Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Public TV
Last updated: April 2, 2023 5:03 pm
Public TV
Share
2 Min Read
Jaishankar 1
SHARE

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಂಡ ವಿಚಾರಕ್ಕೆ ಅಮೆರಿಕ (America) ಹಾಗೂ ಜರ್ಮನಿ (Germany) ನೀಡಿರುವ ಪ್ರತಿಕ್ರಿಯೆಗೆ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ (S.Jaishankar) ಕಿಡಿಕಾರಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಬೆಂಗಳೂರು (Bengaluru) ಕೇಂದ್ರ ಸಂಸದ ಪಿ.ಸಿ ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ನಲ್ಲಿ 500 ಕ್ಕಿಂತಲೂ ಅಧಿಕ ಯುವ ಮತದಾರರು ಹಾಗೂ ಸಾರ್ವಜನಿಕರೊಂದಿಗೆ ಆಯೋಜನೆಗೊಂಡಿದ್ದ Meet and Greet ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪಶ್ಚಿಮದ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿಯಿಂದ ಹೊರಬಂದಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿ ಸಮಾನ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುವುದು ಸಾಮಾನ್ಯ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದಿದ್ದಾರೆ.

Jaishankar

ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸಿ, ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಹೊರಬರಲು ಸಾಧ್ಯ. ಈ ರೀತಿಯ ಮನಸ್ಥಿತಿ ಇರುವ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ನಡೆಯಲೇಬೇಕಿದೆ ಎಂದಿದ್ದಾರೆ.

ಉಚಿತ ಕೊಡುಗೆಗಳ ಕುರಿತಾಗಿ, ಇತ್ತೀಚೆಗೆ ಉಚಿತ ಕೊಡುಗೆಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವ ಕ್ರಮ ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗುತ್ತದೆ. ತಾತ್ಕಾಲಿಕ ರಾಜಕೀಯ ಲಾಭದ ಸಲುವಾಗಿ ಮಾಡುವ ಇಂತಹ ಯೋಜನೆಗಳಿಗೆ ಯಾರೋ ಒಬ್ಬರು ಬೆಲೆ ತೆರಬೇಕಾಗುತ್ತದೆ. ಒಂದೆಡೆ ಉಚಿತ ನೀಡುವಾಗ ಬೇರೆ ಕಡೆಯಿಂದ ಕ್ರೋಢೀಕರಣ ಮಾಡಲೇಬೇಕು. ಜವಾಬ್ದಾರಿ ರಹಿತ ಇಂತಹ ಉಚಿತ ಕೊಡುಗೆಗಳ ಕಾರ್ಯಕ್ರಮಗಳಿಂದ ದೇಶದ ಬೊಕ್ಕಸಕ್ಕೆ ಉಂಟಾಗುವ ಅಪಾರ ಹಾನಿ ಎಂದಿದ್ದಾರೆ.

