ಬೆಂಗಳೂರು: ಸ್ವಂತ ಅಳಿಯನನ್ನೇ ಕಿಡ್ನ್ಯಾಪ್ ಮಾಡಿಸಿದ್ದಾರೆ ಅನ್ನೋ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ (Congress) ನಾಯಕಿ ದಿವ್ಯಪ್ರಭಾ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ (Bengaluru Puttenahalli Police Station) ಪ್ರಕರಣ ದಾಖಲಾಗಿದೆ.
ಸ್ವಂತ ಅಳಿಯನನ್ನೇ ಕಿಡ್ನ್ಯಾಪ್ ಮಾಡಿಸಿದ್ದರು ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಪ್ರಯತ್ನಿಸಿದ್ದರು ಎಂದು ಅಳಿಯ ನವೀನ್ಗೌಡ ದೂರು ನೀಡಿದ್ದರು. ದೂರನ್ನಾಧರಿಸಿ ದಿವ್ಯಪ್ರಭಾ, ಮಗಳು ಸ್ಪಂದನಾ, ಪತಿ ಪರಶುರಾಮ್ ಸೇರಿ 6 ಜನರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಇದನ್ನೂ ಓದಿ: ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ
ಏನಿದು ಪ್ರಕರಣ?
ದಿವ್ಯಪ್ರಭಾ ಮಗಳು ಸ್ಪಂದನಾರನ್ನ ಮದುವೆಯಾಗಿ ಕೌಟುಂಬಿಕ ಕಾರಣಗಳಿಂದ ದೂರವಾಗಿದ್ದೆ. ಸ್ಪಂದನಾಗೆ ಅಕ್ರಮ ಸಂಬಂಧವಿದೆ ಅಂತಾ ತಿಳಿದು, ಒಂದಿಷ್ಟು ಅಶ್ಲೀಲ ಚಾಟ್ಗಳನ್ನೂ ನೋಡಿದ್ದರಿಂದ ಕುಟುಂಬದಿಂದ ದೂರವಾಗಿದ್ದೆ. ಹಾಗಾಗಿ ದಿವ್ಯಾಪ್ರಭಾ ಮನೆಯಿಂದಲೇ ನನ್ನನ್ನ ಕಿಡ್ನ್ಯಾಪ್ ಮಾಡಿಸಿದ್ರು. ನಂತರ ಜೆ.ಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಪ್ರಯತ್ನಪಟ್ಟಿದ್ದರು ಎಂದು ನವೀನ್ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ – ಫೇಸ್ಬುಕ್ನಲ್ಲಿ ರೋಹಿಣಿ ವಿರುದ್ಧ ರೂಪಾ ಕಿಡಿ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k