ಜೈಪುರ: ಬಾಲಕಿಯೊಬ್ಬಳ ಮೇಲೆ ಆಕೆಯ ತಂದೆಯ ಸ್ನೇಹಿತ ಅತ್ಯಾಚಾರಗೈದು ಪರಾರಿಯಾದ ಘಟನೆ ತಹ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯು ಸಂಜೆ 7 ಗಂಟೆ ಸುಮಾರಿಗೆ ತರಕಾರಿ ಖರೀದಿಸಲು ಹೋಗಿದ್ದಳು. ಈ ವೇಳೆ ಆರೋಪಿಯು ಆಕೆಯನ್ನು ಅಡ್ಡಗಟ್ಟಿ ಎಲ್ಲಿಗೆ ಹೋಗುತ್ತಿದ್ದೀಯ್ಯಾ ಎಂದು ಪ್ರಶ್ನಿಸಿದ್ದಾನೆ. ತರಕಾರಿ ಖರೀದಿಸಲು ಹೋಗುತ್ತಿದ್ದೇನೆ ಅಂತ ಬಾಲಕಿ ಉತ್ತರಿಸಿದಾಗ, ಹಾಗಾದರೆ ನಾನು ನಿನ್ನ ಜೊತೆ ಬರುವೆ ನಡೆ ಅಂತ ಹೇಳಿ ಆರೋಪಿಯು ಆಕೆಯನ್ನು ತರಕಾರಿ ತರಲು ತನ್ನೊಂದಿಗೆ ಕರೆದೊಯ್ದಿದ್ದಾನೆ.
ಬಳಿಕ ಆ ವ್ಯಕ್ತಿ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅದೇ ಸಮಯದಲ್ಲಿ ಸಮೀಪದ ಪ್ರದೇಶವೊಂದರಲ್ಲಿ ದಾಟಿ ಹೋಗುತ್ತಿದ್ದ ಕೆಲವು ಯುವಕರು, ಹುಡುಗಿಯ ಕಿರುಚಾಟವನ್ನು ಕೇಳಿ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಯುವಕರು ತಮ್ಮನ್ನು ರಕ್ಷಿಸಿಕೊಳ್ಳಲು ಘಟನೆಯನ್ನು ರೆಕಾರ್ಡ್ ಮಾಡಿ ಘಟನೆಯ ಬಗ್ಗೆ ಸ್ಥಳೀಯರಿಗೆ ತಿಳಿಸಿದ್ದಾರೆ. ಯುವಕರನ್ನು ಕಂಡ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಹ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದ್ದು ರಾಜ್ಗಢಕ್ಕೆ ಸ್ಥಳಾಂತರಿಸಲಾಗಿದೆ. ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ಸಂತ್ರಸ್ತೆಯ ಸಂಬಂಧಿಕರು ಪೊಲೀಸರಿಗೆ ದೂರು ನೀಡಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯ ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬಾಲಚಂದ್ರ ಜಾರಕಿಹೊಳಿ ಬದಲು ಆಪ್ತ ಕಾರ್ಯದರ್ಶಿಗಳಿಂದ ಕಾಮಗಾರಿ ಉದ್ಘಾಟನೆ : ಕಾಂಗ್ರೆಸ್
ಈ ಬಗ್ಗೆ ಅಲ್ವಾರ್ ಎಸ್ಪಿ ತೇಜಸ್ವಿ ಗೌತಮ್ ಮಾತನಾಡಿ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.