Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

Cricket

AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

Public TV
Last updated: April 21, 2023 7:20 pm
Public TV
Share
2 Min Read
INDvsPAK
SHARE

ಇಸ್ಲಾಮಾಬಾದ್‌: ಏಕದಿನ ಏಷ್ಯಾಕಪ್‌ 2023ರ (ODI AisaCup) ಟೂರ್ನಿಗೆ ಭಾರತ ತಂಡ (Team India) ಪಾಲ್ಗೊಳ್ಳುವ ವಿಚಾರದಲ್ಲಿ ಕೊನೆಗೂ ಭಾರತದ ಎದುರು ಪಾಕಿಸ್ತಾನ (Pakistan) ಮಂಡಿಯೂರಿದೆ.

ಪಾಕಿಸ್ತಾನವು ಆತಿಥೇಯ ದೇಶಗಳೊಂದಿಗೆ ತವರಿನಲ್ಲಿ ಹಾಗೂ ಭಾರತ ಪ್ರತಿಸ್ಪರ್ಧಿ ದೇಶಗಳೊಂದಿಗೆ ಆಡುವಾಗ ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಹೇಳಿದೆ. ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥ ನಜಮ್‌ ಸೇಥಿ (Najam Sethi) ಶುಕ್ರವಾರ ಈ ವಿಷಯವನ್ನು ಬೋರ್ಡ್‌ನಲ್ಲಿ ಪ್ರಸ್ತಾಪಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ICC) ಪ್ರಸ್ತಾವನೆ ಕಳುಹಿಸಿದ್ದಾರೆ. ಇದನ್ನೂ ಓದಿ: ಲೀಗ್‌ ಹಂತದಲ್ಲೇ ಹಲವು ಸಮಸ್ಯೆ – ಈ ಸಲ ಕಪ್‌ ಗೆಲ್ಲುತ್ತಾ RCB?

Jay Shah

ಸೆಪ್ಟೆಂಬರ್‌ 2 ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಸೇರಿ 6 ದೇಶಗಳು ಸ್ಪರ್ಧಿಸಲಿವೆ. ಭಾರತ ತಟಸ್ಥ ಸ್ಥಳದಲ್ಲಿ ಆಡುವ ಕುರಿತು ಐಸಿಸಿ ನಿರ್ಧಾರ ಪ್ರಕಟಿಸಿದ ಬಳಿಕ ಪಂದ್ಯಗಳ ನಿರ್ಣಾಯಕ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪಿಸಿಬಿ ಹೇಳಿದೆ. ಇದನ್ನೂ ಓದಿ: ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್‌

IND vs PAK 2

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಮಹತ್ವದ ಬೆಳವಣಿಗೆಯಿಂದ ಮುಂದೆ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪಾಕಿಸ್ತಾನದಲ್ಲಿ ಆಡುವ ಸಾಧ್ಯತೆಯಿದೆ. ಅದಕ್ಕಾಗಿ ಏಷ್ಯಾಕಪ್‌ ಅನ್ನು ತಟಸ್ಥ ಸ್ಥಳದಲ್ಲಿ ಆಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

Team India Cricket

ಭಾರತವು ತನ್ನ ದೇಶದಲ್ಲಿ ಕ್ರಿಕೆಟ್‌ ಆಡಬೇಕೆಂದು ಇಲ್ಲಿನ ಜನ ಬಯಸಿದ್ದಾರೆ. ನಮ್ಮ ಸರ್ಕಾರವೂ ಭಾರತದ ವಿರುದ್ಧ ಆಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ನಾವು ಭಾರತದೊಂದಿಗೆ ಗೌರವಯುತವಾಗಿ ಕ್ರಿಕೆಟ್‌ ಆಡಲು ಬಯಸುತ್ತೇವೆ. ಇದರಿಂದ ಪಾಕಿಸ್ತಾನದ ಆರ್ಥಿಕತೆಯೂ ಅಭಿವೃದ್ಧಿಯಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಮುಖ್ಯಸ್ಥ ನಜಮ್‌ ಸೇಥಿ ತಿಳಿಸಿದ್ದಾರೆ.

ಏಕದಿನ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ತಂಡ ತಟಸ್ಥ ಸ್ಥಳದಲ್ಲಿ ಆಡುವ ಬಗ್ಗೆ ಬಿಸಿಸಿಐ ಆಗಲಿ, ಐಸಿಸಿ ಆಗಲಿ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

IND VS PAK 1

ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ: ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

TAGGED:bcciindiaINDVsPAKJayShahODI AisaCupODI WorldCuppakistanRohit Sharmaಏಕದಿನ ವಿಶ್ವಕಪ್ಏಷ್ಯಾಕಪ್ಜಯ್ ಶಾಪಾಕಿಸ್ತಾನಬಿಸಿಸಿಐಭಾರತರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Israel eleminates Naval Commander Alireza Tangsiri directly responsible for closing the Strait of Hormuz
Latest

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

Public TV
By Public TV
4 seconds ago
siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
7 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
9 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
23 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?