ಬೆಂಗಳೂರು: ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಅಂಬೇಡ್ಕರ್ `ಸಂವಿಧಾನ ಶಿಲ್ಪಿ’ ಬಿರುದನ್ನು ಕೈ ಬಿಡಲಾಗಿದೆ ಹಾಗೂ ಅಂಬೇಡ್ಕರ್ ಪಠ್ಯವನ್ನು ಕೈಬಿಡಲಾಗಿದೆ ಎಂದು ಬಿಜೆಪಿ ವಿರುದ್ಧ ಪ್ರತಿಪಕ್ಷದ ನಾಯಕರು ಹಾಗೂ ಸಾಹಿತಿಗಳು ಮುಗಿಬಿದ್ದಿದ್ದರು.
ಇದಕ್ಕೆ ಸಾಕ್ಷಿಯೊಂದಿಗೆ ಸ್ಪಷ್ಟನೆ ನೀಡಿರುವ ಬಿಜೆಪಿ 10ನೇ ತರಗತಿಯ ಪಠ್ಯಪುಸ್ತಕದಲ್ಲಿರುವ ಅಂಬೇಡ್ಕರ್ ಪಾಠದ ಚಿತ್ರವನ್ನು ಟ್ವೀಟ್ ಮಾಡಿದೆ. `ಉದಾತ್ತ ಚಿಂತನೆಗಳು’ ಮೊದಲ ಅಧ್ಯಾಯದಲ್ಲಿ ಅಂಬೇಡ್ಕರ್ ಎನ್ನುವ ಒಂದು ಪುಟದ ಮಾಹಿತಿಯನ್ನು ದಲಿತ ವಿರೋಧಿ ಕಾಂಗ್ರೆಸ್ ಎಂಬ ಹ್ಯಾಶ್ಟ್ಯಾಗ್ನೊಂದಿಗೆ ಟ್ವೀಟ್ ಮಾಡಿದೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ
ಹತ್ತನೇ ತರಗತಿಯ ಕನ್ನಡ ಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಪಠ್ಯವೇ ಇರಲಿಲ್ಲ.
ನಮ್ಮ ಸರ್ಕಾರ ಅಂಬೇಡ್ಕರ್ ಅವರ ಪಠ್ಯವನ್ನು ಸೇರಿಸಿ ಕಾಂಗ್ರೆಸ್ ಮಾಡಿದ ತಪ್ಪನ್ನು ಅಳಿಸಿ ಹಾಕಿದೆ.
ಸಂವಿಧಾನ ಪಿತಾಮಹರನ್ನು ಕಾಂಗ್ರೆಸ್ ಮರೆತಿತ್ತೇ ಹೊರತು, ನಾವಲ್ಲ.#ದಲಿತವಿರೋಧಿಕಾಂಗ್ರೆಸ್ pic.twitter.com/6K4TcJ4IcC
— BJP Karnataka (@BJP4Karnataka) June 6, 2022
`ಹತ್ತನೇ ತರಗತಿಯ ಕನ್ನಡ ಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಪಠ್ಯವೇ ಇರಲಿಲ್ಲ. ನಮ್ಮ ಸರ್ಕಾರ ಅಂಬೇಡ್ಕರ್ ಅವರ ಪಠ್ಯವನ್ನು ಸೇರಿಸಿ ಕಾಂಗ್ರೆಸ್ ಮಾಡಿದ ತಪ್ಪನ್ನು ಅಳಿಸಿ ಹಾಕಿದೆ. ಸಂವಿಧಾನ ಪಿತಾಮಹರನ್ನು ಕಾಂಗ್ರೆಸ್ ಮರೆತಿತ್ತೇ ಹೊರತು, ನಾವಲ್ಲ ಎಂದೂ ಬರೆದುಕೊಂಡಿದೆ. ಇದನ್ನೂ ಓದಿ: ರಸ್ತೆ ಬದಿಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್ – ಐವರಿಗೆ ಗಾಯ
ಏನಿದು ವಿವಾದ?
7ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಮಾಹಿತಿ ತೆಗೆದಿದ್ದಾರೆ. 9ನೇ ತರಗತಿ ಪುಸ್ತಕದಲ್ಲಿ `ಸಂವಿಧಾನ ಶಿಲ್ಪಿ’ ಎಂಬ ಬಿರುದನ್ನು ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ನಿನ್ನೆ ಆರೋಪಿಸಿತ್ತು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಅದಕ್ಕೆ ಸ್ಪಷ್ಟ ಉತ್ತರ ನೀಡಿರುವ ಬಿಜೆಪಿ ಅಂಬೇಡ್ಕರ್ಗೆ 1 ಪುಟದ ಮಾಹಿತಿಯನ್ನು ಮೀಸಲಿಟ್ಟಿರುವುದಾಗಿ ತಿಳಿಸಿದೆ.