ಬೆಂಗಳೂರು: ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಒಬ್ಬ ಕಂತ್ರಿ. ನನ್ನ ಬೆಳವಣಿಗೆ ಸಹಿಸದೇ ಪರೋಕ್ಷವಾಗಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಅಲ್ತಾಫ್ ಖಾನ್ ಕಿಡಿಕಾರಿದ್ದಾರೆ.
ಪೊಲೀಸ್ ಬಂಧನದಿಂದ ಹೊರಬಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬಂಧನದ ಹಿಂದೆ ಸಚಿವ ಜಮೀರ್ ಅಹ್ಮದ್ ಕೈವಾಡವಿದೆ. ನನ್ನನ್ನು ಜೈಲಿಗೆ ಕಳಿಸಲು ಜಮೀರ್ ಅಹ್ಮದ್ ಪ್ರಯತ್ನ ಮಾಡುತ್ತಿದ್ದಾರೆ. ಸಚಿವರ ಬಣ್ಣವನ್ನು ಕೆಲವೇ ದಿನಗಳಲ್ಲಿ ಬಹಿರಂಗ ಮಾಡುತ್ತೇನೆ ಎಂದು ಹರಿಹಾಯ್ದರು.
ಸಚಿವ ಜಮೀರ್ ಅಹ್ಮದ್ ಅವರು ವಕೀಲ ಇಬ್ರಾಹಿಂ ಮೂಲಕ ನನ್ನ ಮೇಲೆ ದೂರು ಕೊಡಿಸಿದ್ದಾರೆ. ವಕೀಲ ಇಬ್ರಾಹಿಂ ಕಳೆದ ಐದು ವರ್ಷಗಳಿಂದ ನನ್ನ ಜೊತೆ ಇದ್ದ ಎಂದ ಅವರು, ಜಮೀರ್ ಅಹ್ಮದ್ ಒಬ್ಬ ರಾಬರ್, ರಾಮನಗರದಲ್ಲಿ ರಾಬರಿ ಮಾಡಿದ್ದ ಎಂದು ಆರೋಪಿಸಿದರು.
ಏನಿದು ಪ್ರಕರಣ:
ಅಲ್ತಾಫ್ ಖಾನ್ ಹೋಟೆಲ್ ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸರಿಂದ ತಡರಾತ್ರಿ ಠಾಣೆಗೆ ಕರೆಸಿ ಅಲ್ತಾಫ್ ವಿಚಾರಣೆ ನಡೆಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ್ದು, ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲೇ ಬೇಲ್ ಪಡೆದು ಅಲ್ತಾಫ್ ಖಾನ್ ರಿಲೀಸ್ ಆಗಿದ್ದರು.
ಅಲ್ತಾಫ್ ಖಾನ್ ಬಂಧನದ ಹಿಂದೆ ಮೈತ್ರಿ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದು ಆರೋಪಗಳು ಕೇಳಿ ಬಂದಿತ್ತು. ಈಗ ಅಲ್ತಾಫ್ ಖಾನ್ ಅವರೇ ಆ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಎಂದು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv