಂಗ್) ಕುರಿತ ಆರೋಪ ಪ್ರತ್ಯಾರೋಪ ಹೆಚ್ಚಾಗಿದ್ದು, ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ಫೋನ್ ಕದ್ದಾಲಿಕೆ ಕುರಿತ ಗಂಭೀರ ಆರೋಪ ಮಾಡಿದೆ. ಫೋನ್ ಕದ್ದಾಲಿಕೆ ಆರೋಪ ಬರುವುದು ಇದೇ ಮೊದಲೆನಲ್ಲ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ ಎಂದರೇನು? ಯಾರು ಮಾಡಬಹುದು? ಹೇಗೆ ಮಾಡುತ್ತಿದ್ದಾರೆ ಎನ್ನುವ ವಿಚಾರವನ್ನು ವಿವರಿಸಲಾಗಿದೆ.

ಕ್ರಿಮಿನಲ್ ಕೃತ್ಯ ಎಸಗಲಿರುವವರನ್ನು, ಎಸಗಿದವರನ್ನು ಎಲ್ಲೇ ಅಡಗಿದ್ದರೂ ಪತ್ತೆ ಹಚ್ಚಿ ಅವರನ್ನು ಪತ್ತೆ ಹಚ್ಚಲು ಫೋನ್ ಕದ್ದಾಲಿಕೆ ಮಾಡಲಾಗುತ್ತದೆ. ಕಾನೂನಿನ ಅನ್ವಯ ಸರ್ಕಾರದ ಕೆಲವೇ ಇಲಾಖೆಗಳಿಗೆ ಮಾತ್ರ ಫೋನ್ ಕದ್ದಾಲಿಕೆ ಮಾಡಲು ಅವಕಾಶವಿದ್ದು, ಈಗ ಕೆಲವು ಸಮಾಜ ಘಾತುಕ ಶಕ್ತಿಗಳು ಫೋನ್ ಟ್ಯಾಪಿಂಗ್ ಮಾಡಲು ಆರಂಭಿಸಿವೆ. ಇಂದು ರಾಜಕಾರಣಿಗಳು, ಗಣ್ಯ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಹೆಚ್ಚಾಗುತ್ತಿದ್ದು, ಅಡಳಿತ ಪಕ್ಷದ ವಿರುದ್ಧ ವಿರೋಧಿ ಪಕ್ಷಗಳು ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದೆ.

phone tapping 2

 

ಏನಿದು ಫೋನ್ ಪದ್ದಾಲಿಕೆ?
ವಿಶೇಷ ಎಲೆಕ್ಟ್ರಾನಿಕ್ ಸಾಧನಗಳ ನೆರವಿನಿಂದ ಇಬ್ಬರು ಮಾತನಾಡುತ್ತಿರುವುದನ್ನು ಮೂರನೇಯವರು ಕದ್ದಾಲಿಸುವುದು ಫೋನ್ ಕದ್ದಾಲಿಕೆ. ಫೋನ್ ಕದ್ದಾಲಿಕೆಗೆ ಕಾನೂನಿನಡಿ ಅವಕಾಶವೂ ಇದೆ. ಆದರೆ ಇದಕ್ಕೆ ನಿರ್ದಿಷ್ಟ ರೀತಿ ನೀತಿಗಳಿವೆ. ಅದು ಹೊರತಾಗಿ ಕದ್ದಾಲಿಸಿದರೆ ಅದು ಕಾನೂನಿನ ಅಡಿ ಅಪರಾಧವಾಗುತ್ತದೆ.

ಆಧುನಿಕ ತಂತ್ರಜ್ಞಾನ ಬೆಳೆದಂತೆ ಫೋನ್ ಕದ್ದಾಲಿಕೆ ಮಾಡಲೆಂದೇ ಹೊಸ ಸಾಧನಗಳು ತಯಾರಾಗಿವೆ. ಅಲ್ಲದೇ ದೇಶ ವಿದೇಶದಿಂದ ಫೋನ್ ಕದ್ದಾಲಿಕೆ ಮಾಡುವ ಸಾಧನಗಳು ಅಕ್ರಮವಾಗಿ ದೇಶದೊಳಗೆ ರವಾನಿಸುವ ಜಾಲವೂ ಹುಟ್ಟಿಕೊಂಡಿದೆ. ತಜ್ಞರ ಪ್ರಕಾರ ಈ ಸಾಧನಗಳು ಸುಮಾರು ಎರಡು ಕಿ.ಮೀ. ದೂರದ ವರೆಗಿನ ವ್ಯಕ್ತಿಗಳ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

