Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್‌

Public TV
Last updated: November 11, 2024 5:49 pm
Public TV
Share
3 Min Read
nikhil kumaraswamy
SHARE

– ಮಂಡಿಯೂರಿ ಜನತೆಗೆ ನಮಸ್ಕರಿಸಿದ ನಿಖಿಲ್‌ – ರೇವತಿ

ರಾಮನಗರ: ಹಳ್ಳಿ-ಹಳ್ಳಿಗಳಲ್ಲಿ ನಿಖಿಲ್ ಗೆಲ್ಲಬೇಕು ಎಂದು ಜನ ಅಂದುಕೊಂಡಿದ್ದಾರೆ. ಇದು ನಿಖಿಲ್ ಭವಿಷ್ಯದ ಪ್ರಶ್ನೆ ಅಲ್ಲ, ಪ್ರಾದೇಶಿಕ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದೆ. ಈ ಭೂಮಿ ಮೇಲೆ ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಮೂರೂವರೆ ವರ್ಷ ಅವಕಾಶ ಮಾಡಿಕೊಡಿ ಎಂದು ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಜನತೆಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಪತ್ನಿ ರೇವತಿ ಜೊತೆಗೂಡಿ ನಿಖಿಲ್‌ ಮಂಡಿಯೂರಿ ಜನರಿಗೆ ನಮಸ್ಕರಿಸಿದ್ದಾರೆ.

ರಾಮನಗರದಲ್ಲಿ (Ramanagara) ಪ್ರಚಾರದ ವೇಳೆ ಮಾತನಾಡಿದ ಅವರು, ನಾನು ಭಾವನಾತ್ಮಕ ಜೀವಿ, ಕ್ಷಮಿಸಿ ಇದರ ಹಿಂದೆ ಬೇರೆ ಉದ್ದೇಶ ಇಲ್ಲ. ಪ್ರತೀ ಹಳ್ಳಿಯಲ್ಲಿ ತಾಯಂದಿರು ಆಶೀರ್ವಾದ ಮಾಡಿದರು. ಪ್ರತೀ ದೇವಸ್ಥಾನಗಳ ದೇವರು ಆಶೀರ್ವಾದ ಮಾಡಿದ್ದಾರೆ. ನನಗೊಂದು ಅವಕಾಶ ಮಾಡಿಕೊಡುವ ಆತ್ಮಸ್ಥೈರ್ಯ ಇಲ್ಲಿನ ಜನ ಮೂಡಿಸಿದ್ದಾರೆ ಅದಕ್ಕಾಗಿ, ಇದನ್ನು ಕಂಡು ನಾನೆಂಥ ಪುಣ್ಯವಂತ ಅನ್ನಿಸಿತು. ಹಳ್ಳಿ ಹಳ್ಳಿಗಳಲ್ಲಿ ನಿಖಿಲ್ ಗೆಲ್ಲಬೇಕೆಂದು ಜನ ಅಂದುಕೊಂಡಿದ್ದಾರೆ. ಇದು ನಿಖಿಲ್ ಭವಿಷ್ಯದ ಪ್ರಶ್ನೆ ಅಲ್ಲ, ಪ್ರಾದೇಶಿಕ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದೆ. ಮೂರೂವರೆ ವರ್ಷ ಅವಕಾಶ ಮಾಡಿಕೊಡಿ ನಾನು ಹೇಗೆ ಕೆಲಸ ಮಾಡುತ್ತೇನೆ ಎಂದು ನೀವೇ ನೋಡಿ ಎಂದು ವೇದಿಕೆ ಮೇಲೆ ಪತಿ-ಪತ್ನಿ ಜೊತೆಯಾಗಿ ಕೈಮುಗಿದು ಮತ ಯಾಚನೆ ಮಾಡಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್‌

