ಗಾಂಧಿನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭಾನುವಾರ ಗುಜರಾತ್ನ (Gujarat) ಅಹಮದಾಬಾದ್ನಲ್ಲಿ (Ahamedabad) ‘ತಿರಂಗಾ ಯಾತ್ರೆಗೆ’ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ( ಕೂಡಾ ಉಪಸ್ಥಿತರಿದ್ದರು. ಈ ವರ್ಷ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಪ್ರತಿಯೊಬ್ಬರು ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್; ಹಾಸ್ಟೆಲ್ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್ಗೆ ಕಳಿಸ್ತಿದ್ದ ವಿದ್ಯಾರ್ಥಿನಿ
#HarGharTiranga अभियान के तहत गांधीनगर लोकसभा क्षेत्र में आयोजित तिरंगा यात्रा से लाइव… https://t.co/MoRnMU0U1V
— Amit Shah (@AmitShah) August 13, 2023
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ದೇಶಕ್ಕಾಗಿ ನಾವು ಸಾಯಲು ಸಾಧ್ಯವಿಲ್ಲ. ಆದರೆ ದೇಶಕ್ಕಾಗಿ ಬದುಕುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಅಸ್ಸಾಂನಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕಾರಕ್ಕೆ ಉಗ್ರಸಂಘಟನೆಗಳ ಕರೆ- ಪೊಲೀಸರಿಂದ ಬಿಗಿ ಭದ್ರತೆ
2022ರ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ನೆನಪಿಸಿಕೊಂಡ ಅವರು, 2022ರ ಆಗಸ್ಟ್ 15 ರಂದು ತ್ರಿವರ್ಣ ಧ್ವಜ ಹಾರಿಸದ ಮನೆ ಇಲ್ಲ. ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಇಡೀ ರಾಷ್ಟ್ರವು ತಿರಂಗಮಯವಾಗುತ್ತದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಪ್ರಧಾನಿ ಮೋದಿಯವರು (Narendra Modi) ಇಡೀ ರಾಷ್ಟ್ರದಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬಲು ಪ್ರಯತ್ನಿಸಿದರು ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ವಿರುದ್ಧ 50% ಕಮಿಷನ್ ಆರೋಪ – ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲು
ಇದಲ್ಲದೆ ಗುಜರಾತ್ನ ಇನ್ಸ್ಟಿಟ್ಯೂಟ್ ಆಫ್ ಹೌಸಿಂಗ್ ಮತ್ತು ಎಸ್ಟೇಟ್ ಡೆವಲಪರ್ಸ್ ಆಯೋಜಿಸಿದ ಸಾಮೂಹಿಕ ಮರ ನೆಡುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಿದರು. ಇದನ್ನೂ ಓದಿ: ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್ ಗಾಂಧಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]