Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ: ಅಮಿತ್‌ ಶಾ

Public TV
Last updated: December 31, 2022 6:17 pm
Public TV
Share
3 Min Read
amit shah 2
SHARE

– ಮೊದಲ ಬಾರಿಗೆ ಬಹಿರಂಗವಾಗಿ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ
-ಬಿಜೆಪಿ ಏಕಾಂಗಿಯಾಗಿಯೇ ಅಧಿಕಾರಕ್ಕೆ ಬರಲಿದೆ

ಬೆಂಗಳೂರು: ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಕಿಡಿಕಾರಿದರು.

Contents
– ಮೊದಲ ಬಾರಿಗೆ ಬಹಿರಂಗವಾಗಿ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ -ಬಿಜೆಪಿ ಏಕಾಂಗಿಯಾಗಿಯೇ ಅಧಿಕಾರಕ್ಕೆ ಬರಲಿದೆLive Tv

ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ವೋಟ್ ಹಾಕಿದ್ರೆ ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಹೋಗಿ ಕೂರ್ತಾರೆ. ಆದರೆ ಬಿಜೆಪಿ ಪೂರ್ಣ ಬಹುಮತದೊಂದಿಗೆ 5 ವರ್ಷ ಆಡಳಿತ ನಡೆಸುವ ಮೂಲಕ ಭ್ರಷ್ಟಾಚಾರ ರಹಿತ, ಪರಿವಾರ ರಹಿತವಾದ ಆಡಳಿತ ನೀಡಲಿದೆ. ನಾವು ಯಾವ ಪಾರ್ಟಿ ಜೊತೆ ಕೈಜೋಡಿಸಲ್ಲ. ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಜೆಡಿಎಸ್ ಜೊತೆ ಸರ್ಕಾರ ಮಾಡ್ತಾರೆ ಎನ್ನುವ ಮಾತುಗಳು ಕೆಲವರು ಹೇಳ್ತಾರೆ. ಆದರೆ ಬಿಜೆಪಿ ಏಕಾಂಗಿಯಾಗಿಯೇ ಅಧಿಕಾರಕ್ಕೆ ಬರಲಿದೆ ಎಂದು ಸ್ಪಷ್ಟಪಡಿಸಿದರು.

bjp flag

ಕರ್ನಾಟಕದಲ್ಲಿ 2023ಕ್ಕೆ ಪೂರ್ಣ ಬಹುಮತದ ಬಿಜೆಪಿ (BJP) ಸರ್ಕಾರ ಬರಲಿದೆ. ಜೆಡಿಎಸ್ (JDS), ಕಾಂಗ್ರೆಸ್ (Congress) ಚುನಾವಣೆ (Election) ಹತ್ತಿರ ಬರುತ್ತಿದ್ದಂತೆ ಒಟ್ಟಿಗೆ ಕೂರುತ್ತಾರೆ. ಅವರ ಆಡಳಿತ ನೋಡಿದ್ದೀರಿ. ಯಡಿಯೂರಪ್ಪ (BS Yediyurappa) ಮತ್ತು ಬೊಮ್ಮಾಯಿ‌ (Basavaraj Bommai) ಯಶಸ್ವಿ ಆಗಿ ಸರ್ಕಾರ ನಡೆಸಿದ್ದಾರೆ. ದಕ್ಷಿಣದ ಬಿಜೆಪಿ ಎಂಟ್ರಿ ಗೇಟ್ ಕರ್ನಾಟಕದಲ್ಲಿ ಆಗಿದೆ. ದಕ್ಷಿಣದಲ್ಲಿ ಬಿಜೆಪಿಯನ್ನು ಬಲಿಷ್ಠ ಮಾಡಬೇಕಿದೆ. ಇದಕ್ಕಾಗಿ ಬೆಂಗಳೂರಲ್ಲಿ (Bengaluru) 20ಕ್ಕೂ ಹೆಚ್ಚು ಸೀಟ್ ಗೆಲ್ಲಬೇಕು. ಆ ಮೂಲಕ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಬೇಕು ಎಂದು ಮನವಿ ಮಾಡಿದರು.

JDS

ಮಂಡ್ಯದಲ್ಲಿ ನಾನು ಈ ರೀತಿ ರ‍್ಯಾಲಿ ನೋಡಿರಲಿಲ್ಲ. ಮಂಡ್ಯ, ಮೈಸೂರು ಭಾಗದಲ್ಲಿ ನಿನ್ನೆ ನಡೆದ ರ‍್ಯಾಲಿ ಅದ್ಭುತವಾಗಿ ಇತ್ತು. ಇದಕ್ಕಾಗಿ ನಾನು ಕಟೀಲ್ ಅವರನ್ನು ಅಭಿನಂದಿಸುತ್ತೇನೆ. 5 ರಾಜ್ಯಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದಿದೆ. ಗುಜರಾತ್‌ನಲ್ಲಿ ಮೋದಿ ಎಲ್ಲಾ ದಾಖಲೆ ಪುಡಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನ ಕೂಡ ಸಿಗಲಿಲ್ಲ‌. ಗುಜರಾತ್ , ಉತ್ತರಖಂಡ, ಮಣಿಪುರ್, ಗೋವಾದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಪಡೆದಿದೆ. ಕಾಂಗ್ರೆಸ್ ಹೀನಾಯವಾಗಿ ಸೋತಿದೆ ಎಂದು ಟೀಕಿಸಿದರು.