phone

ಯಾರಿಗೆ ಅನುಮತಿ ಇದೆ?
ಸಮಾಜ ಘಾತುಕ ಶಕ್ತಿಗಳ ಚಲನವಲನ, ಕ್ರಿಮಿನಲ್ ಸಂಚು, ದೇಶದ, ಗಣ್ಯರ ವಿರುದ್ಧ ದಾಳಿಯಂತಹ ಚಟುವಟಿಕೆಗಳನ್ನು ತಡೆಯಲು ಗುಪ್ತಚರ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡುತ್ತವೆ. ಸಿಬಿಐ, ಗುಪ್ತಚರ ಇಲಾಖೆ, ಕಂದಾಯ ಗುಪ್ತಚರ, ಮಾದಕವಸ್ತು ನಿಯಂತ್ರಣ ದಳ, ಆದಾಯ ತೆರಿಗೆ ಇಲಾಖೆ ಮತ್ತು ಪೋಲಿಸ್ ಇಲಾಖೆ ಕದ್ದಾಲಿಕೆಯನ್ನು ಕಾನೂನಿನ ಅಡಿ ಮಾಡಬಹುದು. ಫೋನ್ ಕದ್ದಾಲಿಸಲು ಉಪಗ್ರಹ ಆಧಾರಿತ ವ್ಯವಸ್ಥೆಗಳು, ಟೆಲಿಫೋನ್ ಎಕ್ಸ್ ಚೇಂಜ್‍ನ ನೆರವಿನೊಂದಿಗೆ ಪ್ರತ್ಯೇಕ ಎಲೆಕ್ಟ್ರಾನಿಕ್ ವ್ಯವಸ್ಥೆಗಳ ಮೂಲಕ ಕದ್ದಾಲಿಕೆ ಮಾಡಲಾಗುತ್ತದೆ.

ನಿಯಮ ಏನು ಹೇಳುತ್ತೆ: 1885ರ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 5 (2)ರಲ್ಲಿ 419ನೇ ಮತ್ತು 419ಎ ನಿಬಂಧನೆಗಳಲ್ಲಿ ಫೋನ್ ಕರೆಗಳ ಮಾಹಿತಿ ಪಡೆಯುವ, ಕೇಳುವ ಬಗ್ಗೆ ಹೇಳಲಾಗಿದೆ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ, ಭದ್ರತೆಗೆ ತೊಂದರೆಯಾಗುವ ವಿಚಾರಗಳಲ್ಲಿ ಫೋನ್ ಕದ್ದಾಲಿಕೆಗೆ ಅವಕಾಶವಿದ್ದು ಕ್ಯಾಬಿನೆಟ್ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ ಈ ಬಗ್ಗೆ ನಿರ್ಧಾರ ಕೈಗೊಂಡು, ಗೃಹ ಇಲಾಖೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಗೃಹ ಇಲಾಖೆ 2 ತಿಂಗಳೊಳಗೆ ಪರಿಶೀಲನೆ ನಡೆಸಿ ತೀರ್ಮಾನಿಸಬೇಕು. ಒಂದು ಬಾರಿ ಅನುಮತಿ ನೀಡಿದರೆ ಅದು 6 ತಿಂಗಳ ಅವಧಿಯದ್ದಾಗಿರುತ್ತದೆ. ಹೀಗೆ ಕದ್ದಾಲಿಕೆ ವೇಳೆ ಪಡೆದ ಮಾಹಿತಿಗಳನ್ನು ಬಳಸಿ 2 ತಿಂಗಳೊಳಗೆ ಅವುಗಳನ್ನು ನಾಶಪಡಿಸಬೇಕು. ಇದು ಹೊರತಾಗಿ ಕೋರ್ಟ್ ನಿರ್ದೇಶನದ ಮೇರೆಗೆ ಫೋನ್ ಕದ್ದಾಲಿಕೆಗೆ ಅವಕಾಶವಿದೆ.

ಒಂದೊಮ್ಮೆ ಫೋನ್ ಕದ್ದಾಲಿಕೆಯಾದರೆ ವ್ಯಕ್ತಿಯ ಖಾಸಗಿ ತನಕ್ಕೆ ಧಕ್ಕೆ ತಂದದ್ದಕ್ಕಾಗಿ ಆತ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಬಹುದು. ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಬಹುದು. ಅಕ್ರಮ ಕದ್ದಾಲಿಕೆ ವಿಚಾರದ ಬಗ್ಗೆ ಭಾರತೀಯ ಟೆಲಿಗ್ರಾಫ್ ಕಾಯ್ದೆಯ ಸೆ26(ಬಿ) ಅಡಿಯಲ್ಲಿ ಕೋರ್ಟ್‍ಗೂ ದೂರು ನೀಡಬಹುದು. ಒಂದು ವೇಳೆ ಕದ್ದಾಲಿಸಿದ್ದು ಸಾಬೀತಾದರೆ ಅಪರಾಧಿಗೆ 3 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶವಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

phone tapping 1

 

TAGGED:bengaluruIntelligence DepartmentLegalpoliticsPublic TVState GovernmentTelephone tappingಕಾನೂನುಗುಪ್ತಚರ ಇಲಾಖೆಪಬ್ಲಿಕ್ ಟಿವಿಫೋನ್ ಕದ್ದಾಲಿಕೆಬೆಂಗಳೂರುರಾಜಕೀಯರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
1 hour ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
2 hours ago
big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
2 hours ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
2 hours ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
3 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?