– ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದ ಅಮಿತ್ ಶಾ
ರಾಯ್ಪುರ: ಛತ್ತೀಸ್ಗಢ-ತೆಲಂಗಾಣ ಗಡಿಯಲ್ಲಿ 21 ದಿನಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 31 ಉಗ್ರರನ್ನು ಭದ್ರತಾ ಪಡೆ (Security Forces) ಹೊಡೆದುರುಳಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಮುಕ್ತ ಭಾರತ ಕಾರ್ಯಾಚರಣೆಯಲ್ಲಿ ಇದು ಐತಿಹಾಸಿಕ ಸಾಧನೆ ಎಂದು ಕರೆದಿದ್ದಾರೆ. ಅಲ್ಲದೇ ಒಂದು ಕಾಲದಲ್ಲಿ ಕೆಂಪು ಉಗ್ರರಿಂದ ಆಳಲ್ಪಟ್ಟಿದ್ದ ಕರೆಗುಟ್ಟಾದಲ್ಲಿ (Karregutta Hill) ಭದ್ರತಾ ಪಡೆ ಅತಿದೊಡ್ಡ ಕಾರ್ಯಾಚರಣೆ ನಡೆಸಿದ್ದು, ಈಗ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸಬಹುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಕ್ಗೆ ಮತ್ತೆ ಶಾಕ್ – ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ
ಕರೆಗುಟ್ಟಾ ಬೆಟ್ಟವು PLGA ಬೆಟಾಲಿಯನ್ 1, DKSZC, TSC ಮತ್ತು CRC ನಂತಹ ಪ್ರಮುಖ ನಕ್ಸಲ್ ಸಂಘಟನೆಗಳ ಪ್ರಧಾನ ಕಚೇರಿಯಾಗಿತ್ತು. ಅಲ್ಲಿ ನಕ್ಸಲ್ ತರಬೇತಿ, ತಂತ್ರ ಮತ್ತು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲಾಗುತ್ತಿತ್ತು. ಕೇವಲ 21 ದಿನಗಳಲ್ಲಿ ಪೂರ್ಣಗೊಂಡ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್ಐಆರ್ಗೆ ಸೂಚನೆ
#NaxalFreeBharat के संकल्प में एक ऐतिहासिक सफलता प्राप्त करते हुए सुरक्षा बलों ने नक्सलवाद के विरुद्ध अब तक के सबसे बड़े ऑपरेशन में छत्तीसगढ़-तेलंगाना सीमा के कुर्रगुट्टालू पहाड़ (KGH) पर 31 कुख्यात नक्सलियों को मार गिराया।
जिस पहाड़ पर कभी लाल आतंक का राज था, वहाँ आज शान से…
— Amit Shah (@AmitShah) May 14, 2025
ಎಕ್ಸ್ನಲ್ಲಿ ಏನಿದೆ?
ಪ್ರತಿಕೂಲ ಹವಾಮಾನ ಮತ್ತು ಸವಾಲಿನ ಗುಡ್ಡಗಾಡು ಪ್ರದೇಶದ ಹೊರತಾಗಿಯೂ ಧೈರ್ಯ ಮತ್ತು ಶೌರ್ಯದಿಂದ ನಕ್ಸಲರನ್ನು ಎದುರಿಸಿದ ಧೈರ್ಯಶಾಲಿ CRPF, STF, and DRG ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ. ಇಡೀ ರಾಷ್ಟ್ರವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಮುಂದಿನ ವರ್ಷ ಮಾರ್ಚ್ 31ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ನಕ್ಸಲ್ ಮುಕ್ತವಾಗಲಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ವರುಣನ ಆರ್ಭಟ – ಲಕ್ಷಾಂತರ ರೂ.ಮೌಲ್ಯದ ಭತ್ತ ನಾಶ
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ, ಭಯೋತ್ಪಾದನೆಯನ್ನು ಅದರ ಬೇರು ಸಮೇತ ನಿರ್ಮೂಲನೆ ಮಾಡಲು ನಾವು ಬದ್ಧರಾಗಿದ್ದೇವೆ. 2026ರ ಮಾರ್ಚ್ 31ರ ವೇಳೆಗೆ ನಕ್ಸಲ್ ಮುಕ್ತ ಭಾರತ ಖಚಿತ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: Boycott Turkey – ಸೇಬು, ಚೆರ್ರಿ, ಮಾರ್ಬಲ್ಗಳ ಆಮದು ಬ್ಯಾನ್ಗೆ ನಿರ್ಧಾರ
ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಮಾಣದ ಮದ್ದುಗುಂಡುಗಳು, ಡಿಟೋನೇಟರ್ಗಳು ಮತ್ತು ಸ್ಫೋಟಕ ಸಾಧನಗಳು, ಔಷಧ ಮತ್ತು ವಿದ್ಯುತ್ ಉಪಕರಣಗಳಂತಹ 12,000 ಕೆಜಿ ಇತರ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ 450 ಐಇಡಿಗಳು ಮತ್ತು 40 ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೈದ 31 ಉಗ್ರರ ಪೈಕಿ 28 ಮಂದಿಯನ್ನು ಗುರುತಿಸಲಾಗಿದೆ ಎಂದು ಸಿಆರ್ಪಿಎಫ್ ಮುಖ್ಯಸ್ಥ ಜನರಲ್ ಜಿಪಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ಲೀಸ್ ನೀರು ಹರಿಸಿ – ಸಿಂಧೂ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕ್ ಪತ್ರ