– ನ.19ರ ವರೆಗೆ ಕೆಲ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳು ಬಂದ್
ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದ (Manipur violence) ಭದ್ರತಾ ವ್ಯವಸ್ಥೆಗಳ ಕುರಿತು ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರಿಂದು ಉನ್ನತ ಮಟ್ಟದ ಸಭೆ ನಡೆಸಿದರು. ಹಲವು ವಿಷಯಗಳ ಕುರಿತು ಚರ್ಚಿಸಿದರು.
ಈ ವೇಳೆ ಉದ್ವಿಗ್ನತೆ ಹೆಚ್ಚಿರುವ ಕಾರಣ ಮಣಿಪುರದಲ್ಲಿ ಹೆಚ್ಚುವರಿ 50 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳನ್ನು (CAPF) ನಿಯೋಜಿಸಲು ನಿರ್ಧರಿಸಲಾಯಿತು. ಈ ಸಂಬಂಧ ಸಭೆಯ ಬಳಿಕ ಸಿಎಪಿಎಫ್ ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಅಮಿತ್ ಶಾ ನಿರ್ದೇಶನ ನೀಡಿದರು. ಈ ಮೊದಲೇ 20 ಭದ್ರತಾ ಪಡೆಗಳನ್ನು ನಿಯೋಹಿಸಲಾಗಿತ್ತು. ಸದ್ಯ ಒಟ್ಟು 70 ಕೇಂದ್ರೀಯ ಭದ್ರತಾ ಪಡೆಗಳು ಮಣಿಪುರದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ.
ಶಾಲೆ, ಕಾಲೇಜುಗಳು ಬಂದ್:
ಇನ್ನೂ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರದಿಂದ ಜನ ಕಂಗಾಲಾಗಿದ್ದು, ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜುಗಳನ್ನು ನವೆಂಬರ್ 19ರ ವರೆಗೆ (ಮಂಗಳವಾರ) ಬಂದ್ ಮಾಡಿರುವುದಾಗಿ ಮಣಿಪುರ ಸರ್ಕಾರ ಸೋಮವಾರ (ಇಂದು) ಘೋಷಿಸಿದೆ. ಇದನ್ನೂ ಓದಿ: ವಿಮಾನ ಪ್ರಯಾಣದಲ್ಲಿ ದಾಖಲೆ – ನ.17 ರಂದು ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ
ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
ಜಿರಿಬಾಮ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವುದಕ್ಕೆ ಆಕ್ರೋಶಗೊಂಡ ಜನರು ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಯಿತು. ಇದನ್ನೂ ಓದಿ: ದೆಹಲಿ | 10, 12ನೇ ತರಗತಿಯವರಿಗೆ ಬೇರೆ ಬಗೆಯ ಶ್ವಾಸಕೋಶಗಳಿಲ್ಲ – ತರಗತಿ ಬಂದ್ಗೆ ಸುಪ್ರೀಂ ನಿರ್ದೇಶನ
ನಿಂಗ್ತೊಕೊಂಗ್ನಲ್ಲಿ ಲೋಕೋಪಯೋಗಿ ಸಚಿವ ಗೋವಿಂದಾಸ್ ಕೊಂತುಜಮ್, ಲಾಂಗ್ಮೇಡಾಂಗ್ ಬಜಾರ್ನಲ್ಲಿನ ಬಿಜೆಪಿ ಶಾಸಕ ವೈ ರಾಧೇಶ್ಯಾಮ್, ತೌಬಲ್ ಜಿಲ್ಲೆಯ ವಾಂಗ್ಜಿಂಗ್ ತೆಂತಾದ ಬಿಜೆಪಿ ಶಾಸಕ ಪಿ. ಬ್ರೋಜೆನ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಖುಂಡ್ರಕ್ಪಾಮ್ನ ಕಾಂಗ್ರೆಸ್ ಶಾಸಕ ತೊಕ್ಚೋಮ್ ಲೋಕೇಶ್ವರ್ ಅವರ ಮನೆಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿತ್ತು. ಇದರಿಂದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಇದರಿಂದ ಅಮಿತ್ ಶಾ ಮಹಾರಾಷ್ಟ್ರದಲ್ಲಿ ನಿಯೋಜನೆಗೊಂಡಿದ್ದ ಚುನಾವಣಾ ರ್ಯಾಲಿಗಳನ್ನು ದಿಢೀರ್ ಸ್ಥಗಿತಗೊಳಿಸಿ ಭಾನುವಾರ ಸಂಜೆಯೇ ಭದ್ರತಾ ಅಧಿಕಾರಿಗಳ ಸಭೆ ನಡೆಸಿದ್ದರು.
ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು, ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ ಎಂದು ಮುಖ್ಯಮಂತ್ರಿಗಳನ್ನ ನೇರವಾಗಿ ಹೊಣೆ ಮಾಡಿತು. ಇದನ್ನೂ ಓದಿ: ನಾವು ಜಾತಿ ಸಮೀಕ್ಷೆ ನಡೆಸುತ್ತೇವೆ, ಅವಕಾಶ ವಂಚಿತರಿಗೆ ಇದರಿಂದ ಲಾಭವಾಗಲಿದೆ: ರಾಹುಲ್ ಗಾಂಧಿ
ಸದ್ಯ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೈಗೆತ್ತಿಕೊಂಡಿದೆ. ಇದನ್ನೂ ಓದಿ: Kantara Chapter 1 ಟೈಟಲ್ ಟೀಸರ್ ರಿಲೀಸ್- ರಿಷಬ್ ಶೆಟ್ಟಿ ಲುಕ್ಗೆ ಫ್ಯಾನ್ಸ್ ಫಿದಾ