Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Bengaluru City

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Public TV
Last updated: April 2, 2023 5:03 pm
Public TV
Share
2 Min Read
Jaishankar 1
SHARE

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಂಡ ವಿಚಾರಕ್ಕೆ ಅಮೆರಿಕ (America) ಹಾಗೂ ಜರ್ಮನಿ (Germany) ನೀಡಿರುವ ಪ್ರತಿಕ್ರಿಯೆಗೆ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ (S.Jaishankar) ಕಿಡಿಕಾರಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಬೆಂಗಳೂರು (Bengaluru) ಕೇಂದ್ರ ಸಂಸದ ಪಿ.ಸಿ ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ನಲ್ಲಿ 500 ಕ್ಕಿಂತಲೂ ಅಧಿಕ ಯುವ ಮತದಾರರು ಹಾಗೂ ಸಾರ್ವಜನಿಕರೊಂದಿಗೆ ಆಯೋಜನೆಗೊಂಡಿದ್ದ Meet and Greet ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪಶ್ಚಿಮದ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿಯಿಂದ ಹೊರಬಂದಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿ ಸಮಾನ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುವುದು ಸಾಮಾನ್ಯ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದಿದ್ದಾರೆ.

Jaishankar

ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸಿ, ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಹೊರಬರಲು ಸಾಧ್ಯ. ಈ ರೀತಿಯ ಮನಸ್ಥಿತಿ ಇರುವ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ನಡೆಯಲೇಬೇಕಿದೆ ಎಂದಿದ್ದಾರೆ.

ಉಚಿತ ಕೊಡುಗೆಗಳ ಕುರಿತಾಗಿ, ಇತ್ತೀಚೆಗೆ ಉಚಿತ ಕೊಡುಗೆಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವ ಕ್ರಮ ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗುತ್ತದೆ. ತಾತ್ಕಾಲಿಕ ರಾಜಕೀಯ ಲಾಭದ ಸಲುವಾಗಿ ಮಾಡುವ ಇಂತಹ ಯೋಜನೆಗಳಿಗೆ ಯಾರೋ ಒಬ್ಬರು ಬೆಲೆ ತೆರಬೇಕಾಗುತ್ತದೆ. ಒಂದೆಡೆ ಉಚಿತ ನೀಡುವಾಗ ಬೇರೆ ಕಡೆಯಿಂದ ಕ್ರೋಢೀಕರಣ ಮಾಡಲೇಬೇಕು. ಜವಾಬ್ದಾರಿ ರಹಿತ ಇಂತಹ ಉಚಿತ ಕೊಡುಗೆಗಳ ಕಾರ್ಯಕ್ರಮಗಳಿಂದ ದೇಶದ ಬೊಕ್ಕಸಕ್ಕೆ ಉಂಟಾಗುವ ಅಪಾರ ಹಾನಿ ಎಂದಿದ್ದಾರೆ.

ಪ್ರಸ್ತುತ ಜಿ 20 ಆತಿಥೇಯ ರಾಷ್ಟ್ರವಾಗಿರುವ ಭಾರತವು, ಇದುವರೆಗೆ ಜಿ 20 ಸದಸ್ಯ ರಾಷ್ಟ್ರವಲ್ಲದ ದೇಶಗಳನ್ನು ಸಂಪರ್ಕಿಸಿ, ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಮುಂಚೆ ಇಂತಹ ಅತೀ ದೊಡ್ಡ ಸಮಾವೇಶಗಳನ್ನು ಆಯ್ದ ಕೇವಲ 2-3 ನಗರಗಳಲ್ಲಿ ಮಾತ್ರ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ದೇಶದ 60 ಇತರ ನಗರಗಳಲ್ಲಿ ಸಮಾವೇಶ ಆಯೋಜಿಸಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಗೆ ಪ್ರತೀ ರಾಜ್ಯ, ನಗರಗಳು ಕೂಡ ಗಣನೀಯ ಕೊಡುಗೆ ನೀಡುತ್ತಿವೆ. ಜಾಗತಿಕ ವಿದ್ಯಮಾನಗಳನ್ನು ಇತರ ನಗರಗಳಿಗೂ ಪರಿಚಯಿಸುವ ಉದ್ದೇಶದಿಂದ ಈ ರೀತಿ ಎಲ್ಲೆಡೆ ಜಿ 20 ಸಮಾವೇಶಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿ 20 ಸಮಾವೇಶಕ್ಕೆ ಜಗತ್ತಿನ ವಿವಿಧೆಡೆಯಿಂದ ಆಗಮಿಸುವ 200ಕ್ಕಿಂತಲೂ ಅಧಿಕ ಅಗ್ರಗಣ್ಯ ವ್ಯಕ್ತಿಗಳಿಗೆ ಈ ದೇಶದ ವೈವಿಧ್ಯಮಯ ಸಂಸ್ಕೃತಿ, ಆಚಾರ, ವಿಚಾರ, ಅಡುಗೆ, ತಿನಿಸುಗಳ ಬಗ್ಗೆ ಅರಿವು ಮೂಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಭಾರತ (India) ವಿಶ್ವಕ್ಕೆ ತೆರೆದುಕೊಳ್ಳುವುದು ಹಾಗೂ ವಿಶ್ವವು ಭಾರತವನ್ನು ಅರ್ಥೈಸಿಕೊಳ್ಳುವುದು ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸೋಲಿಸಲು ಯಾವ ಲೀಡರ್‌ಗಳಿಂದಲೂ ಸಾಧ್ಯವಿಲ್ಲ, ಜನರೇ ಸೋಲಿಸಬೇಕು: ಸತೀಶ್ ಜಾರಕಿಹೊಳಿ

TAGGED:bengaluruMeet and GreetRahul Gandhis.jaishankarTejasvi Suryaಜಿ 20 ಸಮಾವೇಶಜೈಶಂಕರ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Mohammad Siraj
Cricket

ಸ್ಪೇನ್‌ ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಮುಂಬೈನಲ್ಲಿ ಲ್ಯಾಂಡ್‌! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?

Public TV
By Public TV
11 minutes ago
Ballari Tekkalakote Excavation Human Fossil Found
Bellary

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Public TV
By Public TV
21 minutes ago
Young women cause a ruckus in the middle of the road drinking alcohol hulimavu bengaluru
Bengaluru City

ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ

Public TV
By Public TV
1 hour ago
Male Mahadeshwara Hill Padayatra
Chamarajanagar

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Public TV
By Public TV
1 hour ago
Namma Metro Greenline
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

Public TV
By Public TV
9 hours ago
T20 Team India
Cricket

ಸೂರ್ಯ, ಸಿರಾಜ್‌ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?