Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ- ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

Public TV
Last updated: March 3, 2023 2:45 pm
Public TV
Share
2 Min Read
AMITSHAH CONGRESS
SHARE

ಬೆಂಗಳೂರು: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪುತ್ರ ಪ್ರಶಾಂತ್ ಮಾಡಾಳ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿ ಸುಮಾರು 8 ಕೋಟಿ ಸೀಜ್ ಮಾಡಿದೆ. ಲೋಕಾಯುಕ್ತ (Lokayukta) ದಾಳಿ ಮಾಡುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!

ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?

ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?

ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ @BJP4Karnataka?#ElectionCollection pic.twitter.com/y3TdEMEWyo

— Karnataka Congress (@INCKarnataka) March 3, 2023

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರು ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದರ ಹಿಂದಿನ ಉದ್ದೇಶವೇನು ಎಂಬುದಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು @BJP4Karnataka?

◆ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayPM ಗೆ ತಲುಪಿಸುವುದಕ್ಕಾ?

◆ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ?

◆ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ?#ElectionCollection

— Karnataka Congress (@INCKarnataka) March 3, 2023

ಟ್ವೀಟ್‍ನಲ್ಲೇನಿದೆ..?: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!. ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?. ಇಂದು ಅಮಿತ್ ಶಾ (Amitshah) ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?. ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

"ನಾ ಖಾವುಂಗಾ, ನಾ ಖಾನೆದುಂಗಾ"
ಎನ್ನುವ @narendramodi ಅವರೇ,
ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ.

ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಬಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ?#ElectionCollection

— Karnataka Congress (@INCKarnataka) March 3, 2023

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು ಬಿಜೆಪಿ?. ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayCM ಗೆ ತಲುಪಿಸುವುದಕ್ಕಾ?. ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ?. ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ? ಎಂದಿದೆ. ಇದನ್ನೂ ಓದಿ: ಭ್ರಷ್ಟಾಚಾರಕ್ಕೆ ದಾಖಲೆಯಲ್ಲವೇ?- ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ

ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‌ಗಳನ್ನೇ ಕಟ್ಟಿಸಿರುವಂತಿದೆ!

ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ.

ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ @AmitShah ಅವರೇ?#ElectionCollection

— Karnataka Congress (@INCKarnataka) March 3, 2023

“ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ನರೇಂದ್ರ ಮೋದಿ (Narendra Modi) ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? “ಶಬಾಷ್” ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‍ಗಳನ್ನೇ ಕಟ್ಟಿಸಿರುವಂತಿದೆ ಎಂದು ಕಾಂಗ್ರೆಸ್ ಹೇಳಿದೆ.

ಭ್ರಷ್ಟಾಚಾರವೇ ಬಿಜೆಪಿಯ ಭರವಸೆ!

ನಾವು ಹಿಂದೆಯೂ ಹೇಳಿದ್ದೇವೆ ಮುಂದೆಯೂ ಹೇಳುತ್ತೇವೆ. ಬಿಜೆಪಿ ನೀಡುವ ಭರವಸೆ 40% ಕಮಿಷನ್, ಅಕ್ರಮ, ಹಗರಣ, ಭ್ರಷ್ಟಾಚಾರ ಮಾತ್ರ.

ಕರ್ನಾಟಕವನ್ನು ಲೂಟಿ ಹೊಡೆದು ಕೇಂದ್ರದ ನಾಯಕರಿಗೆ ಕಪ್ಪ ಕಾಣಿಕೆ ನೀಡುವುದಷ್ಟೇ ಇವರ ಭರವಸೆ. #ElectionCollection pic.twitter.com/Wqpci9sgfb

— Karnataka Congress (@INCKarnataka) March 3, 2023

ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ. ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ ಅಮಿತ್ ಶಾ ಅವರೇ? ಭ್ರಷ್ಟಾಚಾರವೇ ಬಿಜೆಪಿಯ ಭರವಸೆ! ನಾವು ಹಿಂದೆಯೂ ಹೇಳಿದ್ದೇವೆ ಮುಂದೆಯೂ ಹೇಳುತ್ತೇವೆ. ಬಿಜೆಪಿ ನೀಡುವ ಭರವಸೆ 40% ಕಮಿಷನ್, ಅಕ್ರಮ, ಹಗರಣ, ಭ್ರಷ್ಟಾಚಾರ ಮಾತ್ರ ಎಂದು ತಿಳಿಸಿದೆ. ಇದನ್ನೂ ಓದಿ: ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಈ ಪ್ರಕರಣವನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ ಎಂದಿರುವ @BSBommai ಅವರೇ,

ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ನಿಮ್ಮ ಕೊಡುಗೆ, ಬದ್ಧತೆ ಏನು?

ಈ ಹಿಂದೆಯೇ ಕಮಿಷನ್ ವಿಚಾರವನ್ನು ತನಿಖೆಗೆ ವಹಿಸದೆ ಬಂಡ ಸಮರ್ಥನೆಗೆ ಇಳಿದಿದ್ದೇಕೆ?

ಆರೋಪ ಮಾಡಿದವರ ಮೇಲೆಯೇ ಮುಗಿಬಿದ್ದಿದೇಕೆ?#ElectionCollection pic.twitter.com/PeMsBURuDl

— Karnataka Congress (@INCKarnataka) March 3, 2023

ಕರ್ನಾಟಕವನ್ನು ಲೂಟಿ ಹೊಡೆದು ಕೇಂದ್ರದ ನಾಯಕರಿಗೆ ಕಪ್ಪ ಕಾಣಿಕೆ ನೀಡುವುದಷ್ಟೇ ಇವರ ಭರವಸೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಈ ಪ್ರಕರಣವನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ ಎಂದಿರುವ ಬೊಮ್ಮಾಯಿ (Basavaraj Bommai) ಅವರೇ, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ನಿಮ್ಮ ಕೊಡುಗೆ, ಬದ್ಧತೆ ಏನು? ಈ ಹಿಂದೆಯೇ ಕಮಿಷನ್ ವಿಚಾರವನ್ನು ತನಿಖೆಗೆ ವಹಿಸದೆ ಬಂಡ ಸಮರ್ಥನೆಗೆ ಇಳಿದಿದ್ದೇಕೆ?. ಆರೋಪ ಮಾಡಿದವರ ಮೇಲೆಯೇ ಮುಗಿಬಿದ್ದಿದೇಕೆ ಎಂದು ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ.

TAGGED:AmitShahbengalurubjpcongressmadal virupakshappanarendra modiPrashanth Madalಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಪ್ರಶಾಂತ್ ಮಾಡಾಳ್ಬಿಜೆಪಿಬೆಂಗಳೂರುಮಾಡಾಳ್ ವಿರೂಪಾಕ್ಷಪ್ಪ
Share This Article
Facebook Whatsapp Whatsapp Telegram

Cinema Updates

rachita ram
ಡಿಂಪಲ್ ಕ್ವೀನ್ ಬಣ್ಣದ ಬದುಕಿಗೆ 12 ವರ್ಷ- ಶುಭಕೋರಿದ ದರ್ಶನ್
1 hour ago
komal
ತಮಿಳಿನತ್ತ ಕೋಮಲ್- ರಗಡ್ ಲುಕ್‌ನಲ್ಲಿ ಕನ್ನಡದ ನಟ
2 hours ago
sreeleela 2
ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಸೆಲ್ಫಿ- ಡೇಟಿಂಗ್ ಬಗ್ಗೆ ಹಿಂಟ್ ಕೊಟ್ರಾ ಈ ಜೋಡಿ?
2 hours ago
sapthami gowda
ತೆಲುಗಿಗೆ ‘ಕಾಂತಾರ’ ಲೀಲಾ- ‘ಮೂಡ್ ಆಫ್ ತಮ್ಮುಡು’ ಚಿತ್ರದ ಟೀಸರ್ ಔಟ್
18 hours ago

You Might Also Like

Russian Woman
Latest

ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

Public TV
By Public TV
1 hour ago
Pakistan 1
Latest

ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ

Public TV
By Public TV
1 hour ago
mumbai couple
Latest

ಮರಾಠಿಯಲ್ಲಿ ಮಾತಾಡು, ಇಲ್ಲದಿದ್ರೆ ಹಣ ಕೊಡಲ್ಲ; ಪಿಜ್ಜಾ ಡೆಲಿವರಿ ಬಾಯ್‌ಗೆ ದಂಪತಿ ಧಮ್ಕಿ

Public TV
By Public TV
2 hours ago
Whitefield Police
Bengaluru City

ಬೆಂಗಳೂರು | ʻಆಪರೇಷನ್‌ ಸಿಂಧೂರʼ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ – ಟೆಕ್ಕಿ ಅರೆಸ್ಟ್‌

Public TV
By Public TV
3 hours ago
Dubai Yakshotsava
Dakshina Kannada

ಜೂ.29 ರಂದು ‘ದುಬೈ ಯಕ್ಷೋತ್ಸವ-2025’ ದಶಮಾನೋತ್ಸವ ಸಂಭ್ರಮ – ಆಮಂತ್ರಣ ಪತ್ರಿಕೆ, ಟಿಕೆಟ್‌ ಬಿಡುಗಡೆ

Public TV
By Public TV
3 hours ago
Karnataka Rain
Bengaluru City

ರಾಜ್ಯದ ಹಲವೆಡೆ ವರುಣನ ಆರ್ಭಟ – ಮಳೆಗೆ 7 ಮಂದಿ ಬಲಿ, ಮನೆಗಳಿಗೆ ನುಗ್ಗಿದ ನೀರು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?