ಪ್ರಸ್ತುತ ಜಿ 20 ಆತಿಥೇಯ ರಾಷ್ಟ್ರವಾಗಿರುವ ಭಾರತವು, ಇದುವರೆಗೆ ಜಿ 20 ಸದಸ್ಯ ರಾಷ್ಟ್ರವಲ್ಲದ ದೇಶಗಳನ್ನು ಸಂಪರ್ಕಿಸಿ, ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಮುಂಚೆ ಇಂತಹ ಅತೀ ದೊಡ್ಡ ಸಮಾವೇಶಗಳನ್ನು ಆಯ್ದ ಕೇವಲ 2-3 ನಗರಗಳಲ್ಲಿ ಮಾತ್ರ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ದೇಶದ 60 ಇತರ ನಗರಗಳಲ್ಲಿ ಸಮಾವೇಶ ಆಯೋಜಿಸಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಗೆ ಪ್ರತೀ ರಾಜ್ಯ, ನಗರಗಳು ಕೂಡ ಗಣನೀಯ ಕೊಡುಗೆ ನೀಡುತ್ತಿವೆ. ಜಾಗತಿಕ ವಿದ್ಯಮಾನಗಳನ್ನು ಇತರ ನಗರಗಳಿಗೂ ಪರಿಚಯಿಸುವ ಉದ್ದೇಶದಿಂದ ಈ ರೀತಿ ಎಲ್ಲೆಡೆ ಜಿ 20 ಸಮಾವೇಶಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿ 20 ಸಮಾವೇಶಕ್ಕೆ ಜಗತ್ತಿನ ವಿವಿಧೆಡೆಯಿಂದ ಆಗಮಿಸುವ 200ಕ್ಕಿಂತಲೂ ಅಧಿಕ ಅಗ್ರಗಣ್ಯ ವ್ಯಕ್ತಿಗಳಿಗೆ ಈ ದೇಶದ ವೈವಿಧ್ಯಮಯ ಸಂಸ್ಕೃತಿ, ಆಚಾರ, ವಿಚಾರ, ಅಡುಗೆ, ತಿನಿಸುಗಳ ಬಗ್ಗೆ ಅರಿವು ಮೂಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಭಾರತ (India) ವಿಶ್ವಕ್ಕೆ ತೆರೆದುಕೊಳ್ಳುವುದು ಹಾಗೂ ವಿಶ್ವವು ಭಾರತವನ್ನು ಅರ್ಥೈಸಿಕೊಳ್ಳುವುದು ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸೋಲಿಸಲು ಯಾವ ಲೀಡರ್‌ಗಳಿಂದಲೂ ಸಾಧ್ಯವಿಲ್ಲ, ಜನರೇ ಸೋಲಿಸಬೇಕು: ಸತೀಶ್ ಜಾರಕಿಹೊಳಿ

Share This Article
Facebook Whatsapp Whatsapp Telegram
Previous Article Prabhu Deva ಪ್ರಭುದೇವ ಕನ್ನಡಕ್ಕೆ ಬೋಲ್ಡ್‌ ಆದ ಕನ್ನಡಿಗರು
Next Article BENGALURU lorry bike ACCIDENT ANUSHA 1 ಬೆಂಗಳೂರಿನಲ್ಲಿ ಬೈಕ್‌ಗೆ ಲಾರಿ ಡಿಕ್ಕಿ- ಮಹಿಳೆ ಸಾವು

Latest Cinema News

vijayalakshmi 1 1
ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
Bengaluru City Cinema Crime Districts Karnataka Latest Top Stories
Gandugali Rama
ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು
Bengaluru City Cinema Crime Karnataka Latest States Top Stories
salman khan
ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
Bollywood Cinema Latest Top Stories TV Shows
Rihanna
3ನೇ ಮಗುವಿನ ತಾಯಿಯಾದ ಖ್ಯಾತ ಸಿಂಗರ್ ರಿಹಾನಾ
Cinema Latest
Meghana Raj
ಶ್ವೇತಾ ಚೆಂಗಪ್ಪ ಕ್ಲಿಕ್ ಮಾಡಿರೋ ಫೋಟೋ ಹಂಚಿಕೊಂಡ ಮೇಘನಾ ರಾಜ್
Cinema Latest Sandalwood Top Stories

You Might Also Like

breaks out at furniture shop in Malleshwaram Bengaluru
Bengaluru City

ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

32 minutes ago
Rowdy 2
Bengaluru City

ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

36 minutes ago
KKRTC
Districts

ಕಲಬುರಗಿ | ದಸರಾ ಹಬ್ಬದ ಪ್ರಯುಕ್ತ 500 ಹೆಚ್ಚುವರಿ ಬಸ್ ನಿಯೋಜನೆ

1 hour ago
Donald Trump 3
Latest

ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

2 hours ago
A Khata 2
Bengaluru City

ಬೆಂಗಳೂರಿನ ಆಸ್ತಿ ಮಾಲೀಕರಿಗೆ GBA ಗುಡ್‌ನ್ಯೂಸ್‌ – ಬಿ ಖಾತಾಗಳಿಗೂ ಎ-ಖಾತಾ ಮಾನ್ಯತೆಗೆ ತಯಾರಿ

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?