ಟ್ರಯಾಂಗಲ್ ಸ್ಪರ್ಧೆ ಎಂದು ಪ್ರತಕರ್ತರು ಹೇಳ್ತಾರೆ. ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಇಲ್ಲಿ ಟಿಪ್ಪು ಸುಲ್ತಾನ್ ಅನ್ನು ಹೀರೋ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮೊದಲ ಬಾರಿಗೆ ಬಹಿರಂಗವಾಗಿ ದೇವೇಗೌಡರ ಮೇಲೆ ವಾಗ್ದಾಳಿ ನಡೆಸಿದ ಅವರು, ನೀವು ಪ್ರಧಾನಿ ಆಗಿದ್ರಿ, ಮುಖ್ಯಮಂತ್ರಿ ಆಗಿದ್ದವರು, ಆದರೆ ರಾಜ್ಯಕ್ಕಾಗಿ ನೀವು ಏನು ಮಾಡಿಲ್ಲ. ಆದರೆ ನಾವು ಏನು ಮಾಡಿದ್ದೇವೆ ಎಂದು ನಮ್ಮ ಯುವಮೋರ್ಚಾ ಕಾರ್ಯಕರ್ತರು ನಿಮಗೆ ಹೇಳ್ತಾರೆ ಎಂದು ಚಾಟಿ ಬೀಸಿದರು.

CONGRESS 4

ಡಿಕೆಶಿ, ಸಿದ್ದರಾಮಯ್ಯ, ಹೆಚ್‌ಡಿಕೆ ಹೆಸರು ಪ್ರಸ್ತಾಪಿಸಿ ಕಿಡಿಕಾರಿದ ಅವರು, ಇವರಿಂದ, ಪಿಎಫ್‌ಐನಿಂದ ದೇಶ ರಕ್ಷಣೆ ಸಾಧ್ಯವೇ? ಇವರು ದೇಶವನ್ನು ಸುರಕ್ಷಿತವಾಗಿ ಇಡ್ತಾರೆ ಅಂತಾ ನಿರೀಕ್ಷೆ ಸಾಧ್ಯವೇ? ಇವರು ವೋಟ್ ಬ್ಯಾಂಕ್‌ಗೆ ಹೆದರುತ್ತಿದ್ದಾರೆ. ಆದರೆ ಬಿಜೆಪಿಗೆ ಆ ವೋಟ್ ಬ್ಯಾಂಕ್ ಭಯ ಇಲ್ಲ. ದೇಶದ ಸುರಕ್ಷತೆಯೇ ನಮ್ಮ ಗುರಿ ಎಂದು ತಿಳಿಸಿದರು. ಇದನ್ನೂ ಓದಿ: ಹೊಸ ವರ್ಷಾಚರಣೆ; ದಶಪಥ ಹೆದ್ದಾರಿಯ ರಾಮನಗರ- ಚನ್ನಪಟ್ಟಣ ಬೈಪಾಸ್ ಬಂದ್

ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು. ಯಾರಿಗೂ ಬಹುಮತ ಬರದಿದ್ದಲ್ಲಿ ಕುಮಾರಸ್ವಾಮಿ ಕಾಂಗ್ರೆಸ್ ತೊಡೆ ಮೇಲೆ ಹೋಗಿ ಕೂರುತ್ತಾರೆ. ಹಾಗಾಗಿ ಒಂದು ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತದ ಅಧಿಕಾರ ನೀಡಿ, ಕರ್ನಾಟಕವನ್ನು ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಜಾತಿವಾದದಿಂದ ಮುಕ್ತ ಮಾಡಲಿದ್ದೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸರ್ಕಾರಿ ಭೂಮಿ ಒತ್ತುವರಿ – ಬುಲ್ಡೋಜರ್ ಬಳಸಿ ಅಮೀರ್ ಖಾನ್ ಮನೆ ಕಾಂಪೌಂಡ್ ಧ್ವಂಸ

Live Tv
[brid partner=56869869 player=32851 video=960834 autoplay=true]

TAGGED:ಅಮಿತ್ ಶಾಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

You Might Also Like

flood threat restrictions on tourist destinations along the cauvery riverbed
Districts

ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

Public TV
By Public TV
10 minutes ago
KRS Dam cauvery water
Latest

KRS ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ – ಕಾವೇರಿ ನದಿಗೆ 29,000 ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
18 minutes ago
Young man Kills his Lover in Mandya
Crime

10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

Public TV
By Public TV
40 minutes ago
pm modi on emergency
Latest

ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ: ತುರ್ತು ಪರಿಸ್ಥಿತಿ ಕರಾಳತೆ ನೆನೆದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
1 hour ago
Jamun
Bengaluru City

ಫಸ್ಟ್‌ ಟೈಂ ಲಂಡನ್‌ಗೆ ಕರ್ನಾಟಕದ ನೇರಳೆ ಹಣ್ಣು ರಫ್ತು

Public TV
By Public TV
2 hours ago
mysuru central jail
Latest

ಕೈದಿಗಳು 6 ಸಾವಿರ ಕೊಟ್ರೆ ಕೀ ಪ್ಯಾಡ್ ಫೋನ್, 15,000ಕ್ಕೆ ಆ್ಯಂಡ್ರಾಯ್ಡ್‌ ಫೋನ್ – ಮೈಸೂರು ಕೇಂದ್ರ ಕಾರಾಗೃಹದ ಸ್ಥಿತಿ ಬಿಚ್ಚಿಟ್ಟ ಸರ್ಕಾರಿ ಸದಸ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?