ಕಲ್ಲಿದ್ದಲು ಗಣಿಗಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆ: ಅಮಿತಾಭ್ ಬಚ್ಚನ್

Public TV
1 Min Read
Amitabh bachchan 1

ಮುಂಬೈ: ಬಾಲಿವುಡ್ ಬಿಗ್‍ಬಿ ಅಮಿತಾಭ್ ಬಚ್ಚನ್ ಸಿನಿಮಾ ರಂಗಕ್ಕೆ ಬರುವ ಮೊದಲು ತಾವು ಗಣಿಗಾರಿಕೆ ಕೆಲಸವನ್ನು ಮಾಡುತ್ತಿದ್ದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

amitabh

1979ರಲ್ಲಿ ಕಾಲಾ ಪತ್ಥರ್ ಸಿನಿಮಾ ರಿಲೀಸ್ ಆಗಿತ್ತು. ಈ ಸಿನಿಮಾ ತೆರೆ ಕಂಡು 45 ವರ್ಷಗಳಾಗಿವೆ. ಒಂದು ಘಟನೆಯನ್ನು ನೆನಪಿಸಿಕೊಳ್ಳುವ ಮೂಲಕವಾಗಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ಅಮಿತಾಭ್ ನಿವೃತ್ತ ನೌಕಾ ಪಡೆಯ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ಹಳೆಯದ್ದನ್ನು ಮರೆಯಲು ಗಣಿಯಲ್ಲಿ ಅವರು ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಈ ಪಾತ್ರ ಅಮಿತಾಭ್‍ಗೆ ಹೆಚ್ಚು ಕನೆಕ್ಟ್ ಆಗಿತ್ತು. 1962ರಲ್ಲಿ ಕೋಲ್ಕತ್ತಾದಲ್ಲಿ ಕಲ್ಲುಗಣಿಯಲ್ಲಿ ಕೆಲಸ ಮಾಡಿದ್ದರು ಅಮಿತಾಭ್. 7-8 ವರ್ಷಗಳ ಕಾಲ ಅವರು ಅಲ್ಲಿಯೇ ಶ್ರಮಿಸಿದ್ದರು. ಅನೇಕ ಸಂದರ್ಶನದಲ್ಲಿ ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ಕಾರಣಕ್ಕೆ ಅವರಿಗೆ ಕಾಲಾ ಪತ್ಥರ್ ಪಾತ್ರ ಹೆಚ್ಚು ಆಪ್ತವಾಗಿದೆ.

ಸಿನಿಮಾದಲ್ಲಿನ ಸಾಕಷ್ಟು ಘಟನೆಗಳು ನನ್ನ ಜೀವನಕ್ಕೆ ಕನೆಕ್ಟ್ ಆಗಿದೆ. ನಾನು ಕೋಲ್ಕತ್ತಾ ಕಲ್ಲಿದ್ದಲು ಗಣಿಗಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆ. ಸಿನಿಮಾಗೆ ಸೇರುವುದಕ್ಕೂ ಮೊದಲು ಧನ್‍ಬಾದ್ ಹಾಗೂ ಅಸನ್‍ಸೋಲ್‍ಗಣಿಯಲ್ಲಿ ನಾನು ದುಡಿಯುತ್ತಿದ್ದೆ ಎಂದು ಅಮಿತಾಭ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಿಮ್ಮನ್ನು ಮದುವೆಯಾಗುತ್ತೇನೆ ಎಂದ ಅಭಿಮಾನಿಗೆ ಖುಷ್ಬೂ ಉತ್ತರ

amitabh bachchan

 

ಕಾಲಾ ಪತ್ಥರ್ ಹಿಂದಿ ಸಿನಿಮಾ ಚಿತ್ರರಂಗದಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಅಮಿತಾಭ್ ವೃತ್ತಿ ಜೀವನದಲ್ಲಿ ಈ ಸಿನಿಮಾ ಪ್ರಮುಖ ಎನಿಸಿಕೊಂಡಿದೆ. ಅಮಿತಾಭ್ ಅವರು 1969ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಸಾತ್ ಹಿಂದೂಸ್ತಾನಿ ಅವರ ಮೊದಲ ಸಿನಿಮಾ. ಈ ಹಿಂದೆ ಖಾಸಗಿವಾಹಿನಿಯ ಕಾರ್ಯಕ್ರಮದಲ್ಲಿ ತಾವು ಗಣಿಯಲ್ಲಿ ಕೆಲಸ ಮಾಡಿದ ವಿಚಾರವನ್ನು ನೆನಪಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *