Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾಳೆ ಮಂಡ್ಯಗೆ ಅಮಿತ್ ಶಾ- ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು

Public TV
Last updated: December 29, 2022 12:14 pm
Public TV
Share
4 Min Read
AMITSHAH 1
SHARE

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election) ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಬೇಕೆಂದು ಬಿಜೆಪಿ (BJP) ಶಪಥ ಮಾಡಿದ್ದು, ಈ ನಿಟ್ಟಿನಲ್ಲಿ ಹಳೆ ಮೈಸೂರು ಭಾಗದಲ್ಲಿ ಅತ್ಯಧಿಕ ಕ್ಷೇತ್ರಗಳನ್ನು ಕಬ್ಜ ಮಾಡುವ ಉದ್ದೇಶದಿಂದ ಸ್ವತಃ ಬಿಜೆಪಿಯ ಮಾಸ್ಟರ್ ಮೈಂಡ್ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಧುಮುಕಿದ್ದಾರೆ. ನಾಳೆ ಮಂಡ್ಯದಲ್ಲಿ (Mandya) ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಂಬಂಧ ಭರ್ಜರಿ ತಯಾರಿ ಮಾಡಿಕೊಂಡಿದೆ.

ಸದ್ಯ ಬಿಜೆಪಿ ಕರ್ನಾಟದಲ್ಲಿ (Karnataka) ಹಳೆ ಮೈಸೂರು ಭಾಗದ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ನಮ್ಮ ನೆಲೆಯನ್ನು ಗಟ್ಟಿಗೊಳಿಸಿಕೊಂಡಿದೆ. ಆದರೆ ಮುಂದಿನ ಚುನಾವಣೆಯಲ್ಲಿ ಅಧಿಕ ಕ್ಷೇತ್ರಗಳಲ್ಲಿ ಗೆದ್ದು ಸಂಪೂರ್ಣ ಬಹುಮತಗಳ ಮೂಲಕ ಬಿಜೆಪಿ ಸರ್ಕಾರ ರಚನೆ ಮಾಡಬೇಕೆಂದರೆ ಹಳೆ ಮೈಸೂರು ಭಾಗದಲ್ಲಿ‌ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಹೀಗಾಗಿ ಬಿಜೆಪಿ ಹಳೆ ಮೈಸೂರು ಭಾಗದ ಮೇಲೆ ಹೆಚ್ಚು ಗಮನವರಿಸುತ್ತಿದೆ. ಮಂಡ್ಯ ಜಿಲ್ಲೆ ಸೇರಿದಂತೆ ಹಳೆ ಮೈಸೂರು ಭಾಗದ ಹಲವು ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕೆಂದರೆ ಬಿಜೆಪಿ ಹಲವು ಮಾಸ್ಟರ್ ಪ್ಲ್ಯಾನ್ ಮಾಡುವುದು ಅನಿವಾರ್ಯ ಆಗಿದೆ. ಇದೀಗ ಆ ಮಾಸ್ಟರ್ ಪ್ಲಾನ್ ಮಾಡಲು ಬಿಜೆಪಿಯ ಚಾಣಕ್ಯ ಎಂದು ಬಿರುದು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಖಾಡಕ್ಕೆ ಧುಮಿಕಿದ್ದಾರೆ. ನಾಳೆ ಮಂಡ್ಯದಲ್ಲಿ ಅಮಿತ್ ಶಾ ಅವರನ್ನು ಕರೆಸಿ ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

MANDYA FLEX 2

ನಾಳೆ ಮಂಡ್ಯ ನಗರಕ್ಕೆ ಕೇಂದ್ರ ಗೃಹ ಸಚಿವ ಆಗಮಿಸಲಿದ್ದು, ಬೆಳಗ್ಗೆ 11 ಗಂಟೆಗೆ ಮದ್ದೂರಿನ ಭೈರಾಪಟ್ಟಣದ ಹೆಲಿಪ್ಯಾಡ್‌ಗೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಬಳಿಕ 11.15ಕ್ಕೆ ಗೆಜ್ಜಲಗೆರೆಯಲ್ಲಿರುವ ಮನ್‌ಮುನ್‌ನ ಮೆಗಾ ಡೈರಿಯನ್ನು ಉದ್ಘಾಟಿಸಿ ಬಳಿಕ ಅಲ್ಲೇ ಊಟ ಮಾಡಲಿದ್ದಾರೆ. ಇದಾದ ಬಳಿಕ ಮತ್ತೆ ಭೈರಾಪಟ್ಟಣದ ಹೆಲಿಪ್ಯಾಡ್‌ನಿಂದ ಮಂಡ್ಯ ನಗರದ ಪಿಇಎಸ್ ಕಾಲೇಜಿನ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ‌ ಆಗಮಿಸಿ 1.30ಕ್ಕೆ ಮಂಡ್ಯ ವಿವಿ ಆವರಣದಲ್ಲಿ ನಡೆಯುವ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಂಪುಟದ ಹಲವು ಸಚಿವರು ಭಾಗಿಯಾಗಲಿದ್ದಾರೆ.

ನಾಳೆ ಮಂಡ್ಯ ವಿವಿ ಆವರಣದಲ್ಲಿ ನಡೆಯುವ ಬಿಜೆಪಿಯ ಸಂಕಲ್ಪ ಯಾತ್ರೆಗೆ ಬೃಹತ್ ವೇದಿಯನ್ನು ಸಿದ್ಧಪಡಿಸಲಾಗಿದೆ. ಈ ಬೃಹತ್ ಸಮಾವೇಶದಲ್ಲಿ 1 ಲಕ್ಷ ಮಂದಿಯನ್ನು ಸೇರಿಸುವ ಗುರಿಯನ್ನು ಬಿಜೆಪಿ ಮುಖಂಡರು ಹೊಂದಿದ್ದು, ಈ ಸಂಬಂಧ ಮಂಡ್ಯ ವಿವಿ ಆವರಣದಲ್ಲಿ ಜರ್ಮನ್ ಟೆಂಟ್‌ನಿಂದ ಸುಸರ್ಜಿತ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. ಸಮಾವೇಶಕ್ಕೆ ಬರುವ ಎಲ್ಲಾ ಜನರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಅಮಿತ್ ಶಾ ಮಂಡ್ಯಗೆ ಆಗಮಿಸುತ್ತಿರುವ ಹಿನ್ನೆಲೆ ಇಡೀ ಮಂಡ್ಯ‌ ನಗರ ಕೇಸರಿ ಮಯವಾಗಿ ಕಂಗೊಳಿಸುತ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಕೇಸರಿ ಬಂಟಿಂಗ್ಸ್, ಬಿಜೆಪಿ ಬಾವುಟ, ಅಮಿತ್ ಶಾ ಸ್ವಾಗತ ಕೋರುವ ಬ್ಯಾನರ್‌ಗಳನ್ನು ಹಾಕಿ‌ ಶೃಂಗಾರ ಮಾಡಲಾಗಿದೆ. ಇನ್ನೂ ಸಂಸದೆ ಸುಮಲತಾ ಅಂಬರೀಶ್ ಅವರ ಭಾವಚಿತ್ರ ಅಮಿತ್ ಶಾ ಅವರ ಸ್ವಾಗತ ಬ್ಯಾನರ್‌ನಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದು, ಮಂಡ್ಯದ ರಾಜಕೀಯ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಅಮಿತ್ ಶಾಗೆ Z+ ಸೆಕ್ಯೂರಿಟಿ ಇರುವ ಕಾರಣ ಎಸ್‌ಪಿಜಿ ಹಾಗೂ ಪೊಲೀಸ್ ಇಲಾಖೆ ಬಿಗಿ ಭದ್ರತೆ ಮಾಡಿಕೊಂಡಿದೆ.

MANDYA FLEX

ಒಂದು ಕಡೆ ಅಮಿತ್ ಶಾ ಮಂಡ್ಯಗೆ ಆಗಮಿಸುತ್ತಿರುವುದು ಬಿಜೆಪಿ ವಲಯದಲ್ಲಿ ಸಂತಸ ಮನೆ ಮಾಡಿದರೆ, ಇನ್ನೊಂದೆಡೆ ಅಮಿತ್ ಶಾಗೆ ರೈತರ ಪ್ರತಿಭಟನೆ ಬಿಸಿ ಮುಟ್ಟುವ ಸಾಧ್ಯತೆ ಇದೆ. 53 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಅಹೋರಾತ್ರಿ ಧರಣಿ‌ ಮಾಡುತ್ತಿದ್ದಾರೆ.‌ ಅಮಿತ್ ಶಾ ಮಂಡ್ಯಗೆ ಬರುತ್ತಿರುವ ಕಾರಣ ನಿನ್ನೆ ಏಕಾಏಕಿ ಪೊಲೀಸರು ಅಹೋರಾತ್ರಿ ಧರಣಿಯ ಟೆಂಟ್‌ ಅನ್ನು ಧ್ವಂಸ ಮಾಡಿದ ಕಾರಣ ರೈತರು ಪೊಲೀಸರ ವಿರುದ್ಧ ಆಕ್ರೋಶ ಪಡಿಸಿದ ಕಾರಣ ಮತ್ತೆ ಟೆಂಟ್‌ನ್ನು ಪೊಲೀಸರು‌ ನಿರ್ಮಾಣ ಮಾಡಿದರು. ಇದೀಗ ರೈತರು ನಮ್ಮ ಬೇಡಿಕೆಗಳನ್ನು ಅಮಿತ್ ಶಾ ಮುಂದೆ ಇಡಬೇಕು, ನಮಗೆ ಅಮಿತ್ ಶಾ ಭೇಟಿಗೆ ಅವಕಾಶ ನೀಡಬೇಕು. ಒಂದು ವೇಳೆ ಅವಕಾಶ ನೀಡದಿದ್ದರೆ ಅಮಿತ್ ಶಾ ಗೋ ಬ್ಯಾಕ್ ಚಳುವಳಿ ಮಾಡುವುದಾಗಿ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೇಸರಿಮಯವಾದ ಮಂಡ್ಯ- ಬಿಜೆಪಿ ಫ್ಲೆಕ್ಸ್‌ನಲ್ಲಿ ಸ್ವಾಭಿಮಾನಿ ಸಂಸದೆ ಫೋಟೋ!

MANDYA FLEX 1

ಒಟ್ಟಾರೆ ಮುಂದಿನ ವಿಧಾನಸಭಾ ಚುನಾವಣೆಯ ಲೆಕ್ಕಾಚಾರ ಇಟ್ಟುಕೊಂಡು ಮಂಡ್ಯಗೆ ಅಮಿತ್ ಶಾ ಬರುತ್ತಿರುವುದು ಬಿಜೆಪಿಗೆ ಶಕ್ತಿ ತುಂಬಿದ್ರೆ, ಇನ್ನೊಂದೆಡೆ ಪೊಲೀಸರು ಮಾಡಿರುವ ಯಡವಟ್ಟಿನಿಂದ ಅನ್ನದಾತರು ಅಮಿತ್ ಶಾಗೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಕಾಯುತ್ತಿದ್ದಾರೆ. ಆದ್ರೆ ಅಮಿತ್ ಶಾ ರೈತರ ಭೇಟಿಗೆ ಅವಕಾಶ ನೀಡಿ ತಮ್ಮ ರಾಜಕೀಯ ಚಾಣಾಕ್ಷತನದಿಂದ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ‌ ಕಮಾಲ್‌ಗೆ ಕಾರಣರಾಗುತ್ತಾರಾ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ರಾಜ್ಯಕ್ಕೆ ಚುನಾವಣಾ ಚಾಣಕ್ಯ – ಬಿಜೆಪಿಯಲ್ಲಿ ಮಂದಹಾಸ

Live Tv
[brid partner=56869869 player=32851 video=960834 autoplay=true]

TAGGED:Amit Shahbjpmandyaಅಮಿತ್ ಶಾಧರಣಿಮಂಡ್ಯಹಳೆ ಮೈಸೂರು
Share This Article
Facebook Whatsapp Whatsapp Telegram

Cinema Updates

disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
1 hour ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
2 hours ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
2 hours ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
3 hours ago

You Might Also Like

Mangaluru Landslide ASHWINI
Dakshina Kannada

ಮಂಗಳೂರು | ಗುಡ್ಡ ಕುಸಿತದಲ್ಲಿ ಮಕ್ಕಳನ್ನು ಕಳೆದುಕೊಂಡಿದ್ದ ಮಹಿಳೆಯ ಎರಡೂ ಕಾಲು ಕಟ್

Public TV
By Public TV
56 seconds ago
madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
55 minutes ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
1 hour ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
1 hour ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
1 hour ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?