ಇಸ್ಲಾಮಾಬಾದ್: ರ್ಯಾಲಿ ವೇಳೆ ಗುಂಡಿನ ದಾಳಿಗೊಳಗಾಗಿ (Shooting) ಪ್ರಾಣಾಪಾಯದಿಂದ ಪಾರಾದ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರು ನನಗೆ ದೇವರು ಮರು ಜನ್ಮ ನೀಡಿದ್ದಾರೆ ಎಂದು ಹೇಳಿಕೆ ನೀಡಿದರು.
ಪಾಕಿಸ್ತಾನದ ಪಂಜಾಬ್ನಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ವೇಳೆ ಬಂದೂಕುಧಾರಿಯೊಬ್ಬ ಇಮ್ರಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾನೆ. ಇದರಿಂದ ಇಮ್ರಾನ್ ಖಾನ್ ಅವರ ಎರಡೂ ಕಾಲುಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಇಮ್ರಾನ್ ಖಾನ್ ಅವರ ಸಹಾಯಕ, ಪಿಟಿಐ ಮುಖಂಡ ಫೈಸಲ್ ಜಾವೇದ್ ಹಾಗೂ ಇನ್ನೂ ನಾಲ್ವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಗುಂಡಿನ ದಾಳಿಯಲ್ಲಿಯೂ ಗ್ರೇಟ್ ಎಸ್ಕೇಪ್ ಆದ ಇಮ್ರಾನ್ ಖಾನ್ ಅವರು ಬಳಿಕ ಮಾತನಾಡಿ, ನನಗೆ ಅಲ್ಲ ಇನ್ನೊಂದು ಜೀವ ಕೊಟ್ಟಿದ್ದಾನೆ. ಘಟನೆಯ ಬಗ್ಗೆ ನಾನು ಯಾರನ್ನೂ ದೂಷಿಸುವುದಿಲ್ಲ. ಆದರೆ ನಾನು ಈ ಘಟನೆಯ ವಿರುದ್ಧವಾಗಿ ಹೋರಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ – ಗ್ರೇಟ್ ಎಸ್ಕೇಪ್
ರ್ಯಾಲಿ ವೇಳೆ ಇಮ್ರಾನ್ ಖಾನ್ ಸೇರಿದಂತೆ ಪಕ್ಷದ ಮುಖಂಡರು ತೆರೆದ ಕಂಟೇನರ್ನಲ್ಲಿದ್ದರು. ಗುಂಡಿನ ದಾಳಿ ನಡೆದ ತಕ್ಷಣ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ಕರೆದೊಯ್ಯಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಲಾಹೋರ್ಗೆ ಕಳುಹಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯನ್ನು ಇದೀಗ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