Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ

Belgaum

ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ

Public TV
Last updated: December 16, 2024 10:00 pm
Public TV
Share
3 Min Read
Krishna Byre Gowda
SHARE

-ಠೇವಣಿದಾರರ ಹಣ ಹಿಂಪಡೆಯಲು ಕಾನೂನಿನಲ್ಲಿ ಸರಳೀಕರಣ

ಬೆಳಗಾವಿ: ಬಡವರ ಹಣ ವಂಚಿಸುವ ಮೋಸದ ಕಂಪನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024 ಮಂಡಿಸಿ ಮಾತನಾಡಿದ ಅವರು, 2003-04ರಲ್ಲಿ ವಿನಿವಿಂಕ್ ಶಾಸ್ತ್ರಿ ಚಿಟ್‌ಫಂಡ್ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು ಎಂದರು.

ಚೈನ್‌ಲಿಂಕ್, ಚಿಟ್‌ಫಂಡ್, ಪಿರಮಿಡ್ ಮಾದರಿ ಹಾಗೂ ಹಣ ಡಬ್ಲಿಂಗ್ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳಿಸುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: UI: ಮಣಿರತ್ನಂರನ್ನು ಉಪೇಂದ್ರ ಮೀರಿಸುತ್ತಾರೆ: ಶಿವಣ್ಣ

ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ ಎಂದು ತಿಳಿಸಿದರು.

ಕೆಲವರು ಕಂಪನಿ ತೆರೆದು ಹಗರಣ ಮಾಡಿ, ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು. ಅಂತಹ ಕಂಪನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧವೂ ಕ್ರಮದ ಭರವಸೆ:
ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ಶಾಸಕರಾದ ಸುನೀಲ್ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್, ಹೌಸಿಂಗ್ ಸ್ಕೀಂ ಹಾಗೂ ಗೋಲ್ಡ್ ಲೋನ್ ಕಂಪನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

ವಿಪಕ್ಷ ನಾಯಕರ ಸಲಹೆ ಸೂಚನೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಹೌಸಿಂಗ್ ಸ್ಕೀಂ, ಮೈಕ್ರೋ ಲೆಂಡಿಂಗ್, ಗೋಲ್ಡ್‌ ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್ ಹೆಸರಿನ ಕಂಪನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ?- ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ

TAGGED:belagavikrishna byre gowdawinter sessionಕೃಷ್ಣ ಬೈರೇಗೌಡಚಳಿಗಾಲದ ಅಧಿವೇಶನಬೆಳಗಾವಿ
Share This Article
Facebook Whatsapp Whatsapp Telegram

Cinema news

Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Sandalwood Top Stories
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories

You Might Also Like

West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
45 minutes ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
53 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
2 hours ago
West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
3 hours ago
CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
3 hours ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?