ಬೆಂಗಳೂರು: ಟಾಲಿವುಡ್ ನಟ ಅಲ್ಲು ಅರ್ಜುನ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿದ್ದಾರೆ.
ಮೊದಲಿಗೆ ನಾಗವಾರದಲ್ಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಬಳಿಕ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜೊತೆ ಪ್ರವಾಸಕ್ಕೆ ಬಂದ ನಟ ಶಿವಣ್ಣ
ನಂತರ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ತಿಳಿಸಿ, ಪುನೀತ್ ರಾಜ್ ಕುಮಾರ್ ಅವರ ಫ್ಯಾಮಿಲಿಯನ್ನು ಭೇಟಿ ಮಾಡಿದೆ. ಇಲ್ಲಿ ದೊಡ್ಡದಾಗಿ ಹೇಳಲು ಏನು ಇಲ್ಲ. ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿಯಾಗುತ್ತಿದೆ. ಅದೇ ರೀತಿ ಪುನೀತ್ ಹೈದರಾಬಾದ್ಗೆ ಭೇಟಿ ಕೊಟ್ಟಾಗ ನಮ್ಮನ್ನು ಭೇಟಿಯಾಗುತ್ತಿದ್ದರು ಎಂದು ತಿಳಿಸಿದ್ದಾರೆ.
ಅಲ ವೈಕುಂಠಪುರಂ ಲೋ ಸಿನಿಮಾದ ಬುಟ್ಟ ಬೊಮ್ಮಾ ಸಾಂಗ್ ನೋಡಿ ಇಷ್ಟಪಟ್ಟು ಕರೆ ಮಾಡಿದ್ದರು. ಕೋವಿಡ್ ಇದ್ದ ಕಾರಣ ಹಿಂದೆ ಮಾತನಾಡಲು ಬರುವುದಕ್ಕೆ ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ. ಪುನೀತ್ ಹಾಗೂ ನಾನು ಚೆನ್ನೈನ ಡ್ಯಾನ್ಸ್ ಕಾರ್ಯಕ್ರಮಕ್ಕೆ ಒಟ್ಟಿಗೆ ಹೋಗಿದ್ವಿ ಅದು ನನ್ನ ಜೀವನದ ಮರೆಯಲಾಗದ ಕ್ಷಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಸ ಮನೆಗೆ ರಶ್ಮಿಕಾ ಶಿಫ್ಟ್ – ಮತ್ತೊಂದು ಅಪಾರ್ಟ್ಮೆಂಟ್ ಖರೀದಿ?