ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿದ `ಕಾಂತಾರ’ (Kantara Film) ಸಿನಿಮಾ ಹವಾ ಇನ್ನೂ ಮುಗಿದಿಲ್ಲ. ವಿಶ್ವಾದ್ಯಂತ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಇದೀಗ ಈ ಚಿತ್ರದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ಮಾತನಾಡಿದ್ದಾರೆ. ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಸಮಾವೇಶದಲ್ಲಿ ಪಾಲ್ಗೊಂಡ ವೇಳೆ ಅಮಿತ್ ಶಾ ಅವರು ಕಾಂತಾರ ಸಿನಿಮಾ ಬಗ್ಗೆ ಹಾಡಿ ಹೊಗಳಿದ್ದಾರೆ. ಈ ಸಿನಿಮಾ ನೋಡಿದ ಮೇಲೆ ದಕ್ಷಿಣ ಕನ್ನಡದಲ್ಲಿನ ಸಂಸ್ಕೃತಿ ಬಗ್ಗೆ ತಿಳಿಯಿತು ಎಂದು ಮಾತನಾಡಿದ್ದಾರೆ.
- Advertisement 2
ಕನ್ನಡದ `ಕಾಂತಾರ’ (Kantara) ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. 400 ಕೋಟಿ ಕಲೆಕ್ಷನ್ ಮಾಡಿ ಹಿಸ್ಟರಿ ಕ್ರಿಯೇಟ್ ಮಾಡಿದೆ. ಪರಭಾಷಿಕರು `ಕಾಂತಾರ’ ಚಿತ್ರ ನೋಡಿ ಭೇಷ್ ಎಂದಿದ್ದು ಆಗಿದೆ. ಹೀಗಿರುವಾಗ ಕ್ಯಾಂಪ್ಕೋ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಂಡ ಅಮಿತ್ ಶಾ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Advertisement 3
- Advertisement 4
ಪುತ್ತೂರು ಇದು ಪವಿತ್ರ ಭೂಮಿಯಾಗಿದೆ. ಪರಶುರಾಮ ಸೃಷ್ಟಿಯ ನಾಡು ಎಂದೇ ವಿಶ್ವದಲ್ಲಿ ಪ್ರಸಿದ್ಧಿಯಾಗಿದೆ. ಧಾರ್ಮಿಕ ಪರಂಪರೆ, ಸಾಂಸ್ಕೃತಿಕ ಪರಂಪರೆ ಈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸುಹೊಕ್ಕಿದೆ. ಈಗಷ್ಟೇ ನಾನು `ಕಾಂತಾರ’ ನೋಡಿದೆ. ದಕ್ಷಿಣ ಕನ್ನಡದಲ್ಲಿನ ಸಂಸ್ಕೃತಿ ಯಾವ ರೀತಿ ಮೇಳೈಸಿದೆ ಅನ್ನೋದು ತಿಳಿಯಿತು ಎಂದು ಅಮಿತ್ ಶಾ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ
ಇನ್ನೂ `ಕಾಂತಾರ’ ಸಕ್ಸಸ್ ನಂತರ ಚಿತ್ರದ ಪ್ರೀಕ್ವೆಲ್ಗೆ ರಿಷಬ್ ಶೆಟ್ಟಿ ಅವರು ಸಕಲ ಸಿದ್ಧತೆ ಮಾಡ್ತಿದ್ದಾರೆ. ಸಿನಿಮಾ ಕಥೆ ರೆಡಿ ಮಾಡ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಬಗ್ಗೆ ಅಪ್ಡೇಟ್ ಕೊಡಲಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k