Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Bengaluru City

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Public TV
Last updated: April 2, 2023 5:03 pm
Public TV
Share
2 Min Read
Jaishankar 1
SHARE

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಂಡ ವಿಚಾರಕ್ಕೆ ಅಮೆರಿಕ (America) ಹಾಗೂ ಜರ್ಮನಿ (Germany) ನೀಡಿರುವ ಪ್ರತಿಕ್ರಿಯೆಗೆ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ (S.Jaishankar) ಕಿಡಿಕಾರಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಬೆಂಗಳೂರು (Bengaluru) ಕೇಂದ್ರ ಸಂಸದ ಪಿ.ಸಿ ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ನಲ್ಲಿ 500 ಕ್ಕಿಂತಲೂ ಅಧಿಕ ಯುವ ಮತದಾರರು ಹಾಗೂ ಸಾರ್ವಜನಿಕರೊಂದಿಗೆ ಆಯೋಜನೆಗೊಂಡಿದ್ದ Meet and Greet ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪಶ್ಚಿಮದ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿಯಿಂದ ಹೊರಬಂದಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿ ಸಮಾನ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುವುದು ಸಾಮಾನ್ಯ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದಿದ್ದಾರೆ.

Jaishankar

ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸಿ, ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಹೊರಬರಲು ಸಾಧ್ಯ. ಈ ರೀತಿಯ ಮನಸ್ಥಿತಿ ಇರುವ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ನಡೆಯಲೇಬೇಕಿದೆ ಎಂದಿದ್ದಾರೆ.

ಉಚಿತ ಕೊಡುಗೆಗಳ ಕುರಿತಾಗಿ, ಇತ್ತೀಚೆಗೆ ಉಚಿತ ಕೊಡುಗೆಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವ ಕ್ರಮ ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗುತ್ತದೆ. ತಾತ್ಕಾಲಿಕ ರಾಜಕೀಯ ಲಾಭದ ಸಲುವಾಗಿ ಮಾಡುವ ಇಂತಹ ಯೋಜನೆಗಳಿಗೆ ಯಾರೋ ಒಬ್ಬರು ಬೆಲೆ ತೆರಬೇಕಾಗುತ್ತದೆ. ಒಂದೆಡೆ ಉಚಿತ ನೀಡುವಾಗ ಬೇರೆ ಕಡೆಯಿಂದ ಕ್ರೋಢೀಕರಣ ಮಾಡಲೇಬೇಕು. ಜವಾಬ್ದಾರಿ ರಹಿತ ಇಂತಹ ಉಚಿತ ಕೊಡುಗೆಗಳ ಕಾರ್ಯಕ್ರಮಗಳಿಂದ ದೇಶದ ಬೊಕ್ಕಸಕ್ಕೆ ಉಂಟಾಗುವ ಅಪಾರ ಹಾನಿ ಎಂದಿದ್ದಾರೆ.

ಪ್ರಸ್ತುತ ಜಿ 20 ಆತಿಥೇಯ ರಾಷ್ಟ್ರವಾಗಿರುವ ಭಾರತವು, ಇದುವರೆಗೆ ಜಿ 20 ಸದಸ್ಯ ರಾಷ್ಟ್ರವಲ್ಲದ ದೇಶಗಳನ್ನು ಸಂಪರ್ಕಿಸಿ, ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಮುಂಚೆ ಇಂತಹ ಅತೀ ದೊಡ್ಡ ಸಮಾವೇಶಗಳನ್ನು ಆಯ್ದ ಕೇವಲ 2-3 ನಗರಗಳಲ್ಲಿ ಮಾತ್ರ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ದೇಶದ 60 ಇತರ ನಗರಗಳಲ್ಲಿ ಸಮಾವೇಶ ಆಯೋಜಿಸಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಗೆ ಪ್ರತೀ ರಾಜ್ಯ, ನಗರಗಳು ಕೂಡ ಗಣನೀಯ ಕೊಡುಗೆ ನೀಡುತ್ತಿವೆ. ಜಾಗತಿಕ ವಿದ್ಯಮಾನಗಳನ್ನು ಇತರ ನಗರಗಳಿಗೂ ಪರಿಚಯಿಸುವ ಉದ್ದೇಶದಿಂದ ಈ ರೀತಿ ಎಲ್ಲೆಡೆ ಜಿ 20 ಸಮಾವೇಶಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿ 20 ಸಮಾವೇಶಕ್ಕೆ ಜಗತ್ತಿನ ವಿವಿಧೆಡೆಯಿಂದ ಆಗಮಿಸುವ 200ಕ್ಕಿಂತಲೂ ಅಧಿಕ ಅಗ್ರಗಣ್ಯ ವ್ಯಕ್ತಿಗಳಿಗೆ ಈ ದೇಶದ ವೈವಿಧ್ಯಮಯ ಸಂಸ್ಕೃತಿ, ಆಚಾರ, ವಿಚಾರ, ಅಡುಗೆ, ತಿನಿಸುಗಳ ಬಗ್ಗೆ ಅರಿವು ಮೂಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಭಾರತ (India) ವಿಶ್ವಕ್ಕೆ ತೆರೆದುಕೊಳ್ಳುವುದು ಹಾಗೂ ವಿಶ್ವವು ಭಾರತವನ್ನು ಅರ್ಥೈಸಿಕೊಳ್ಳುವುದು ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸೋಲಿಸಲು ಯಾವ ಲೀಡರ್‌ಗಳಿಂದಲೂ ಸಾಧ್ಯವಿಲ್ಲ, ಜನರೇ ಸೋಲಿಸಬೇಕು: ಸತೀಶ್ ಜಾರಕಿಹೊಳಿ

TAGGED:bengaluruMeet and GreetRahul Gandhis.jaishankarTejasvi Suryaಜಿ 20 ಸಮಾವೇಶಜೈಶಂಕರ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema
Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories

You Might Also Like

Rice
Latest

Explainer | 2 ಲಕ್ಷ ಟನ್ ಬಾಸ್ಮತಿ ಅಕ್ಕಿ, 3,000 ಕಂಟೇನರ್‌ ಬಂದರಿನಲ್ಲೇ ಲಾಕ್‌ – ಭಾರತಕ್ಕೆ ಮತ್ತೊಂದು ಸಂಕಷ್ಟ!

Public TV
By Public TV
36 minutes ago
Om Birla
Latest

ಮಾ.9 ರಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ ಲೋಕಸಭೆ – ಸದಸ್ಯರ ನಡುವೆ ಕುಳಿತುಕೊಳ್ಳಲಿದ್ದಾರೆ ಓಂ ಬಿರ್ಲಾ

Public TV
By Public TV
47 minutes ago
R Ashok 1
Bengaluru City

ಸಿಎಂ ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸಲಿದ್ದಾರೆ: ಅಶೋಕ್ ಟೀಕೆ

Public TV
By Public TV
1 hour ago
newlywed man dies of heart attack in nelamangala
Bengaluru Rural

ನೆಲಮಂಗಲ | ಹೃದಯಾಘಾತಕ್ಕೆ ನವವಿವಾಹಿತ ಬಲಿ

Public TV
By Public TV
2 hours ago
Pakistan T20 World Cup player fined after alleged misconduct with female hotel staff in Sri Lanka
Cricket

ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಪಾಕ್‌ ಆಟಗಾರನಿಗೆ ಬಿತ್ತು ದಂಡ

Public TV
By Public TV
2 hours ago
Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?