ದೇವೇಗೌಡರು ಮೊಮ್ಮಗನನ್ನು ಗೆಲ್ಲಿಸಲು ಆಂಬುಲೆನ್ಸ್‌ನಲ್ಲಿ ಬರುತ್ತಾರೆ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಹೇಳಿದ್ದರು. ಚನ್ನಪಟ್ಟಣದಲ್ಲಿ (Channapatna) ನಿಖಿಲ್ ನಿಂತಿದ್ದಾನೆ ಎಂದು ದೇವೇಗೌಡರು ಬಂದು ಪ್ರಚಾರ ಮಾಡುತ್ತಿದ್ದಾರೆ ಅನ್ನುವ ಪ್ರಶ್ನೆ ಅಲ್ಲ. ಯಾವುದೇ ಸಾಮಾನ್ಯ ಕಾರ್ಯಕರ್ತ ನಿಂತಿದ್ದರೂ ದೇವೇಗೌಡರು (HDDevegowda) ಪ್ರಚಾರಕ್ಕೆ ಬರುತ್ತಿದ್ದರು. ಈ ಜಿಲ್ಲೆಗೂ ದೇವೇಗೌಡರಿಗೂ ಬಹಳ ಹಳೆಯ ನಂಟಿದೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಈಗ ನಾನು ನಿಲ್ಲುವುದಿಲ್ಲ, ಪಕ್ಷ ಕಟ್ಟೋದಿಕ್ಕೆ ಸ್ವಲ್ಪ ಸಮಯ ಕೊಡಿ ಎಂದು ಹೇಳಿದ್ದೆ. ನಂತರ ಏನೇನಾಯ್ತು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

ವರದೇಗೌಡರು ನಮ್ಮ ಪಕ್ಷದಿಂದ ಶಾಸಕರಾಗಿ ಮನೆ ಮಗನಾಗಿ ಇಲ್ಲಿ ಕೆಲಸ ಮಾಡಿದವರು. ಇವರೆಲ್ಲ ನನಗೆ ಆದರ್ಶ ಹಾಗೂ ಸ್ಫೂರ್ತಿಯಾಗಿದ್ದಾರೆ. ಈ ಚುನಾವಣೆ ನನ್ನ ಬದುಕಿನ ಬಹುದೊಡ್ಡ ಅಗ್ನಿಪರೀಕ್ಷೆಯಾಗಿದೆ. ನೀನು ಇಲ್ಲಿ ಯಾವ ಪಾತ್ರ ಮಾಡ್ತೀಯಪ್ಪ ಎಂದು ಹಲವರು ಕೇಳುತ್ತಾರೆ. ಕುರುಕ್ಷೇತ್ರ ಸಿನೆಮಾದಲ್ಲಿ ನಾನು ಅಭಿಮನ್ಯು ಆಗಿದ್ದೆ. ನಾನು ಅರ್ಜುನನಾ ಅಥವಾ ಅಭಿಮನ್ಯುನಾ ಎಂದು ಚನ್ನಪಟ್ಟಣ ಜನರೇ ನಿರ್ಧಾರ ಮಾಡುತ್ತಾರೆ. ನನಗೆ ಗೊತ್ತಿರುವುದು ಮನುಷ್ಯತ್ವ ಮಾತ್ರ ಎಂದರು. ಇದನ್ನೂ ಓದಿ: ರಾಮಮಂದಿರ ಸೇರಿ ಹಿಂದೂ ದೇವಾಲಯಗಳ ಮೇಲೆ ದಾಳಿ ಬೆದರಿಕೆ; ಖಲಿಸ್ತಾನಿ ಉಗ್ರ ಪನ್ನುನ್ ವೀಡಿಯೋ ರಿಲೀಸ್‌

