– ಕಾಂಗ್ರೆಸ್ ಸಂಪೂರ್ಣ ಅಸ್ತವ್ಯಸ್ತವಾಗಿದೆ
ಚಂಡೀಗಢ: ಪಂಜಾಬ್ ಕಾಂಗ್ರೆಸ್ ನ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಅದರ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿ 78 ಶಾಸಕರು ಕೇಂದ್ರದ ವರಿಷ್ಠರಿಗೆ ಪತ್ರ ಬರೆದಿದ್ದರು, ಸೋನಿಯಾ ಗಾಂಧಿ ಅವರಿಂದ ರಾಜೀನಾಮೆ ಪಡೆಯಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿಕೆ ಬೆನ್ನಲ್ಲೇ, ಅಮರೀಂದರ್ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನನ್ನನ್ನು ಅವಮಾನ ಮಾಡಲಾಗಿದೆ – ಸಿಎಂ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ
ಸುರ್ಜೆವಾಲಾ ಹಾಗೂ ಹರೀಶ್ ರಾವತ್ ಅವರ ಹೇಳಿಕೆ ದೋಷಗಳಿಂದ ಕೂಡಿರುವ ಹಾಸ್ಯಾಸ್ಪದವಾಗಿದೆ. ಇಡೀ ಪಕ್ಷವು ನವಜೋತ್ ಸಿಂಗ್ ಸಿಧು ಅವರ ಕಾಮಿಕ್ ಥಿಯೇಟರ್ಗಳ ಪ್ರಜ್ಞೆಯಿಂದ ತುಂಬಿದೆ ಎಂದು ತೋರುತ್ತದೆ. ನಂತರ ಅವರು 117 ಶಾಸಕರು ನನ್ನ ವಿರುದ್ಧ ಪತ್ರ ಬರೆದಿದ್ದರು ಎಂದು ಹೇಳುತ್ತಾರೆ. ಇದು ಪಕ್ಷದಲ್ಲಿನ ವ್ಯವಹಾರಗಳ ಸ್ಥಿತಿ. ತಮ್ಮ ಸುಳ್ಳನ್ನು ಸರಿಯಾಗಿ ಸಹ ಹೇಳಲು ಸಾಧ್ಯವಾಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಅಂಡರ್ವಾಟರ್ನಲ್ಲಿ ಚಿನ್ನದ ಹುಡುಗ- ವೀಡಿಯೋ ನೋಡಿ
ಕಾಂಗ್ರೆಸ್ ಸಂಪೂರ್ಣ ಅಸ್ತವ್ಯಸ್ತವಾಗಿದೆ ಮತ್ತು ಬಿಕ್ಕಟ್ಟು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವಂತೆ ಕಾಣುತ್ತಿದೆ. ಅದರ ಬಹುಪಾಲು ಹಿರಿಯ ನಾಯಕರು ಪಕ್ಷದ ಕಾರ್ಯವೈಖರಿಯಿಂದ ಸಂಪೂರ್ಣವಾಗಿ ನಿರಾಶೆಗೊಂಡಿದ್ದಾರೆ ಎಂದು ಅಮರೀಂದರ್ ಸಿಂಗ್ ಟೀಕಿಸಿದ್ದಾರೆ. ಈ ಸುಳ್ಳುಗಳಿಗೆ ಪಕ್ಷವು ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಭಾರೀ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.