ಭಾರತದ ದಾಳಿಗೆ ಬೆಚ್ಚಿದ ಪಾಕ್‌ – ಅಣ್ವಸ್ತ್ರ ನಿರ್ಧಾರ ಕೈಗೊಳ್ಳುವ ತುರ್ತು ಸಭೆ ಕರೆದ ಪ್ರಧಾನಿ

Public TV
1 Min Read
Shehbaz Sharif

ಇಸ್ಲಾಮಾಬಾದ್‌: ಭಾರತದ (India) ದಾಳಿಗೆ ತತ್ತರಿಸಿದ ಪಾಕಿಸ್ತಾನ (Pakistan) ಈಗ ಪರಮಾಣು ಶಸ್ತ್ರಾಸ್ತ್ರ ಬಳಕೆಯ ಬಗ್ಗೆ  ನಿರ್ಧಾರ ಕೈಗೊಳ್ಳುವ ಸಭೆಯನ್ನು ಕರೆದಿದೆ.

ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರು National Command Authority ತುರ್ತು ಸಭೆಯನ್ನು ಕರೆದಿದ್ದಾರೆ. ಇದು ದೇಶದ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಕಾರ್ಯಾಚರಣೆಯ  ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಮಾತ್ರ ಈ ಸಭೆಯನ್ನು ಕರೆಯಲಾಗುತ್ತದೆ. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದ ಪಾಕ್‌ ಬ್ಯಾಲಿಸ್ಟಿಕ್‌ ಮಿಸೈಲ್‌ ಹರ್ಯಾಣದಲ್ಲೇ ಛಿದ್ರ!

 

ಭಾರತ ಮತ್ತು ಪಾಕಿಸ್ತಾನ ಎರಡೂ ಪರಮಾಣು ಬಾಂಬ್‌ ಹೊಂದಿದೆ. ಭಾರತ ತಾನೂ ಯಾವತ್ತೂ ಮೊದಲು ಪರಮಾಣು ಅಸ್ತ್ರವನ್ನು ಪ್ರಯೋಗಿಸುವುದಿಲ್ಲ ಎಂದು ವಿಶ್ವಕ್ಕೆ ಹೇಳಿದೆ. ಆದರೆ ತನ್ನ ಮೇಲೆ ಪ್ರಯೋಗ ಮಾಡಿದರೆ ಪ್ರಯೋಗಿಸುತ್ತೇನೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್‌ – ದಿವಾಳಿಯತ್ತ ʻಭಿಕಾರಿಸ್ತಾನʼ

ಈ ಹಿಂದೆ ರಷ್ಯಾ-ಉಕ್ರೇನ್‌, ಇಸ್ರೇಲ್‌-ಹಮಾಸ್‌, ಇರಾನ್‌ ಯುದ್ಧ ನಡೆಯುವಾಗಲೂ ಪರಮಾಣು ಬಾಂಬ್‌ ಬಳಸುವ ಬಗ್ಗೆ ಬಹಳಷ್ಟು ಸುದ್ದಿಗಳು ಪ್ರಕಟವಾಗಿದ್ದವು. ಆದರೆ ಯಾರೂ ಅಣು ಬಾಂಬ್‌ ಪ್ರಯೋಗಿಸುವ ಧೈರ್ಯ ಮಾಡಿರಲಿಲ್ಲ. ಒಂದು ವೇಳೆ ಯಾವುದಾದರೂ ದೇಶ ಪರಮಾಣು ಬಾಂಬ್‌ ಬಳಸಿದರೆ ಆ ದೇಶದ ಜೊತೆ ವಿಶ್ವವೇ ಆರ್ಥಿಕ ಸಂಬಂಧವನ್ನೇ ಕಳೆದುಕೊಳ್ಳುತ್ತದೆ. ಹೀಗಾಗಿ ಎರಡನೇ ಮಹಾಯುದ್ಧದ ಬಳಿಕ ಇಲ್ಲಿಯವರೆಗೆ ಯಾವುದೇ ದೇಶ ಪರಮಾಣು ಅಸ್ತ್ರವನ್ನು ಬಳಸಿಲ್ಲ.

Share This Article