ಇದು ಕುಮಾರಣ್ಣ (H D Kumaraswamy) ಅವರ ಸ್ವಕ್ಷೇತ್ರ, ಅವರು ಸಂಸದರಾದ ಹಿನ್ನೆಲೆ ಕ್ಷೇತ್ರ ತೆರವಾಯಿತು. ಕಳೆದ ಎರಡು ಮೂರು ತಿಂಗಳ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ. ಈ ಉಪಚುನಾವಣೆ ನನ್ನ ಪಾಲಿಗೆ ಅನಿರೀಕ್ಷಿತವಾಗಿದೆ. ಕಳೆದೆರಡು ಸೋಲುಗಳಿಂದ ನನ್ನ ಎದೆ ಗುಂದಲಿಲ್ಲ. ಮಂಡ್ಯದಲ್ಲಿ 5.45 ಲಕ್ಷ ಜನ ಆಶೀರ್ವಾದ ಮಾಡಿದರು, ಆದರೆ ವಿಪರ್ಯಾಸ ಗೆಲ್ಲಲು ಆಗಲಿಲ್ಲ. ಅದಕ್ಕೆ ಅನೇಕ ಕಾರಣ ಇದ್ದವು ಈಗ ಅದನ್ನು ಮಾತನಾಡುವುದಿಲ್ಲ. ರಾಮನಗರದಲ್ಲೂ ಕೊನೆಯ ಕ್ಷಣದಲ್ಲಿ ನನ್ನ ಸ್ಪರ್ಧೆಯ ತೀರ್ಮಾನ ಆಯ್ತು. 76.5 ಸಾವಿರ ಜನ ನನಗೆ ಆಶೀರ್ವಾದ ಮಾಡಿದರು. ಅಲ್ಲಿನ ಸೋಲಿಗೆ ಕಾಂಗ್ರೆಸ್ ಗಿಫ್ಟ್ ಕೂಪನ್ ಕಾರ್ಡ್ ಕಾರಣವಾಗಿದೆ. ಯಾವ ಕೂಪನ್, ಯಾವ ಆಮಿಷಕ್ಕೂ ಚನ್ನಪಟ್ಟಣದ ಜನ ಬಲಿಯಾಗುವುದಿಲ್ಲ ಅನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ  ಓದಿ: 6.79 ಲಕ್ಷಕ್ಕೆ 5 ಸ್ಟಾರ್ ಸೇಫ್ಟಿ ರೇಟೆಡ್ ಡಿಸೈರ್ ಕಾರು ಬಿಡುಗಡೆ

TAGGED:Channapatna By ElectionhddevegowdaHDKumaraswamyNikhi Kumaraswamyramanagaraಚನ್ನಪಟ್ಟಣದೇವೇಗೌಡನಿಖಿಲ್ ಕುಮಾರಸ್ವಾಮಿರಾಮನಗರ
Share This Article
Facebook Whatsapp Whatsapp Telegram

You Might Also Like

Mangaluru Crime
Crime

ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

Public TV
By Public TV
5 hours ago
Chikkaballapura 6
Chikkaballapur

ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅಂದರ್

Public TV
By Public TV
6 hours ago
China
Latest

ಚೀನಾದಲ್ಲಿ ಜಲಪ್ರಳಯಕ್ಕೆ 6 ಮಂದಿ ಬಲಿ

Public TV
By Public TV
6 hours ago
Koppala crime
Crime

3ನೇ ಪತ್ನಿಯ ಹತ್ಯೆಗೈದು ಗೋಣಿ ಚೀಲದಲ್ಲಿ ಪ್ಯಾಕ್ – ಲಗೇಜ್ ಎಂದು ಸರ್ಕಾರಿ ಬಸ್ಸಲ್ಲಿ ಕಳುಹಿಸಿದ್ದವ 24 ವರ್ಷಗಳ ಬಳಿಕ ಅರೆಸ್ಟ್

Public TV
By Public TV
6 hours ago
Rain 1
Belgaum

ಪಶ್ಚಿಮಘಟ್ಟ ಭಾಗದಲ್ಲಿ ನಿಲ್ಲದ ಮಳೆಯ ಅಬ್ಬರ – ಎಲ್ಲೆಲ್ಲಿ ಏನೇನಾಗಿದೆ?

Public TV
By Public TV
6 hours ago
Sports Department
Crime

6 ತಿಂಗಳಿಂದ ಸಂಬಳ ಇಲ್ಲ – ಸರ್ಕಾರಿ ಕಚೇರಿಯಲ್ಲೇ ಉದ್ಯೋಗಿ ಆತ್ಮಹತ್ಯೆಗೆ ಯತ್ನ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?